ಮಾನವ ಜೀವ ಉಳಿಬೇಕಾದರೆ ಪರಿಸರ ಅಗತ್ಯ


Team Udayavani, Jun 6, 2019, 3:20 PM IST

Udayavani Kannada Newspaper

ಚಿಂತಾಮಣಿ: ತಾಲೂಕಿನ ಜಂಗಮಶೀಗೆಹಳ್ಳಿ ಗ್ರಾಮದಲ್ಲಿ ಜೆಎಂಡಿ ಚಾರಿಟಬಲ್ ಟ್ರಸ್ಟ್‌ ಮತ್ತು ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ 3ನೇ ವರ್ಷದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.

ಮೂವತ್ತು ವರ್ಷಗಳ ಹಿಂದೆ ಎಲ್ಲಿ ನೋಡಿದರೂ ದಟ್ಟವಾದ ಕಾಡು ಇತ್ತು. ಬಾವಿಗಳಲ್ಲಿ ಯಥೇಚ್ಛವಾದ ನೀರು ಸಿಗುತ್ತಿತ್ತು. ಸುತ್ತಲಿನ ಪರಿಸರವನ್ನು ಜೋಪಾನವಾಗಿ ನೋಡಿಕೊಳ್ಳುತ್ತಿದ್ದರು. ಬಿಡುವಿನ ವೇಳೆಯಲ್ಲಿ ನೀರನ್ನು ಹಾಕಿ ಮರಗಳನ್ನು ಪೋಷಣೆ ಮಾಡುತ್ತಿದ್ದರು. ಕುಂಟೆಗಳ ನೀರನ್ನು ಬಳಸಿ ತೋಪುಗಳನ್ನು ನಿರ್ಮಿಸಿದ್ದರು. ಆದರೆ ನಮ್ಮೂರಿನ ಹಲವು ಹಳೆಯ ಮರಗಳು ಇಂದು ಕಾಣುತ್ತಿಲ್ಲ. ಇದಕ್ಕೆ ಕಾರಣ ನಮ್ಮ ಜೀವನ ಶೈಲಿಯಲ್ಲಿನ ಬದಲಾವಣೆ. ಪ್ರತಿಯೊಬ್ಬರೂ ಮರಗಳನ್ನು ಬೆಳೆಸುವ ಅನಿವಾರ್ಯತೆ ಇದೆ.

ಉಳಿಮೆ ಮಾಡುವ ಉದ್ದೇಶದಿಂದ ಕಾಡನ್ನು ಕಡಿದು ನಾಶ ಮಾಡಲಾಗಿದೆ. ಅಂರ್ತಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. ಇಂತಹ ಸನ್ನಿವೇಶದಲ್ಲಿ ಪ್ರತಿದಿನವೂ ಮರಗಳನ್ನು ನೆಟ್ಟು ಬೆಳೆಸಬೇಕಾಗಿದೆ. ಇಲ್ಲವಾದರೆ ನಾವೂ ಉಳಿಯುವುದು ಕಷ್ಟ ಎಂದರು.

ಹಿರಿಯ ಮುಖಂಡ ನಂಜುಂಡಸ್ವಾಮಿ ಮಾತನಾಡಿ, ಗಿಡ ನೆಡುವ ಕಾರ್ಯ ಪ್ರತಿಯೊಬ್ಬರ ಜೀವನದ ಭಾಗವಾಗಬೇಕು. ಮನೆತನದ ಹೆಸರನ್ನು ಹೇಳುವ 80 ವರ್ಷದ ಮರಗಳಿದ್ದವು. ಈ ರೀತಿಯ ಮರಗಳು ಇಂದಿಲ್ಲ. ಹಿರಿಯರ ಪರಿಸರ ಪ್ರೇಮ ನಮಗೆ ಬೇಕಾಗಿದೆ. ಇಂದಿನ ಯುವ ಪೀಳಿಗೆಗೆ ಜೀವನಕ್ಕೆ ಅವಶ್ಯಕವಿಲ್ಲದ ಅಂಶಗಳು ಆದರ್ಶವಾಗುತ್ತವೆ. ಆದರೆ ಮರಗಳು ನೆಡುವ ಮತ್ತು ದೇವರಂತೆ ಅವುಗಳನ್ನು ಗೌರವಿಸುವ ಆದರ್ಶಗಳನ್ನು ಅವರಲ್ಲಿ ಬಿತ್ತಬೇಕು. ಮಾನವನಿಗೆ ಜೀವ ತುಂಬುವ ಮರಗಳನ್ನು ಜೀವನದ ಕಾಯಕವನ್ನಾಗಿ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಅರ್ತಜಲವನ್ನು ಹೆಚ್ಚು ಬಳಸುತ್ತಿರುವ ಪರಿಣಾಮವಾಗಿ ಬಿಸಿಲಿನ ತಾಪ ಹೆಚ್ಚಾ ಗಿದೆ. ತಂಪಾದ ಗಾಳಿಯ ಬದಲಾಗಿ ಬಿಸಿ ಗಾಳಿಯನ್ನು ಸೇವಿಸುವ ಸನ್ನಿವೇಶ ಉಂಟಾಗಿದೆ. ದಿನೇ ದಿನೆ ಭೂ ತಾಪ ಮಾನ ಹೆಚ್ಚಾಗುತ್ತಿದೆ. ಮನುಷ್ಯನೊಂದಿ ಗೆ ಪ್ರಾಣಿಗಳು ನೀರಿಗಾಗಿ ಪರದಾಡು ತ್ತಿದ್ದಾರೆ. ಕಾಡಿನಲ್ಲಿ ಜೀವಿಸಬೇಕಾದ ಪ್ರಾಣಿಗಳು ಮುಖ್ಯವಾಗಿ ಮಂಗಗಳು ನಾಡಿಗೆ ಬಂದು ಮನುಷ್ಯನ ಬದುಕಿಗೆ ಸವಾಲಾಗಿವೆ. ಹೀಗೆ ಮುಂದುವರೆದರೆ ಮನುಷ್ಯ ತನ್ನ ಜೀವ ಉಳಿಸಿಕೊಳ್ಳಲು ನೀರಿನ ಯುದ್ಧ ಮಾಡಬೇಕಾಗುತ್ತದೆ. ದುಸ್ಥಿತಿ ಯಿಂದ ಹೊರ ಬರಲು ಕಾಡನ್ನು ಬೆಳೆಸುವುದೇ ಪರಿಹಾರ ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.