Vegetable price: ಬರ; ಗ್ರಾಹಕರ ಕೈ ಸುಡುತ್ತಿದೆ ತರಕಾರಿ ಬೆಲೆ!


Team Udayavani, Oct 10, 2023, 3:51 PM IST

TDY-15

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವಾರದಿಂದ ತರಕಾರಿ ಬೆಲೆ ಗಗನಮುಖಿ ಆಗುತ್ತಿದ್ದು, ಬೆಲೆ ಏರಿಕೆ ಬಿಸಿಗೆ ಗ್ರಾಹಕರನ್ನ ಕಂಗಾಲಾಗುವಂತೆ ಮಾಡಿದೆ. ಬರದ ಪರಿಣಾಮ ಜಿಲ್ಲಾದ್ಯಂತ ತರಕಾರಿಗಳ ಉತ್ಪಾದನೆ ಯಲ್ಲಿ ಭಾರೀ ಇಳಿಮುಖ ಕಂಡಿದ್ದು ಬೆಲೆ ಏರು ಮುಖವಾಗಲು ಕಾರಣವಾಗಿದೆ.

ಜಿಲ್ಲಾದ್ಯಂತ ವಾಡಿಕೆ ಮಳೆ ಶೇ.85 ರಷ್ಟು ಕೊರತೆ ಆಗಿರುವ ಪರಿಣಾಮ ರಾಗಿ, ಶೇಂಗಾ, ತೊಗರಿ, ಅಲಸಂದಿ, ಅವರೆ, ಜೋಳ ಮತ್ತಿತರ ಕೃಷಿ ಬೆಳೆಗಳು ಸಂಪೂರ್ಣ ಶೇ.90ರಷ್ಟು ಹಾನಿಯಾಗಿವೆ. ಇದೀಗ ಜಿಲ್ಲೆಯಲ್ಲಿ ತರಕಾರಿ ಬೆಳೆಗಳಿಗೂ ಕೂಡ ಬರ ತಟ್ಟಿದ್ದು ಸದ್ದಿಲ್ಲದೇ ಏರಿಕೆ ಆಗುತ್ತಿರುವ ತರಕಾರಿ ಬೆಲೆ ಗ್ರಾಹಕರ ಕೈ ಸುಡುತ್ತಿದೆ.

ತರಕಾರಿ ಉತ್ಪಾದನೆ ಕುಸಿತ: ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಳೆಗಾಲದಲ್ಲಿ ತರಕಾರಿ ಬೆಲೆ ಏರಿಕೆ ಆಗುವುದು ಅಪರೂಪ, ಏಕೆಂದರೆ ಮಳೆಗಾಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ರೈತರು ತರಕಾರಿ ಬೆಳೆಯುತ್ತಾರೆ. ಜೊತೆಗೆ ರೈತರು ತಮ್ಮ ಹೊಲ ಗದ್ದೆಗಳಲ್ಲಿ ಕೂಡ ಮನೆಗೆ ಬೇಕಾದ ತರಕಾರಿ ಬೆಳೆಗಳನ್ನು ಬಿತ್ತನೆ ಮಾಡಿ ಬೆಳೆಯುತ್ತಾರೆ. ಇದರಿಂದ ಮಳೆಗಾಲದಲ್ಲಿ ತರಕಾರಿ ಗ್ರಾಹಕರ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಆದರೆ ಪರಿಸ್ಥಿತಿ ಈಗ ಸಂಪೂರ್ಣ ವಿರುದ್ಧವಾಗಿದ್ದು, ಮಳೆ ಕೊರತೆ ಪರಿಣಾಮ ಜಿಲ್ಲೆಯಲ್ಲಿ ತರಕಾರಿ ಉತ್ಪಾದನೆಯಲ್ಲಿ ತೀವ್ರ ಕುಸಿತದ ಪರಿಣಾಮ ಮಾರುಕಟ್ಟೆಯಲ್ಲಿ ಬೀನ್ಸ್‌, ಆಲೂಗಡ್ಡೆ, ಮೂಲಂಗಿ, ಕ್ಯಾರೆಂಟ್‌, ಹಾಗಲಕಾಯಿ, ಹಸಿ ಮೆಣಸಿಣಕಾಯಿ ಬೆಲೆ ಮತ್ತೆ ಗಗನಮುಖೀಯಾಗಿದ್ದು ಕೆಜಿ 40, 50 ರೂ. ಅಸುಪಾಸಿಗೆ ಬಂದು ನಿಂತಿದೆ. ಸದ್ಯ ಮಾರುಕಟ್ಟೆಯಲ್ಲಿ ಟೊಮೇಟೊ ಮಾತ್ರ ಕೆಜಿ 10 ರೂ. ಸಿಗುತ್ತಿರುವುದು ಬಿಟ್ಟರೆ, ಉಳಿದೆಲ್ಲಾ ತರಕಾರಿ ಬೆಳೆಗಳು ತನ್ನ ಬೆಲೆ ಹೆಚ್ಚಿಸಿಕೊಂಡು ಗ್ರಾಹಕರನ್ನು ಚಿಂತೆಗೀಡು ಮಾಡಿದ್ದು, ತರಕಾರಿ ದರ ಸಮರಕ್ಕೆ ಈಗ ಅಕ್ಕಿ, ಬೇಳೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಹೋಟೆಲ್‌ ಮಾಲೀಕರು ಕಂಗಾಲಾಗಿದ್ದಾರೆ.

ಕೊತ್ತಂಬರಿ ಸೊಪ್ಪು ಕಟ್ಟು 200 ರೂ.: ಮಾರುಕಟ್ಟೆಯಲ್ಲಿ ತರಕಾರಿ ಬೆಳೆಗಳ ಬೆಲೆಗಿಂತ ವಿವಿಧ ಸೊಪ್ಪುಗಳ ಬೆಲೆ ಕೂಡ ದುಪ್ಪಟ್ಟುಗೊಂಡಿದೆ. ದಂಟು, ಪಾಲಾಕ್‌, ಮಿಂತ್ಯೆ, ಅರವೆ, ಸಬ್ಬಕ್ಕಿ ಮತ್ತಿತರ ಸೊಪ್ಪುಗಳ ಬೆಲೆ ಕಟ್ಟು 25 ರಿಂದ 30ರ ರುಗೆ ಮಾರಾಟವಾಗುತ್ತಿವೆ. ಕೊತ್ತಂಬರಿ ಸೊಪ್ಪ ಕಟ್ಟು ಸದಸ್ಯ 200 ರೂ. ಗಡಿ ದಾಟಿದೆ. ತರಕಾರಿ ಬೆಲೆ ಹೆಚ್ಚಾಗಿದೆಯೆಂದು ಸೊಪ್ಪು ಖರೀದಿ ಮಾಡುವರಿಗೂ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಮಾರುಕಟ್ಟೆಗೆ ಬೇಡಿಕೆಗೆ ತಕ್ಕಂತೆ ತರಕಾರಿ ಬರುತ್ತಿಲ್ಲ ಎನ್ನುವ ಮಾತು ತರಕಾರಿ ಮಾರುವ ಚಿಲ್ಲರೆ ವ್ಯಾಪಾರಸ್ಥರಿಂದ ಕೇಳಿ ಬರುತ್ತಿದೆ. ಇದರಿಂದ ತರಕಾರಿ ಬೆಲೆ ವಾರದಿಂದ ಗಗನಮುಖೀಯಾಗಿ ಗ್ರಾಹಕರನ್ನು ಕಂಗಾಲಾಗಿಸಿದೆ. ಕೆಜಿ ಶುಂಠಿ 250, ಈರುಳ್ಳಿ 40 ರೂ. ಕೆಜಿ: ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನಲೆಯಲ್ಲಿ ಬರ ಆವರಿಸಿರುವ ಪರಿಣಾಮ ಮಾರುಕಟ್ಟೆಯಲ್ಲಿ ಮತ್ತೆ ಶುಂಠಿ ಬೆಲೆ ಗಗನಕ್ಕೇರುತ್ತಿದೆ. ತಿಂಗಳ ಹಿಂದೆ 300ರಿಂದ 350 ರೂ. ಗಡಿ ದಾಟಿದ್ದ ಶುಂಠಿ ಕೆಜಿ ಹಲವು ದಿನಗಳ ಹಿಂದೆ ಕುಸಿದಿತ್ತು. ಈಗ ಮತ್ತೆ ಶುಂಠಿ ಬೆಲೆ ಏರಿಕೆ ತೊಡಗಿದೆ. ಗುಣಮಟ್ಟದ ಶುಂಠಿ ಮಾರುಕಟ್ಟೆಗೆ ಬರುತ್ತಿಲ್ಲ. ಇರುವ ಶುಂಠಿ ಬೆಲೆಯೆ ಕೆಜಿ 250 ರೂಗೆ ಮಾರಾಟ ಆಗುತ್ತಿದೆ. ಇನ್ನೂ ಈರುಳ್ಳಿ ಬೆಲೆ ಕೂಡ ಕೆಜಿ 40 ರೂಗೆ ಮಾರಾಟ ಆಗುತ್ತಿದೆ. 25 ರಿಂದ 30 ರೂ. ಅಸುಪಾಸಿನಲ್ಲಿದ್ದ ಈರುಳ್ಳಿ ಮತ್ತೆ ಬೆಲೆ ಹೆಚ್ಚಿಸಿಕೊಂಡು ಗ್ರಾಹಕರಲ್ಲಿ ಕಣ್ಣೀರು ತರಿಸುತ್ತಿದೆ. ಬೆಳ್ಳುಳ್ಳಿ ಸದ್ಯ ಮಾರುಕಟ್ಟೆಯಲ್ಲಿ ಕೆಜಿ 200 ರೂ. ಇದೆ.

ಬೆಳೆಗ್ಗೆ 5 ಗಂಟೆಗೆ ಮಾರುಕಟ್ಟೆಗೆ ಹೋದರೆ ಮಾತ್ರ ಖರೀದಿಗೆ ತರಕಾರಿ ಸಿಗುತ್ತೆ, ಸ್ವಲ್ಪ ತಡವಾದರೂ ತರಕಾರಿ ಸಿಗುತ್ತಿಲ್ಲ. ಮಳೆ ಕೊರತೆಯಿಂದ ತರಕಾರಿ ಮಾರುಕಟ್ಟೆಗೆ ಬರುತ್ತಿಲ್ಲ. ಟೊಮೇಟೊ ಬಿಟ್ಟರೆ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಸೇರಿದಂತೆ ಸೊಪ್ಪು, ತರಕಾರಿ ಬೆಳೆಗಳು ಏರಿಕೆ ಆಗುತ್ತಿವೆ. – ಶ್ರೀನಾಥ್‌, ತರಕಾರಿ ವ್ಯಾಪಾರಿ, ಚಿಕ್ಕಬಳ್ಳಾಪುರ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.