ನಾಯಿ, ಕೋತಿಗಳ ಕಾಟಕ್ಕೆ ಬೇಸತ್ತ ಗುಡಿಬಂಡೆ ಜನ!


Team Udayavani, Jul 16, 2023, 3:52 PM IST

ನಾಯಿ, ಕೋತಿಗಳ ಕಾಟಕ್ಕೆ ಬೇಸತ್ತ ಗುಡಿಬಂಡೆ ಜನ!

ಗುಡಿಬಂಡೆ: ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳು ಮತ್ತು ಕೋತಿಗಳ ಹಾವಳಿ ಹೆಚ್ಚಾಗಿದ್ದು ಮಹಿಳೆಯರು, ಮಕ್ಕಳು, ವೃದ್ಧರು ಮನೆಯಿಂದ ಹೊರಬರಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಪಪಂ ಅಧಿಕಾರಿಗಳ ವಿರುದ್ಧ ನಾಗರಿಕರು ನಿತ್ಯ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮನೆಯ ಕಿಟಕಿ, ಮುಖ್ಯ ಬಾಗಿಲು, ಕಾರಿಡಾರ್‌, ಮಾಳಿಗೆ ಮೇಲಿನ ಗವಾಕ್ಷಿ ಮೂಲಕ ಮನೆಯೊಳಗೆ ನುಗ್ಗುತ್ತಿರುವ ಕೋತಿಗಳು, ಮನೆಯವರನ್ನೇ ಹೆದರಿಸಿ ಆಹಾರ ಪದಾರ್ಥವನ್ನು ಎತ್ತಿಕೊಂಡು ಪರಾರಿಯಾಗು ತ್ತಿವೆ. ಅಲ್ಲದೇ, ತರಕಾರಿ, ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡುತ್ತಿವೆ. ಓಡಿಸಲು ಮುಂದಾದರೆ ಮನೆಯವರ ಮೇಲೆಯೇ ಎರಗುತ್ತಿವೆ.

ಅಪಘಾತ: ಕೋತಿಗಳ ಜತೆಯಲ್ಲಿಯೇ ಬೀದಿ ನಾಯಿಗಳ ಹಾವಳಿಯೂ ಪಟ್ಟಣದಲ್ಲಿ ಹೆಚ್ಚಾಗಿದೆ. ಅಂಗಡಿಯಿಂದ ಪಡಿತರ, ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವಾಗ ಏಕಾಏಕಿ ದಾಳಿ ನಡೆಸಿ ಕೈಯಲ್ಲಿದ್ದ ವಸ್ತುಗಳನ್ನು ಕಿತ್ತುಕೊಂಡು ಹೋಗುತ್ತಿವೆ.

ಅಲ್ಲದೇ ರಸ್ತೆಯುದ್ದಗಲಕ್ಕೂ ಮಲಗುವ ನಾಯಿಗಳು ವಾಹನ ಸವಾರರ ಮೇಲೆ ದಿಢೀರ್‌ ದಾಳಿ ಮಾಡುವುದಲ್ಲದೇ, ಬೆನ್ನಟ್ಟುತ್ತಿವೆ. ಇದರಿಂದಾಗಿ ಸವಾರರು ಹೆದರಿ ವಾಹನಗಳ ಅಪಘಾತಕ್ಕೆ ಕಾರಣವಾಗುತ್ತಿದೆ. ಇನ್ನು ಪಕ್ಕದಲ್ಲೇ ಬಸ್‌ ನಿಲ್ದಾಣವಿದ್ದು ಪ್ರಯಾಣಿಕರಿಗೂ ಕಿರಿಕಿರಿಯನ್ನುಂಟು ಮಾಡುತ್ತಿವೆ.

ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು: ದಾಳಿ ಮಾಡುತ್ತಿರುವ ಘಟನೆಗಳ ಬಗ್ಗೆ ಪಪಂ ಮುಖ್ಯಾಧಿಕಾರಿಗಳ ಗಮನಕ್ಕೆ ಸಾರ್ವಜನಿಕರು ತಂದರೂ ಅವರು ತಮಗೇನು ಆಗಿಲ್ಲವೇನೋ ಎಂಬ ರೀತಿಯಲ್ಲಿ ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ವಾಗಿದೆ. ಆದಷ್ಟು ಬೇಗ ಪಪಂ ಅಧಿಕಾರಿಗಳು ಬೀದಿ ನಾಯಿಗಳು, ಕೋತಿಗಳ ಹಾವಳಿ ತಡೆಗೆ ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವೃದ್ಧರು, ವಿದ್ಯಾರ್ಥಿಗಳ ಮೇಲೆ ದಾಳಿ: ಪಟ್ಟಣದಲ್ಲಿ ನಾಯಿಗಳು, ಕೋತಿಗಳ ಉಪಟಳ ಜಾಸ್ತಿಯಾಗಿದ್ದು ವಿದ್ಯಾರ್ಥಿಗಳು ತಿಂಡಿ, ತಿನುಸು ಬ್ಯಾಗ್‌ಗಳನ್ನು ಕೈಯಲ್ಲಿ ಹಿಡಿದುಕೊಂಡು ಶಾಲಾ, ಕಾಲೇಜಿಗೆ ಹೋಗುವಾಗ ಅವರ ಮೇಲೆ ದಾಳಿ ಮಾಡಿ, ಕಚ್ಚಿ ಗಾಯಗೊಳಿಸಿ ಆಸ್ಪತ್ರೆ ದಾಖಲಾದ ಘಟನೆಗಳೂ ನಡೆದಿವೆ. ಅಲ್ಲದೇ, ಭಯಪಟ್ಟ ವೃದ್ಧರು ಕೆಳಗೆ ಬಿದ್ದು ಗಾಯ ಮಾಡಿಕೊಂಡಿರುವ ನಿದರ್ಶನಗಳೂ ಇವೆ.

‌ಪಟ್ಟಣದಲ್ಲಿ ಬೀದಿ ನಾಯಿ, ಕೋತಿಗಳ ಹಾವಳಿ ಜಾಸ್ತಿಯಾಗಿದ್ದು, ಮನೆಯಿಂದ ಹೊರಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಪಪಂ ಅಧಿಕಾರಿಗಳು ಸೂಕ್ತ ಕ್ರಮಕೈಗೊಂಡು ಸ್ಥಳಾಂತರಿಸಲು ಮುಂದಾಗಬೇಕು. ● ನಾರಾಯಣಸ್ವಾಮಿ, ಗುಡಿಬಂಡೆ ನಿವಾಸಿ

ಗುಡಿಬಂಡೆ ಪಟ್ಟಣದಲ್ಲಿ ಬೀದಿ ನಾಯಿ, ಕೋತಿಗಳ ಹಾವಳಿ ಜಾಸ್ತಿಯಾಗಿರುವ ಬಗ್ಗೆ ದೂರು ಬಂದಿವೆ. ಅವುಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ● ಸಬಾಶಿರಿನ್‌, ಮುಖ್ಯಾಧಿಕಾರಿ

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Police

Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.