ಕೈ ಸರ್ಕಾರದಲ್ಲಿ ಈಡೇರುತ್ತಾ ಜಿಲ್ಲಾ ಗೆಜೆಟಿಯರ್‌ ಕನಸು!


Team Udayavani, Jul 18, 2023, 3:52 PM IST

ಕೈ ಸರ್ಕಾರದಲ್ಲಿ ಈಡೇರುತ್ತಾ ಜಿಲ್ಲಾ ಗೆಜೆಟಿಯರ್‌ ಕನಸು!

ಚಿಕ್ಕಬಳ್ಳಾಪುರ: ಜಿಲ್ಲೆಯ ಜನ ಜೀವನ, ಆಡಳಿತ ರಾಜಕೀಯ ಹೀಗೆ ವಿವಿಧ ಕ್ಷೇತ್ರಗಳ ಸಮಗ್ರತೆಯ ಬಗ್ಗೆ ಮಾಹಿತಿ ಒದಗಿಸುವ ಗೆಜೆಟಿಯರ್‌ ರಚನೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು, ಕಾಂಗ್ರೆಸ್‌ ಸರ್ಕಾರದಲ್ಲಿ ಆದರೂ ಜಿಲ್ಲೆಗೆ ಅವಶ್ಯಕವಾಗಿರುವ ಗೆಜೆಟಿಯರ್‌ ಕನಸು ಈಡೇರುತ್ತಾ ಎಂಬುದನ್ನು ಕಾದು ನೀಡುವಂತಾಗಿದೆ.

ಹೌದು, ಕೋಲಾರ ಜಿಲ್ಲೆಯ ಭಾಗವಾಗಿದ್ದ ಚಿಕ್ಕಬಳ್ಳಾಪುರ ಉಪ ವಿಭಾಗ 2007 ರಲ್ಲಿ ಪ್ರತ್ಯೇಕವಾಗಿ ಜಿಲ್ಲೆಯಾಗಿ ರಚನೆಗೊಂಡು ಒಂದೂವರೆ ದಶಕ ಕಳೆದಿದೆ. ಆದರೆ ಇಲ್ಲಿವರೆಗೂ ಕೂಡ ಜಿಲ್ಲೆಯ ಸಮಗ್ರ ಚಿತ್ರಣವನ್ನು ಕಟ್ಟಿಕೊಡುವ ಗೆಜೆಟಿಯರ್‌ಗೆ ಇನ್ನೂ ಕಾಲ ಕೂಡಿ ಬಾರದೇ ಇರುವುದು ಮಾತ್ರ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಬೇಸರ ಮೂಡಿಸಿದೆ.

ಏನಿದು ಗೆಜೆಟಿಯರ್‌?: ಜಿಲ್ಲೆಯ ಭೌಗೋಳಿಕ ಲಕ್ಷಣಗಳಿಂದ ಹಿಡಿದು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಆರೋಗ್ಯ, ಉದ್ಯೋಗ ವಿಚಾರಗಳ ಬಗ್ಗೆ ಅಂಕಿ, ಅಂಶಗಳೊಂದಿಗೆ ಚಿತ್ರಗಳ ಸಮೇತ ಅಲ್ಲಿನ ಜನ ಜೀವನ ಬಗೆ, ಆಚರಿಸುವ ಕಲೆ, ಸಂಸ್ಕೃತಿ, ಸಂಪ್ರದಾಯ, ಪಾಲಿಸುವ ಆಚಾರ, ವಿಚಾರ, ಜಾತ್ರೆ, ಸಂತೆ, ಶೈಕ್ಷಣಿಕ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಗ್ರಾಮಗಳು, ಜಾತಿ ಜನ ಸಮುದಾಯಗಳ ಆಚರಣೆಗಳ ಬಗ್ಗೆ ಸಮಗ್ರವಾಗಿ ವಿವರಗಳನ್ನು ದಾಖಲಿಸುವ ಮೂಲಕ ಜಿಲ್ಲೆಯ ಜನ ಜೀವನದ ಕುರಿತು ಸಮಗ್ರವಾದ ಚಿತ್ರಣವನ್ನು ಕಟ್ಟಿ ಕೊಟ್ಟು ಪರಿಚಯಿಸುವುದೇ ಗೆಜೆಟಿಯರ್‌ ಉದ್ದೇಶ. ಆದರೆ, ಗೆಜೆಟಿಯರ್‌ ಜಿಲ್ಲೆಯಾಗಿ ಚಿಕ್ಕಬಳ್ಳಾಪುರ 15 ವರ್ಷ ಕಳೆದರೂ ಇನ್ನೂ ಮುದ್ರಣಗೊಂಡಿಲ್ಲ. ಹೀಗಾಗಿ ಜಿಲ್ಲೆಗೆ ಹೊಸದಾಗಿ ಬರುವ ಅಧಿಕಾರಿಗಳಿಗೆ ಜಿಲ್ಲೆಯ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಗೆ ಯಾವುದೇ ಅಧಿಕಾರಿ ಬಂದರೂ ಗೆಜೆಟಿಯರ್‌ ನ್ನು ಓದಿ ಬಳಿಕ ತಮ್ಮ ಕೆಲಸ ಕಾರ್ಯಗಳನ್ನು ಆರಂಭಿಸುವುದು ವಾಡಿಕೆ. ಆದರೆ ಜಿಲ್ಲೆಯ ಪಾಲಿಗೆ ಗೆಜೆಟಿಯರ್‌ ಕೈಗೂಡದೇ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಾಗಾರ ನಡೆಸಿ ಸುಮ್ಮನಾದರು: ಈ ಹಿಂದೆ ಜಿಲ್ಲೆಯಲ್ಲಿ ಗೆಜೆಟಿಯರ್‌ ರಚನೆಗೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ಲೇಖಕರ, ಚಿಂತಕರ, ಸಾಹಿತಿಗಳ, ಬರಹಗಾರರ, ಕಾಲೇಜು ಉಪನ್ಯಾಸಕರ ಸಭೆ ಕರೆದು ಗೆಜೆಟಿಯರ್‌ ರಚನೆ ಬಗ್ಗೆ ಕಾರ್ಯಾಗಾರ ನಡೆಯಿತು. ಆದರೆ ಕೆಲಸ ಕಾರ್ಯಗಳು ಮಾತ್ರ ಇಲ್ಲಿವರೆಗೂ ಈಡೇರದೇ ಜಿಲ್ಲೆಯ ಪಾಲಿಗೆ ಇನ್ನೂ ಗೆಜೆಟಿಯರ್‌ ಬರೀ ಕನಸಾಗಿಯೇ ಉಳಿದಿದ್ದು, ಬಿಡುಗಡೆ ಭಾಗ್ಯ ಯಾವಾಗ ಎಂಬುದು ಯಕ್ಷಪ್ರಶ್ನೆಯಾಗಿದೆ.

ಜಿಲ್ಲೆಯ ಗೆಜೆಟಿಯರ್‌ ರಚನೆ ಬಗ್ಗೆ ಸಾಕಷ್ಟು ಜಬ್ದಾವಾರಿ ನನಗೆ ವಹಿಸಿದ್ದರು. ಆದರೆ ಕಾರಣಾಂತರಗಳಿಂದ ಗೆಜೆಟಿಯರ್‌ನ್ನು ಕಾಲಮಿತಿಯೊಳಗೆ ತರಲು ಸಾಧ್ಯವಾಗಿಲ್ಲ. ಗೆಜೆಟಿಯರ್‌ ರಚನೆಗೆ ಪೂರಕವಾದ ಮಾಹಿತಿಯನ್ನು ಈಗಾಗಲೇ ಸಂಗ್ರಹಿಸಲಾಗಿದೆ. ಆದರೆ ಅಂತಿಮವಾಗಿ ತಿದ್ದುಪಡಿಯಾಗಿ ಗೆಜೆಟಿಯರ್‌ ಮುದ್ರಣಗೊಳ್ಳಬೇಕಿದೆ. ಒಂದೆರೆಡು ತಿಂಗಳಲ್ಲಿ ಗೆಜೆಟಿಯರ್‌ ಮುದ್ರಣಗೊಳ್ಳುವ ನಿರೀಕ್ಷೆ ಇದೆ. ●ಡಾ.ಕೋಡಿರಂಗಪ್ಪ, ಕಸಾಪ ಜಿಲ್ಲಾಧ್ಯಕ್ಷರು, ಚಿಕ್ಕಬಳ್ಳಾಪುರ

ಜಿಲ್ಲೆಗೆ ಸಂಬಂಧಿಸಿದಂತೆ ಗೆಜೆಟಿ ಯರ್‌ ರಚನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಗಳೊಂದಿಗೆ ಚರ್ಚೆ ನಡೆಸಿ ಗೆಜೆಟಿಯರ್‌ ಸಿದ್ಧಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ●ಪಿ.ಎನ್‌.ರವೀಂದ್ರ, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Police

Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.