Urea: ಜಿಲ್ಲಾದ್ಯಂತ ಯೂರಿಯಾಗೆ ಭಾರೀ ಡಿಮ್ಯಾಂಡ್‌!


Team Udayavani, Sep 26, 2023, 4:22 PM IST

Urea: ಜಿಲ್ಲಾದ್ಯಂತ ಯೂರಿಯಾಗೆ ಭಾರೀ ಡಿಮ್ಯಾಂಡ್‌!

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಕಳೆದೊಂದು ವಾರ ದಿಂದ ಯೂರಿಯಾ ರಸಗೊಬ್ಬರಕ್ಕೆ ಭಾರೀ ಬೇಡಿಕೆ ಸೃಷ್ಟಿಯಾ ಗಿದ್ದು, ಕೆಲವು ಕಡೆ ವರ್ತಕರು ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂಬ ಆರೋಪ ಅನ್ನದಾತರಿಂದ ಕೇಳಿ ಬರುತ್ತಿದೆ.

ಜಿಲ್ಲೆಯಲ್ಲಿ ಮುಂಗಾರು ಹಂಬಿತ್ತನೆ ಸಮಯಕ್ಕೆ ಸರಿಯಾಗಿ ಜೂನ್‌, ಜುಲೈ ಹಾಗೂ ಆಗಸ್ಟ್‌ ತಿಂಗಳಲ್ಲಿ ಮಳೆ ಕೊಟ್ಟ ಪರಿಣಾಮ ರಸಗೊಬ್ಬರಕ್ಕೆ ಬೇಡಿಕೆ ಕ್ಷೀಣಿಸಿತ್ತು. ಆದರೆ ಸೆಪ್ಪೆಂಬರ್‌ ಎರಡನೇ ವಾರದಿಂದ ಜಿಲ್ಲೆಯಲ್ಲಿ ಮಳೆಯ ಕೃಪೆ ತೋರಿದ್ದು, ಧಾರಕಾರ ಮಳೆ ಜತೆಗೆ ಹಲವು ಕಡೆ ಭಾರೀ ಜೋರು ಮಳೆ ಆಗಿರುವುದರಿಂದ ಕೃಷಿ ಚುವಟಿಕೆಗಳಿಗೆ ಮತ್ತೆ ವೇಗ ಸಿಕ್ಕಿ ಜಿಲ್ಲೆಯಲ್ಲಿ ರಸಗೊಬ್ಬರಕ್ಕೆ ಬೇಡಿಕೆ ಬಂದಿದೆ.

ರೈತರಿಗೆ ಯೂರಿಯಾ ದುಬಾರಿ: ಸದ್ಯ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರಕ್ಕೆ ರೈತರು ಪರದಾಟ ನಡೆಸುತ್ತಿದ್ದಾರೆ. ಅಳಿದು ಉಳಿದ ರಾಗಿ ಬೆಳೆಯನ್ನು ಉಳಿಸಿಕೊಳ್ಳಲು ಸದ್ಯ ಮಳೆ ಆಗುತ್ತಿರುವುದರಿಂದ ರೈತರು ಯೂರಿಯಾಗೆ ಬಳಸಲು ಮುಂದಾಗಿರುವು ದರಿಂದ ಜಿಲ್ಲೆಯಲ್ಲಿ ಯೂರಿಯಾಗೆ ಇನ್ನಿಲ್ಲದ ಬೇಡಿಕೆ ಹೆಚ್ಚಾಗಿದೆ. ಕೆಲವು ಕಡೆ ಅಕ್ರಮವಾಗಿ ದಾಸ್ತುನು ಮಾಡಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿ ರುವುದರಿಂದ ದುಬಾರಿ ಬೆಲೆ ಕೊಟ್ಟು ಯೂರಿಯಾ ರಸಗೊಬ್ಬರ ಖರೀದಿಸುವಂತಾಗಿದೆ. ಮತ್ತೆ ಕೆಲವು ಕಡೆ ಕೇಳಿದಷ್ಟು ಕಾಸು ಕೊಟ್ಟರೂ ಖರೀದಿಗೆ ಯೂರಿಯಾ ಸಿಗುತ್ತಿಲ್ಲ. ಬರೋಬ್ಬರಿ 45 ಕೆಜಿ ಯೂರಿಯಾ ಚೀಲ 1,600ರೂ. ಇದ್ದು ಸರ್ಕಾರದ ಸಬ್ಸಿಡಿ ಕಳೆದರೆ 1 ಚೀಲ 280 ರಿಂದ 300ಕ್ಕೆ ಮಾರಾಟ ಆಗಬೇಕು. ಆದರೆ, ಕೆಲ ರಸಗೊಬ್ಬರ ಅಂಗಡಿ ಮಾಲೀಕರು ಬೇಡಿಕೆಯನ್ನೆ ಬಂಡ ವಾಳ ಮಾಡಿಕೊಂಡು ಯೂರಿಯಾವನ್ನು ಸಬ್ಸಿಡಿ ಹೊರ ತುಪಡಿಸಿ 400 ರಿಂದ 500 ರೂ.ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.

ಬಾಗೇಪಲ್ಲಿ, ಗುಡಿಬಂಡೆ, ಗೌರಿಬಿದನೂರಲ್ಲಿ ಬೇಡಿಕೆ: ಜಿಲ್ಲೆಯ ಆಂಧ್ರದ ಗಡಿ ಭಾಗದಲ್ಲಿರುವ ಗೌರಿಬಿದನೂರು, ಬಾಗೇಪಲ್ಲಿ, ಗುಡಿಬಂಡೆ ತಾಲೂಕುಗಳಲ್ಲಿ ಯೂರಿಯಾಗೆ ಭಾರೀ ಬೇಡಿಕೆ ಕಂಡು ಬಂದಿದೆ. ನಿತ್ಯ ರಸಗೊಬ್ಬರ ಅಂಗಡಿಗಳ ಮುಂದೆ ಸರದಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಕೃಷಿ ಅಧಿಕಾರಿಗಳು ಕೇಳುವ ಪ್ರಕಾರ ಯೂರಿಯಾ ಜಿಲ್ಲೆಗೆ ಮುಂಗಾರು ಹಂಗಾಮಿಗೆ ಎಷ್ಟೋ ಬೇಕಿತ್ತೋ ಅಷ್ಟು ದಾಸ್ತುನು ಇದೆ. ಆದರೆ ಯೂರಿಯಾವನ್ನು ಅಗತ್ಯಕ್ಕಿಂತ ಹೆಚ್ಚಾಗಿ ರೈತರು ಬಳಕೆ ಮಾಡುತ್ತಿವುದರಿಂದ ಬೇಡಿಕೆ ಹೆಚ್ಚಾಗಿದೆ ಎನ್ನುತ್ತಾರೆ. ಯೂರಿಯಾ ಕೇಳಿದರೆ ಬೇರೆ ರಸಗೊಬ್ಬರ ಖರೀದಿಗೆ ಒತ್ತಡ: ಜಿಲ್ಲೆಯಲ್ಲಿ ಯೂರಿಯಾಗೆ ಬೇಡಿಕೆ ಇದೆ. ತಕ್ಕಮಟ್ಟಿಗೆ ದಾಸ್ತಾನು ಇದೆ. ಆದರೆ ಕೆಲವು ರಸಗೊಬ್ಬರ ಅಂಗಡಿ ಮಾಲೀಕರು ಯೂರಿಯಾ ಕೇಳಿದರೆ ಅದರ ಜತೆಗೆ ಬೇರೆ ಬೇರೆ ರಸಗೊಬ್ಬರಗಳನ್ನು ಎರಡು ಮೂರು ಮೂಟೆ ಖರೀದಿಸುವಂತೆ ಒತ್ತಡ ಹಾಕುತ್ತಿದ್ದಾರೆಂಬ ಆರೋಪ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ. ಮಳೆ ಕೊರತೆಯಿಂದ ದಾಸ್ತುನು ಆಗಿರುವ ರಸಗೊಬ್ಬರ ಮಾರಾಟ ಆಗದೇ ಉಳಿದುಕೊಂಡಿರುವುದರಿಂದ ವರ್ತಕರು ಯೂರಿಯಾಗೆ ಇರುವ ಬೇಡಿಕೆ ನೆಪದಲ್ಲಿ ತಮ್ಮಲ್ಲಿ ಉಳಿದಿರುವ ಇತರೇ ರಸಗೊಬ್ಬರ ಮಾರಾಟಕ್ಕೆ ಮುಂದಾಗಿರುವುದರಿಂದ ಕೆಲವು ಕಡೆ ರೈತರು ಇನ್ನಿಲ್ಲದ ಸಂಕಷ್ಟ ಅನುಭವಿಸುವಂತಾಗಿದೆ.

ವಾರದಿಂದ ಉತ್ತಮ ಮಳೆ ಆಗುತ್ತಿದೆ. ಇದರಿಂದ ರಾಗಿಗೆ ಈಗ ಯೂರಿಯಾ ಹಾಕಿದರೆ ಉತ್ತಮ. ಆದರೆ ನಮ್ಮ ಭಾಗದಲ್ಲಿ ಯೂರಿಯಾ ಸಿಗುತ್ತಿಲ್ಲ. ಕೇಳಿದರೆ ಸರಬರಾಜು ಇಲ್ಲ ಅಂತಾರೆ. ಕೆಲವು ಕಡೆ ಯೂರಿಯಾ ಕೊಡುತ್ತೇವೆ. ಬೇರೆ ರಸಗೊಬ್ಬರ ಎರಡು ಮೂಟೆ ಖರೀದಿ ಮಾಡಿ ಅಂತ ಒತ್ತಡ ಹಾಕುತ್ತಿದ್ದಾರೆ. – ದ್ವಾರಕನಾಥಗುಪ್ತ, ಡಿ.ಪಾಳ್ಯ ರೈತ, ಗೌರಿಬಿದನೂರು.

ಯೂರಿಯಾ ಬಳೆಕೆದಾರರ ಸಂಖ್ಯೆ ಹೆಚ್ಚಾಗಿದೆ. ಮೇವು, ಜೋಳ ಸೇರಿ ದಂತೆ ಹಲವು ತೋಟಗಾರಿಕಾ ಬೆಳೆಗಳಿಗೂ ಇತ್ತೀಚೆಗೆ ಯೂರಿಯಾ ಬಳಕೆ ಮಾಡುವುದು ಹೆಚ್ಚಾಗಿದೆ. ಮಾಮೂಲಿ ಬೇಡಿಕೆಯಷ್ಟೇ ಸರಬರಾಜು ಇದೆ. ಆದರೆ ಬಳಕೆದಾರರು ಹೆಚ್ಚಾಗಿರುವ ಕಾರಣ ಯೂರಿಯಾಗೆ ಹೆಚ್ಚು ಬೇಡಿಕೆ ಕಂಡು ಬಂದಿದೆ. -ಡಾ.ಸಿ.ಶಿವಣ್ಣ, ಜಿಲ್ಲಾಧ್ಯಕ್ಷರು. ಕೃಷಿ ಪರಿಕರಗಳ ಮಾರಾಟಗಾರರ ಸಂಘ.

 – ಕಾಗತಿ ನಾಗರಾಜಪ್ಪ

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.