ಚಿರತೆ ಮರಿ ಪ್ರತ್ಯಕ್ಷ; ಸೆರೆ ಹಿಡಿದು ಪೋಷಣೆಗೆ ಕೆರೆತಂದ ಅರಣ್ಯ ಇಲಾಖೆ
Team Udayavani, Apr 19, 2022, 7:46 PM IST
ಗುಡಿಬಂಡೆ: ಪಟ್ಟಣದ ಸುರಸದ್ಮಗಿರಿ ಬೆಟ್ಟದ ಹಿಂಭಾಗದ ಅರಣ್ಯ ಪ್ರದೇಶದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಒಂದು ವರ್ಷದ ಚಿರತೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಂರಕ್ಷಣೆ ಮಾಡಿ, ಕಚೇರಿಯಲ್ಲಿ ಸುಸೂರ್ಷೆ ಮಾಡುತ್ತಿದ್ದಾರೆ.
ಸುರಸದ್ಮಗಿರಿ ಬೆಟ್ಟದ ಹಿಂಭಾಗದ ಎರ್ರಕೊಂಡ ಅರಣ್ಯ ಸಮೀಪದಲ್ಲಿ ಚಿರತೆ ಮರಿ ಅಸ್ವಸ್ಥ ಸ್ಥಿತಿಯಲ್ಲಿ ಮುಳ್ಳು ಪೊದೆಯಲ್ಲಿ ಇರುವುದನ್ನು ಕಂಡ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಹರೀಶ್, ವಿಷಯವನ್ನು ಪತ್ರಕರ್ತರಿಗೂ ಮತ್ತು ಅರಣ್ಯ ಇಲಾಖೆಗೂ ವಿಚಾರ ಮುಟ್ಟಿಸಿದ್ದು, ತಕ್ಷಣ ಪತ್ರಕರ್ತರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಸುಮಾರು ಒಂದು ವರ್ಷದ ಚಿರತೆ ಮರಿಯನ್ನು ರಕ್ಷಿಸಿ, ಅಸ್ವಸ್ಥಗೊಂಡಿದ್ದ ಸಿಬ್ಬಂದಿಯನ್ನು ಕಚೇರಿ ತಂದು ಪೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ಕೃಷಿ ಸಚಿವರ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ಸಾಗುತ್ತಿದ್ದವರು ರಸ್ತೆ ಅಪಘಾತದಲ್ಲಿ ಸಾವು
ಚೇತರಿಕೆಯಲ್ಲಿ ಚಿರತೆ: ಮುಳ್ಳಿನ ಪೊದೆಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ಚಿರತೆಯನ್ನು ಕರೆ ತಂದ ಸಿಬ್ಬಂದಿ ಕನಕರಾಜ್ ಮತ್ತು ತಂಡ ಕಚೇರಿಯಲ್ಲಿ ಚಿರತೆ ಮರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು, ಸ್ವಲ್ಪ ಮಟ್ಟಿಗೆ ಚಿರತೆ ಚೇತರಿಕೆಗೊಂಡಿದೆ ಎಂದರು.
ಚಿರತೆ ಬೀತಿ: ಒಂದೆರಡು ತಿಂಗಳ ಹಿಂದೆ ಎಲ್ಲೋಡು ಗ್ರಾಮ ಸುತ್ತಮುತ್ತಲಿನಲ್ಲಿ ಎರಡು ಚಿರತೆಗಳು ಕುರಿ ದೊಡ್ಡಿಯ ಮೇಲೆ ದಾಳಿ ಮಾಡಿರುವ ಘಟನೆ ಮರೆ ಮಾಚುವ ಹೊತ್ತಿನಲ್ಲೇ, ಗುಡಿಬಂಡೆ ಪಟ್ಟಣದ ಸಮೀಪದಲ್ಲೇ ಚಿರತೆ ಮರಿ ಕಂಡು ಬಂದಿದ್ದು, ಅರಣ್ಯ ಸಿಬ್ಬಂದಿ ಹೇಳುವ ಪ್ರಕಾರ ಚಿರತೆಗಳು ಇನ್ನು ಅರಣ್ಯದಲ್ಲೇ ಇರಬಹುದು ಎಂದು ಸಂದೇಶ ವ್ಯಕ್ತಪಡಿಸಿದ್ದಾರೆ.
ಜಾನುವಾರು ಮೇಯಿಸುವವರಿಗೆ ಎಚ್ಚರಿಕೆ: ಪಟ್ಟಣದ ಸುರಸದ್ಮಗಿರಿ ಬೆಟ್ಟದ ಹಿಂಭಾಗದಲ್ಲಿ ಮತ್ತು ಕಣಿವೆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುರಿಗಾಹಿಗಳು ಮತ್ತು ಜಾನುವಾರು ಮೇಯಿಸುವವರು ಹೆಚ್ಚಿಗೆ ಹೋಗುತ್ತಿದ್ದು, ಈ ಪ್ರದೇಶದಲ್ಲಿ ಚಿರತೆಗಳು ಓಡಾಡುತ್ತಿರುವುದು ಕಂಡು ಬಂದಿದ್ದು, ಕುರಿಗಾಹಿಗಳು ಮತ್ತು ಜಾನುವಾರು ಮೇಯಿಸುವವರು ಹೆಚ್ಚರಿಕೆಯಿಂದ ಇರಬೇಕೆಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್ ಪರದಾಟ!
Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ
Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.