ಬಾಕಿ ವೇತನಕ್ಕೆ ಅತಿಥಿ ಉಪನ್ಯಾಸಕರ ಆಗ್ರಹ
Team Udayavani, Jun 26, 2020, 7:17 AM IST
ಚಿಕ್ಕಬಳ್ಳಾಪುರ: ಅತಿಥಿ ಉಪನ್ಯಾಸಕರ ಹಾಗೂ ಶಿಕ್ಷಕರ ಬಾಕಿ ಇರುವ ಎಲ್ಲಾ ವೇತನ ಪಾವತಿ ಹಾಗೂ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿದ್ದು, ಸರ್ಕಾರ ಪರಿಹಾರ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಗುರುವಾರ ರಾಜ್ಯ ಅತಿಥಿ ಉಪನ್ಯಾಸಕರ ಹಾಗೂ ಅತಿಥಿ ಶಿಕ್ಷಕರ ಹೋರಾಟ ಸಮಿತಿ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ತಮ್ಮ ಬೇಡಿಕೆಗಳ ಬಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು ಹಾಗು ಶಿಕ್ಷಕರು, ಕೂಡಲೇ ಬಾಕಿ ಇರುವ ನಾಲ್ಕೈದುತಿಂಗಳವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಕೋವಿಡ್ 19 ಸಂಕಷ್ಟದ ನಡುವೆಯು ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ನಡೆಸುತ್ತಿದ್ದಾರೆ.
ಅನೇಕ ವರ್ಷಗಳಿಂದ ದುಡಿಯುತ್ತಿದ್ದರೂ ಯಾರಿಗೂ ಸೇವಾ ಭದ್ರತೆ ಇಲ್ಲ. ಸರ್ಕಾರ ನೇಮಕಾತಿ ವೇಳೆ ಆದ್ಯತೆ ನೀಡಿ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು. ಕೋವಿಡ್ 19 ಹಿನ್ನೆಲೆಯಲ್ಲಿ ಸರ್ಕಾರ ಇತರೆ ವರ್ಗಗಳಿಗೆ ಘೋಷಿಸಿ ರುವಂತೆ ಅತಿಥಿ ಉಪನ್ಯಾಸಕರಿಗೂ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಚಿಂತಾಮಣಿಯ ಶಿವಕುಮಾರ್, ಮಂಜುನಾಥ, ಕೃಷ್ಣಮೂರ್ತಿ, ನಂದೀಶ್, ಓಬಳರೆಡ್ಡಿ, ಕಾಂತರಾಜು, ಕೃಷ್ಣಮೂರ್ತಿ, ನಾಗೇಂದ್ರಬಾಬು, ಶಿವಶಂಕರ್, ರಾಮ ಚಂದ್ರಪ್ಪ, ಮಂಜುನಾಥ, ಜಯಚಂದ್ರ, ನೀಲೂಫರ್ ಸೇರಿದಂತೆ ಜಿಲ್ಲೆಯ ಅತಿಥಿ ಉಪನ್ಯಾಸಕರು, ಶಿಕ್ಷಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್ ಪರದಾಟ!
Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ratan Tata: ಕಳಚಿದ ಕೈಗಾರಿಕೆ ಕ್ಷೇತ್ರದ ಬೃಹತ್ ಕೊಂಡಿ: ಶಾಸಕ ಮೇಟಿ
Navratri Special: ಪ್ರೀತಿ ಒಂದೇ ಸಾಕು ಒಳಗಿನ ಭೋರ್ಗರೆವ ಯೋಚನೆಗಳ ತಣಿಸಲು
Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ
Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ
Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್ರೂಂನ “ತ್ರಿಶಕ್ತಿ’ ನಾಯಕರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.