![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 21, 2020, 6:10 AM IST
ಚಿಂತಾಮಣಿ: ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದು ನೀರು ಬರಲು ಇನ್ನೆರಡು ವರ್ಷ ಬೇಕಾಗುತ್ತದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ತಾಲೂಕಿನ ಕುರಟಹಳ್ಳಿ ಮತ್ತು ದಂಡಯಪಾಳ್ಯ ಕೆರೆಗಳ ಬಳಿಯ ಕೆ.ಸಿ.ವ್ಯಾಲಿ ನೀರು ಹರಿಸುವ ಸ್ಥಳಗಳನ್ನು ವೀಕ್ಷಿಸಿ ಮಾತನಾಡಿ, ಕೆ.ಸಿ. ವ್ಯಾಲಿ ನೀರು ಹರಿಯುತ್ತಿರುವ ಕೆರೆಗಳ ದುಸ್ಥಿತಿ ಬಹಳ ಹದಗೆಟ್ಟಿದೆ.
ಸಚಿವ, ಸಂಸದರು, ಸೇರಿದಂತೆ ಎಲ್ಲಾ ಶಾಸಕರ, ಅಧಿಕಾರಿಗಳ ಜೊತೆ ಸಭೆ ನಡೆಸಿ ಕೆರೆಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗುವುದೆಂದರು. ಇನ್ನು ಅಧಿಕೃತವಾಗಿ ರಾಜ್ಯದಲ್ಲೇ ವಾಸವಾಗಿರುವ ರಾಜ್ಯ ನಿವಾಸಿಗಳಲ್ಲಿ ಕೊರೊನಾ ಕಂಡು ಬರುತ್ತಿಲ್ಲ. ಬದಲಾಗಿ ಹೊರಗಿನ ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ಕೇರಳ ರಾಜ್ಯಗಳಲ್ಲಿ ವಾಸವಿದ್ದು ರಾಜ್ಯಕ್ಕೆ ಬರುತ್ತಿರುವರಲ್ಲೇ ಹೆಚ್ಚಾಗಿ ಕಂಡು ಬರುತ್ತಿದ್ದು ಕಠಿಣ ಕ್ರಮ ಕೈಗೊಳ್ಳ ಲಾಗುವುದೆಂದು ತಿಳಿಸಿದರು.
ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದರೂ ಲೆಕ್ಕಿಸದ ಸಚಿವ ಹಾಗೂ ಕ್ಷೇತ್ರದ ಶಾಸಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ತಾಲೂಕಿನ ಕುರಟಹಳ್ಳಿ ಮತ್ತು ದಂಡಯಪಾಳ್ಯ ಕೆರೆಗಳ ಬಳಿಯ ಕೆ.ಸಿ.ವ್ಯಾಲಿ ನೀರಿನ ಡಿಸಿ ಪಾಯಿಂಟ್ಗಳನ್ನು ಪರಿಶೀಲಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು. ಪರಿಶೀಲನೆ ವೇಳೆ ಕಾನೂನು ಸಚವರಾದ ಜೆ.ಸಿ.ಮಾಧು ಸ್ವಾಮಿ, ಕೋಲಾರ ಸಂಸದ ಎಸ್.ಮುನಿಸ್ವಾಮಿ ಹಾಗೂ ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ,
ವಿಧಾನಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ತೂಪಲ್ಲಿ ಚೌಡರೆಡ್ಡಿ ಸಾಮಾಜಿಕ ಅಂತರ ಸಾಮಾಜಿಕ ಅಂತರ ಮರೆತಿ ದ್ದರು. ಇದೇ ವೇಳೆ ಕುರುಟಹಳ್ಳಿ ಕೆರೆ ಕಟ್ಟೆ ದುಸ್ಥಿತಿ ಬಗ್ಗೆ ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಕುರುಟಹಳ್ಳಿ ಡಾಬಾ ಮಂಜುನಾಥ, ಸಚಿವ ಮಾಧುಸ್ವಾಮಿ ಅವರಿಗೆ ಮನವರಿಕೆ ಮಾಡಿದರು. ರೈತ ಮುಖಂಡ ಸೀಕಲ್ ರವಣಾರೆಡ್ಡಿ ನೇತೃತ್ವದಲ್ಲಿ ಹಲವು ರೈತ ಮುಖಂಡರು ಕುರುಟಹಳ್ಳಿ ಕೆರೆ ದುರಸ್ತಿಗೆ ಮನವಿ ಮಾಡಿದರು. ಜೆಡಿಎಸ್ ಮತ್ತು ಬಿಜೆಪಿ, ಎಂ.ಸಿ.ಸುಧಾಕರ್ ಬೆಂಬಲಿಗರು ಉಪಸ್ಥಿತರಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.