ರೈತರ ಬೆಳೆಗೆ ಕಾನೂನು ಚೌಕಟ್ಟಿನಲ್ಲಿ ಬೆಲೆ ಸಿಗಲಿ


Team Udayavani, Dec 24, 2019, 3:00 AM IST

raitara-ka

ಚಿಕ್ಕಬಳ್ಳಾಪುರ: ದೇಶ ಕಾಯುವ ಸೈನಿಕರಿಗೆ ಸಿಗುವ ಗೌರವ, ಸೌಲಭ್ಯಗಳು ಇಂದು ದೇಶಕ್ಕೆ ಅನ್ನ ಕೊಡುವ ರೈತರಿಗೆ ಸಿಗುತ್ತಿಲ್ಲ. ರೈತರು ಉದ್ಧಾರ ಆಗಬೇಕಾದರೆ ರೈತರು ಬೆಳೆಯುವ ಬೆಳೆಗಳಿಗೆ ಕಾನೂನು ಚೌಕಟ್ಟಿನಲ್ಲಿ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ತಾಲೂಕಿನ ಬಲಜಿಗ ಪಡೆ ಕೃಷಿ ಸಂಶೋಧನಾ ಕೇಂದ್ರದ ಕೃಷಿ ವಿಜ್ಞಾನಿ ಮಂಜುಳಾ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಜಿಪಂ, ತಾಪಂ ಹಾಗೂ ಕೃಷಿ ಇಲಾಖೆ ಹಾಗೂ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ರೈತರ ದಿನಾಚರಣೆ ಹಾಗೂ ಕಿಸಾನ್‌ಗೋಷ್ಠಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ರೈತರ ಹೆಸರಿನಲ್ಲಿ ಕಂಪನಿಗಳು ಉದ್ಧಾರ ಆಗುವುದು ಬಿಟ್ಟರೆ ರೈತರ ಬೆವರಿಗೆ ಫ‌ಲ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಭದ್ರತೆ ಇಲ್ಲ: ಸಮಾಜದಲ್ಲಿ ಕೆಲಸ ಮಾಡುವ ಕಾರ್ಮಿಕರಿಂದ ಹಿಡಿದು ಸರ್ಕಾರಿ ನೌಕರರಿಗೆ ಕೆಲಸ ಸ್ಥಳದಲ್ಲಿ ಭದ್ರತೆ ಇರುತ್ತದೆ. ಆದರೆ ರೈತರಿಗೆ ಯಾವುದೇ ಭದ್ರತೆ ಇರುವುದಿಲ್ಲ. ದಿನದ 24 ಗಂಟೆ ಕಾಲ ಮಳೆ, ಗಾಳಿ, ಬಿಸಿಲು, ಚಳಿ ಎನ್ನದೇ ಕೆಲಸ ಮಾಡುವ ಸ್ಥಿತಿ ರೈತರದ್ದಾಗಿದೆ ಎಂದರು. ರೈತರಿಗೆ ಕನಿಷ್ಠ ದಿನ ಬಳಕೆ ವಸ್ತುಗಳನ್ನು ತೆರಿಗೆ ಮುಕ್ತ ಮಾಡಬಹುದಾಗಿತ್ತು. ಸರ್ಕಾರಗಳಿಂದ ಸೂಕ್ತ ಬೆಂಬಲ, ಸಹಕಾರ ನಿರೀಕ್ಷಿತ ಮಟ್ಟದಲ್ಲಿ ಸಿಗುತ್ತಿಲ್ಲ.

ರೈತರನ್ನು ಬಲಗೊಳಿಸುವ ಕಾನೂನುಗಳು ಜಾರಿಗೆ ತರುವುದು ಅಗತ್ಯ ಎಂದರು. ರೈತರ ಕಷ್ಟಸುಖಗಳ ಬಗ್ಗೆ ನಾಗರಿಕ ಸಮಾಜ ಚಿಂತನ, ಮಂಥನ ಮಾಡಬೇಕು. ರೈತರ ದಿನಾಚರಣೆಯನ್ನು ಕೇವಲ ರೈತರನ್ನು ಸೇರಿಸಿ ಆಚರಿಸುವುದರ ಬದಲು ರೈತರ ಹೊರತಾಗಿ ಸಾರ್ವಜನಿಕರನ್ನು, ವಿದ್ಯಾವಂತ ಯುವಕರನ್ನು ಸೇರಿಸಿ ಮಾಡಿದಾಗ ರೈತರ ಸಮಸ್ಯೆ, ಸವಾಲುಗಳ ಸಮಾಜಕ್ಕೆ ಅರ್ಥವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪ ಕೃಷಿ ನಿರ್ದೇಶಕಿ ಡಾ.ಅನುರೂಪ, ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಜ್ಯೋತಿ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಕೆಂಪಣ್ಣ, ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎಚ್‌.ನರಸಿಂಹಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿರಾಜು, ತಾಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜನಪ್ಪ, ಶಿಡ್ಲಘಟ್ಟ ತಾಲೂಕು ರೈತ ಸಂಘದ ಅಧ್ಯಕ್ಷ ಪಿ.ಎನ್‌.ಮಂಜುನಾಥ, ಆತ್ಮ ಯೋಜನೆಯ ಸಿಬ್ಬಂದಿ ಅರುಣಾ ಸೇರಿದಂತೆ ತಾಲೂಕಿನ ಪ್ರಗತಿಪರ ರೈತರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರೈತರಿಗೆ ಕೃಷಿ ವಸ್ತು ಪ್ರದರ್ಶನ: ರಾಷ್ಟ್ರೀಯ ರೈತ ದಿನಾಚರಣೆ ಹಾಗೂ ಕಿಸಾನ್‌ ಗೋಷ್ಠಿ ಪ್ರಯುಕ್ತ ರೈತರಿಗೆ ಸಮಗ್ರ ಕೃಷಿ ಬೇಸಾಯ ಪದ್ಧತಿಗಳ ಬಗ್ಗೆ ಹಾಗೂ ಸಾವಯುವ ಹಾಗೂ ಸಿರಿಧಾನ್ಯಗಳ ಮಹತ್ವದ ಕುರಿತು ಅರಿವು ಮೂಡಿಸುವ ಕೃಷಿ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ವಿಶೇಷವಾಗಿ ಸಿರಿಧಾನ್ಯಗಳ ಮಾರಾಟ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಕೆಲ ಪ್ರಗತಿಪರ ರೈತರನ್ನು ಕೃಷಿ ಇಲಾಖೆ ಗುರುತಿಸಿ ಸನ್ಮಾನಿಸಿತು.

ವಿದ್ಯಾವಂತರಿಂದ ಭೂಮಿಗೆ ಹಾನಿ
ಚಿಕ್ಕಬಳ್ಳಾಪುರ: ಅನಕ್ಷರಸ್ಥರಿಗಿಂತ ವಿದ್ಯಾವಂತರಿಂದಲೇ ಇಂದು ಭೂಮಿಗೆ ಹೆಚ್ಚು ತೊಂದರೆ ಆಗುತ್ತಿದೆ ಎಂದು ಜಿಲ್ಲೆಯ ಖ್ಯಾತ ಸಾವಯುವ ಕೃಷಿಕ ಮಹಿಳೆ ಗೌರವಮ್ಮ ತಿಳಿಸಿದರು. ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಆಯೋಜಿಸಿದ್ದ ಕಿಸಾನ್‌ಗೋಷ್ಠಿಯಲ್ಲಿ ಸಾವಯುವ ಕೃಷಿಯ ಮಹತ್ವದ ಕುರಿತು ಮಾತನಾಡಿದ ಅವರು, ಔಷದಿ ಮಾರುವ ಕಂಪನಿಗಳ ಕಟ್ಟಡಗಳು ವರ್ಷದಿಂದ ವರ್ಷಕ್ಕ ಬೆಳೆಯುತ್ತಲೇ ಇರುತ್ತವೆ. ಆದರೆ ಕೃಷಿ ಮಾರುವ ರೈತರ ಕಟ್ಟಡಗಳು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿವೆಯೇ? ಎಂದು ಗೌರಮ್ಮ ಪ್ರಶ್ನಿಸಿದರು.

ಕೃಷಿ ಕ್ಷೇತ್ರ ಉದ್ಧಾರ ಆಗಬೇಕಾದರೆ ಪುರುಷರಿಗಿಂತ ಮಹಿಳೆಯರು ಹೆಚ್ಚು ಶ್ರಮ ವಹಿಸಬೇಕೆಂದರು. ರಸಾಯನಿಕ ಗೊಬ್ಬರಗಳನ್ನು ಆದಷ್ಟು ಕಡಿಮೆ ಮಾಡಬೇಕು. ಹೆಚ್ಚು ಹೆಚ್ಚು ಸಾವಯುವ ಗೊಬ್ಬರ ಬಳಕೆಯಿಂದ ಇಳುವರಿ ಅಧಿಕಗೊಳ್ಳುವುದರ ಜೊತೆಗೆ ಆರೋಗ್ಯವಂತ ಬೆಳೆಗಳನ್ನು ಬೆಳೆಯಬಹುದು ಎಂದರು. ರೈತ ಮಹಿಳೆಯರು ದನಕುರುಗಳ ಸಾಕಾಣೆಗೆ ಪ್ರಾಮುಖ್ಯತೆ ಕೊಡಬೇಕು. ಇದರಿಂದ ಸಾವಯುವ ಗೊಬ್ಬರ ಸಿಗುತ್ತದೆ ಎಂದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.