ಬಾಗೇಪಲ್ಲಿಯಲ್ಲಿ ವಿದ್ಯಾರ್ಥಿಗಳಿಗೆ ಸಂಜೆ ತರಗತಿ ಆರಂಭಿಸಿದ ಪದವೀಧರ

ಮಕ್ಕಳು ಬೇಸಿಕ್ಸ್ ಮರೆತಿದ್ದಾರೆಂಬ ಕಳವಳ : ಮಾಡಪಲ್ಲಿ ನರಸಿಂಹಮೂರ್ತಿರಿಂದ  ನಿತ್ಯ 2, 3 ಗಂಟೆ ಪಾಠ

Team Udayavani, Jul 30, 2020, 7:12 PM IST

ಬಾಗೇಪಲ್ಲಿಯಲ್ಲಿ ವಿದ್ಯಾರ್ಥಿಗಳಿಗೆ ಸಂಜೆ ತರಗತಿ ಆರಂಭಿಸಿದ ಪದವೀಧರ

ವಿಶೇಷ ವರದಿ: ಕಾಗತಿ ನಾಗರಾಜಪ್ಪ

ಚಿಕ್ಕಬಳ್ಳಾಪುರ: ಕೋವಿಡ್ 19 ಸಂಕಷ್ಟದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈ ವರ್ಷದ ಶೈಕ್ಷಣಿಕ ವರ್ಷವನ್ನು ಯಾವಾಗನಿಂದ ಆರಂಭಿಸಬೇಕೆಂಬ ಚಿಂತನೆಯಲ್ಲಿರುವಾಗಲೇ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಾಡಪಲ್ಲಿಯಲ್ಲಿ ಪದವೀಧರರೊಬ್ಬರು ತನ್ನೂರಿನ ಸರ್ಕಾರಿ ಶಾಲಾ ಮಕ್ಕಳು ಬೇಸಿಕ್ಸ್ ಮರೆಯುತ್ತಿದ್ದಾರೆಂದು ಹೇಳಿ ಮಕ್ಕಳಿಗೆ ಪಾಠ ಹೇಳಿಕೊಡಲು ಶುರು ಮಾಡಿದ್ದಾರೆ.

ಹೌದು, ಇಡೀ ಜಿಲ್ಲೆಯಲ್ಲಿ ಅತೀ ಹಿಂದುಳಿದ ತಾಲೂಕಾಗಿರುವ ಬಾಗೇಪಲ್ಲಿಯಲ್ಲಿ ಮೊದಲೇ ಸರ್ಕಾರಿ ಶಾಲಾ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಶಾಲೆಗಳಿಗೂ ಮೂಲ ಸೌಕರ್ಯ ಅಷ್ಟೆಕಷ್ಟೇ.

ಆದರೆ ಕೋವಿಡ್ 19 ಸಂಕಷ್ಟದ ಹಿನ್ನಲೆಯಲ್ಲಿ ಶಾಲೆಗಳು ಇನ್ನೂ ಆರಂಭಗೊಳ್ಳದಿದ್ದಕ್ಕೆ ನಮ್ಮೂರು ವಿದ್ಯಾರ್ಥಿಗಳು ಬೇಸಿಕ್ಸ್ ಮರೆಯುತ್ತಿದ್ದಾರೆಂಬ ಕಳವಳ ವ್ಯಕ್ತಪಡಿಸಿ ಊರಿನ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ತರಗತಿಗಳನ್ನು ಆರಂಭಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮಾಡಪಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 20 ಮಕ್ಕಳು ವಿದ್ಯಾಭ್ಯಾಸ  ಮಾಡುತ್ತಿದ್ದಾರೆ. ಸುಮಾರು 5 ವರ್ಷಗಳಿಂದ ಖಾಯಂ ಶಿಕ್ಷಕರಿಲ್ಲದೆ ಅತಿಥಿ ಶಿಕ್ಷಕರಿಂದಲೇ ಶಾಲೆ ನಡೆಸಲಾಗುತ್ತಿದೆ. ಖಾಯಂ ಶಿಕ್ಷಕರನ್ನು ನೇಮಿಸಿ ಎಂಬ ಗ್ರಾಮಸ್ಥರು ಹಕ್ಕೋತ್ತಾಯಕ್ಕೆ ಯಾರು ಸ್ಪಂದಿಸಿಲ್ಲ.

ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಹೀಗಾಗಿ ಗ್ರಾಮದ ಬಿ.ಎ. ಬಿ.ಎಡ್ ಮುಗಿಸಿರುವ ಜೊತೆಗೆ ಐದು ವರ್ಷಗಳ ಹಿಂದೆ ಶಿಕ್ಷಕರಾಗಿ, ಕಾಲೇಜು ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ನರಸಿಂಹಮೂರ್ತಿ ಈಗ ತಮ್ಮನೂರು ಶಾಲಾ ಮಕ್ಕಳಿಗೆ ಮೇಷ್ಟ್ರ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ದಿನವೀಡಿ ತನ್ನ ಕೆಲಸ, ಕಾರ್ಯಗಳಲ್ಲಿ ತೊಡಗಿಸಿ ಸಂಜೆ 2 ರಿಂ 3 ಗಂಟೆಗಳ ಕಾಲ ಗ್ರಾಮದ ವಿದ್ಯಾರ್ಥಿಗಳನ್ನು ಶಾಲೆಯಲ್ಲಿಯೇ ಸೇರಿಸಿ ಪಾಠ, ಪ್ರವಚನಗಳನ್ನು ಮಾಡುತ್ತಿದ್ದಾರೆ. ಮತ್ತು ಹೀಗೆ ಮಾಡುವ ಸಂದರ್ಭದಲ್ಲಿ ಮಕ್ಕಳೆಲ್ಲರೂ ಮಾಸ್ಕ್ ಧರಿಸಿ ಸೂಕ್ತ ಸಾಮಾಜಿಕ ಅಂತರವನ್ನು ಪಾಲಿಸುವುದನ್ನು ಮರೆತಿಲ್ಲ.

ನರಸಿಂಹಮೂರ್ತಿ ಅವರ ಈ ಕಾರ್ಯಕ್ಕೆ ಗ್ರಾಮದ ಪೋಷಕರು ಸಂತಸ ಪಡುತ್ತಿದ್ದಾರೆ. ಗ್ರಾಮದಲ್ಲಿ ಅಜ್ಜಿ ಮನೆಗೆ ಬಂದಿರುವ ಬೇರೆ ಊರಿನ ಮೊಮ್ಮಕ್ಕಳು, ಹಿರಿಯ, ಪ್ರೌಢಶಾಲಾ ವಿದ್ಯಾರ್ಥಿಗಳು ಸೇರಿದಂತೆ ಬೇರೆ ಬೇರೆ ತರಗತಿಗಳ ವಿದ್ಯಾರ್ಥಿಗಳು ಕಲಿಕೆಗೆ ಉತ್ಸುಕರಾಗಿದ್ದಾರೆ.

ನಮ್ಮ ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಬೇಕಾಗಿದ್ದ ಕೆಲಸವನ್ನು ವ್ಯಕ್ತಿಯೊಬ್ಬರು ಸ್ವಯಂ ಪ್ರೇರಿತವಾಗಿ ಬಂದು ಮಕ್ಕಳಿಗೆ ಪಾಠ ಮಾಡುತ್ತಿರುವುದಕ್ಕೆ ಅವರಿಗೆ ಅಭಿನಂದನೆಗಳು. ಬಾಗೇಪಲ್ಲಿಯಲ್ಲಿಯತಂಹ ಗಡಿ ತಾಲೂಕಿನಲ್ಲಿ ಮಧ್ಯಮ ವರ್ಗದ ಮಕ್ಕಳಿಗೆ ಕಲಿಕೆ ನಿರಂತರವಾಗಿ ಇರಲಿ ಎನ್ನುವ ಆಶಯದಿಂದ ನರಸಿಂಹಮೂರ್ತಿ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ.
– ಎಸ್.ಜಿ.ನಾಗೇಶ್, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ.

ಮಕ್ಕಳಿಗೆ ಗೆಳೆಯರಿಂದ ಕಲಿಕೋಪಕರಣ
ನರಸಿಂಹಮೂರ್ತಿ, ಗ್ರಾಮದ ಕೆಲ ಗೆಳೆಯರ ಮನವೊಲಿಸಿ ಸದ್ಯಕ್ಕೆ ಕಲಿಯುತ್ತಿರುವ ಮಕ್ಕಳಿಗೆ ನೋಟ್ ಪುಸ್ತಕ, ಪೆನ್ ಗಳು, ಪೆನ್ಸಿಲ್ ಗಳಿಗೆ, ಜಾಮಿಟ್ರಿ ಪೆಟ್ಟಿಗೆಗಳ ನೆರವು ನೀಡಲಾಗಿದೆ.  ಸಂಜೆ ಶಾಲೆಗೆ ಬರುವ ಮಕ್ಕಳ ಕಲಿಕೆ ಅನುಕೂಲವಾಗಲು ಅಭ್ಯಾಸ ಪುಸ್ತಕಗಳು, ವಿವಿಧ ಚಟುವಟಿಕೆಗಳಿಗೆ ಸಂಬಂಧಿಸಿದ ಸಲಕರಣೆಗಳನ್ನು ಹಾಗೂ ಮಕ್ಕಳು ನೆಲದಲ್ಲಿ ಕೂತು ಪಾಠ ಕೇಳುತ್ತಿರುವುದರಿಂದ ಇವರಿಗೆ ಪೀಠೋಪಕರಣಗಳು, ಆಟಿಕೆಗಳನ್ನು ದಾನಿಗಳಿಂದ ನಿರೀಕ್ಷಿಸಿದ್ದಾರೆ. ಶಾಲೆಯ ಗೋಡೆಗಳಿಗೆ ಹೊಸ ಹಾಗೂ ಆಕರ್ಷಕವಾಗಿ ವರ್ಲಿ ಕಲೆ ಬಿಡಿಸಲು ಚಿಂತಿಸಿದ್ದಾರೆ.

ಇಲ್ಲಿನ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಓದಬೇಕೆಂಬ ಆಸೆ ಇದ್ದರೂ ಸವಾಲುಗಳೇ ಹೆಚ್ಚು. ಇಲ್ಲಿಗೆ ಖಾಯಂ ಶಿಕ್ಷಕರ ನಿಯೋಜನೆ ಮಾಡಬೇಕಿದೆ. ಶಾಲೆ ಆರಂಭ ತಡವಾಗಿದೆ. ಮಕ್ಕಳು ಬೇಸಿಕ್ಸ್ ಮರೆಯಬಾರದೆಂದು ಸಂಜೆ ವೇಳೆ ತರಗತಿ ನಡೆಸುತ್ತಿದ್ದೇನೆ. ಮಕ್ಕಳಿಂದ ಉತ್ತಮ ಸ್ಪಂದನೆ ಸಿಕ್ಕಿದೆ.
– ಮಾಡಪಲ್ಲಿ ನರಸಿಂಹಮೂರ್ತಿ, ಪದವೀಧರ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.