ಗುಡಿಬಂಡೆಯ ತಾಣ ಪ್ರವಾಸಿಗರ ಪಾಲಿಗೆ ಸ್ವರ್ಗ!


Team Udayavani, Jul 23, 2023, 3:55 PM IST

ಗುಡಿಬಂಡೆಯ ತಾಣ ಪ್ರವಾಸಿಗರ ಪಾಲಿಗೆ ಸ್ವರ್ಗ!

ಗುಡಿಬಂಡೆ: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡ ದು ಎನ್ನುವಂತೆ ಜಿಲ್ಲೆಯಲ್ಲಿ ಗುಡಿಬಂಡೆ ತಾಲೂಕು ಚಿಕ್ಕದಾದರೂ ಐತಿಹಾಸಿಕ, ಸಾಂಸ್ಕೃತಿಕ, ಪ್ರವಾ ಸೋದ್ಯಮಕ್ಕೆ ಗುಡಿಬಂಡೆ ಪ್ರವಾಸಿಗರ ಪಾಲಿಗೆ ಸ್ವರ್ಗ ವಾಗಿದೆ.

ಈಗಾಗಲೇ ಹಲವು ಸಿನಿಮಾ, ಧಾರವಾಹಿ ಚಿತ್ರೀಕರಣ ಈ ಭಾಗದಲ್ಲಿ ನಡೆದು ಗುಡಿಬಂಡೆ ರಾಜ್ಯ ಮಟ್ಟದಲ್ಲಿ ತಾಣವಾಗಿ ಗಮನ ಸೆಳೆಯುತ್ತಿದೆ. ತಾಲೂಕಿನ ಸುತ್ತಮುತ್ತಲಿನಲ್ಲಿ ಅನೇಕ ಪ್ರೇಕ್ಷಣೀಯ ಸ್ಥಳಗಳಿವೆ. ಐತಿಹಾಸಿಕ ಹಿನ್ನೆಲೆಯುಳ್ಳ 7 ಸುತ್ತಿನ ಕೋಟೆಯಿಂದ ಆವೃತವಾಗಿರುವ ಸುರಸದ್ಮಗಿರಿ ಬೆಟ್ಟ. ಹಿಂದಿನ ಕಾಲದಲ್ಲಿಯೇ ಭಾರತ ಭೂಪಟ ಹೋಲುವಂತೆ ನಿರ್ಮಿಸಿರುವ ಅಮಾನಿ ಬೈರಸಾಗರ ಕೆರೆ, ಅತ್ಯಂತ ಪುರಾತನ ಜೈನ ಬಸದಿಗಳು, ಪಟ್ಟಣಕ್ಕೆ ಸಮೀಪದಲ್ಲಿಯೇ ನವಿಲು ಜಿಂಕೆಗಳ ವಾಸ, ಜತೆಗೆ ಪಕ್ಕದ ತಾಲೂಕಿನ ವಾಟದಹೊಸಹಳ್ಳಿ ಕೆರೆ, ಗುಡಿಬಂಡೆ ಸನಿಹದಲ್ಲಿರುವ ಆವುಲಬೆಟ್ಟ ಹೀಗೆ ಅನೇಕ ಸ್ಥಳಗಳು ತನ್ನ ಪ್ರಾಕೃತಿಕ ಸೊಬಗಿನೊಂದಿಗೆ ಕಂಗೊಳಿಸುತ್ತಿದೆ.

ವಾರಾಂತ್ಯಕ್ಕೆ ಪ್ರವಾಸಿಗರ ದಂಡು: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನತೆ ಈ ಪ್ರದೇಶಗಳನ್ನು ವೀಕ್ಷಿಸಲು ಬರುತ್ತಿರುವುದು ಸಾಮಾನ್ಯವಾಗಿದೆ. ಗುಡಿಬಂಡೆ ಸುತ್ತಮುತ್ತಲಿನ ಪರಿಸರದ ಸೌಂದರ್ಯ ಇಡೀ ರಾಜ್ಯದ ಜನರನ್ನು ಸೆಳೆಯುತ್ತಿದೆ ಎನ್ನಲಾಗುತ್ತಿದೆ.

ಭವ್ಯ ಸ್ವಾಗತ ಕೋರುವ ಬೈರಸಾಗರ ಕೆರೆ: ಇನ್ನೂ ಗುಡಿಬಂಡೆಗೆ ಆಗಮಿಸುತ್ತಿದ್ದಂತೆ ಪ್ರಯಾಣಿಕರಿಗೆ ಆಹ್ವಾನ ನೀಡುವಂತೆ ಕಾಣಿಸುವುದು ಅಮಾನಿ ಬೈರಸಾಗರ ಕೆರೆ. ಕೆರೆ ಏರಿ ಮೇಲೆ ಪ್ರಯಾಣಿಸುವುದೇ ಒಂದು ರೀತಿಯ ವಿಭಿನ್ನ ಅನುಭವ. ಕೆರೆ ಬಳಿಯೇ ಸ್ಯಾಂಡಲ್‌ವುಡ್‌ನ‌ಲ್ಲಿ ಹಿಟ್‌ ಹೊಡೆದ ಮೊನಾಲಿಸಾ ಚಿತ್ರದ ಓ ಪ್ರಿಯತಮೆ ಇದು ನ್ಯಾಯಾನಾ ಎಂಬ ಗೀತೆಯ ಚಿತ್ರೀಕರಣವೂ ನಡೆದಿದೆ. ಜತೆಗೆ ದಳಪತಿ ಚಲನಚಿತ್ರ ಹಾಗೂ ರಾಮಾಚಾರಿ ಕನ್ನಡದ ಧಾರವಾಹಿಗಳನ್ನೂ ಚಿತ್ರೀಕರಿಸಲಾಗಿದ್ದು, ಇತ್ತೀಚೆಗೆ ನಟ ಚರಣ್‌ ಅಭಿನಯದ ಗುರುಶಿಷ್ಯರು ಸಿನಿಮಾ ಈ ಭಾಗದಲ್ಲಿ ಭಾಗಶಃ ಚಿತ್ರೀಕರಣಗೊಂಡಿತ್ತು. ರಾಜ್ಯದಲ್ಲಿಯೇ ಅತ್ಯಂತ ಚಿಕ್ಕ ತಾಲೂಕುಗಳಲ್ಲಿ ಒಂದಾದ ಗುಡಿಬಂಡೆಯನ್ನು ರಾಜ ಮಹಾರಾಜರು ಸೇರಿ ಪಾಳೇಗಾರರು ಆಳಿದ್ದ ಐತಿಹಾಸಿಕ ಪ್ರದೇಶ. ಅನೇಕ ಪ್ರೇಕ್ಷಣೀಯ ಸ್ಥಳ ಹೊಂದಿರುವ ಗುಡಿಬಂಡೆಗೆ ಭೇಟಿ ನೀಡುವ ಪ್ರವಾಸಿಗರು ಪುನಃ ಪುನಃ ಭೇಟಿ ನೀಡಬೇಕೆನ್ನುತ್ತಾರೆ. ಅವುಗಳ ಅಭಿವೃದ್ಧಿಗೆ ಜನಪ್ರತಿನಿಧಿಗಳ ಇಚ್ಛಾಶಕ್ತಿ, ಕಾಯಕಲ್ಪ ಬೇಕಿದೆ.

ಚಾರಣಿಗರಿಗಾಗಿ ಸುರಸದ್ಮಗಿರಿ ಕೋಟೆ: ಪಟ್ಟಣ ವ್ಯಾಪ್ತಿಯಲ್ಲಿಯೇ ಕಾಣಸಿಗುವುದು ಸುರಸದ್ಮಗಿರಿ ಬೆಟ್ಟ. ಈ ಬೆಟ್ಟಕ್ಕೆ ಸುಮಾರು 400 ವರ್ಷಗಳ ಇತಿಹಾಸವಿದೆ. ರಾಜ್ಯದ ಅತ್ಯಂತ ದೊಡ್ಡ ಏಕಶಿಲಾ ಬೆಟ್ಟಗಳಲ್ಲಿ ಪೈಕಿ ಇದೂ ಒಂದಾಗಿದೆ. ಈ ಭಾಗದಲ್ಲಿ ಆಳ್ವಿಕೆ ನಡೆಸುತ್ತಿದ್ದ ಬೈರಗೌಡ ಬೆಟ್ಟದ ಸುತ್ತಲೂ ರಕ್ಷಣೆಗಾಗಿ 7 ಸುತ್ತಿನ ಕೋಟೆ ನಿರ್ಮಿಸಿದ್ದಾನೆ. ಜತೆಗೆ ಬೆಟ್ಟದ ಮೇಲ್ಭಾಗದಿಂದ ಸುಂದರವಾದ ಪರಿಸರದ ಸೊಬಗನ್ನು ಕಾಣಬಹುದಾಗಿದೆ. ರಾಮಾಯಣದ ಪ್ರಕಾರ ರಾಮ ಲಕ್ಷ್ಮಣರು ವನವಾಸದ ಸಮಯದಲ್ಲಿ 108 ಜೋರ್ತಿಲಿಂಗಗಳ ಪೈಕಿ ಇಲ್ಲಿಯೂ ರಾಮೇಶ್ವರ ಲಿಂಗ ಪ್ರತಿಷ್ಠಾ ಪಿಸಿದ್ದಾರೆ ಎಂಬ ಪ್ರತೀತಿ ಇದೆ. ಆದರೆ ಸ್ಥಳೀಯ ಆಡಳಿತ ಈ ಬೆಟ್ಟದಲ್ಲಿ ವಾಹನ ನಿಲುಗಡೆ ಸೇರಿ ಮೂಲಭೂತ ಸೌಕರ್ಯ ಒದಗಿಸಿದರೇ ಪ್ರಯಾಣಿಕರಿಗೆ ಅನುಕೂಲವಾಗು ವುದರ ಜತೆಗೆ ನಿಗಧಿತ ಶುಲ್ಕದಿಂದ ಸರ್ಕಾರಕ್ಕೂ ಆದಾಯ ಬರಲಿದೆ.

ಬೇಕಿದೆ ಕಾಯಕಲ್ಪ : ಈಗಾಗಲೇ ಸ್ಥಳೀಯ ಶಾಸಕರು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸುಮಾರು 1 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದು, ಅಮಾನಿ ಬೈರಸಾಗರ ಕೆರೆ ಬಳಿ ಬೋಟಿಂಗ್‌, ಪಾರ್ಕ್‌ ನಿರ್ಮಾಣ ಜತೆಗೆ ಸುರಸದ್ಮಗಿರಿ ಬೆಟ್ಟವನ್ನೂ ಅಭಿವೃದ್ಧಿ ಮಾಡುವುದಾಗಿ ತಿಳಿಸಿದ್ದಾರೆ. ಈ ಕಾರ್ಯ ವಿಳಂಬ ವಾಗುತ್ತಿದ್ದು, ಶೀಘ್ರ ಕೈಗೊಳ್ಳಬೇಕೆಂಬುದು ಪ್ರವಾಸಿಗರ ಆಶಯವಾಗಿದೆ.

ಗುಡಿಬಂಡೆಯನ್ನು ಶಾಸಕರು ಪ್ರವಾಸೋ ದ್ಯಮ ತಾಣ ಮಾಡುವು ದಾಗಿ ಕೇವಲ ಭರವಸೆಗೆ ಸೀಮಿತರಾಗಿದ್ದಾರೆ.ಅಧಿಕಾ ರಿಗಳಾದರೂ ಕ್ರಮ ಕೈಗೊಳ್ಳಬೇಕು. ● ಮಧು ವೈ.ಯರ್ರಹಳ್ಳಿ, ಪಿಎಸ್‌ಎಸ್‌ ಮುಖಂಡರು

ಟಾಪ್ ನ್ಯೂಸ್

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.