![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jun 1, 2019, 4:07 PM IST
ಚಿಕ್ಕಬಳ್ಳಾಪುರ: ಮೀಸಲಾತಿ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಮೇ 29 ರಂದು ನಡೆಯ ಬೇಕಿದ್ದ ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಮುಂದೂಡಿರುವುದು ಗೊತ್ತಿರುವ ವಿಚಾರ.
ಆದರೆ, ಸರ್ಕಾರ ನಿಗದಿಪಡಿಸಿದ್ದ ಮೀಸಲಾತಿ ಪ್ರಶ್ನಿಸಿದ್ದ ಹೈಕೋರ್ಟ್ ಮೆಟ್ಟಿಲೇರಿದ್ದವರಿಗೆ ತೀವ್ರ ಹಿನ್ನಡೆಯಾಗಿದ್ದು, ಸರ್ಕಾರ ನಿಗದಿಪಡಿಸಿದ್ದ ಮೀಸಲಾತಿ ಬದಲಾವಣೆಗೆ ಹೈಕೋರ್ಟ್ ನಿರಾ ಕರಿಸಿ ಸರ್ಕಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಜಾಗೊಳಿಸಲಾಗಿದೆ.
ಚಿಕ್ಕಬಳ್ಳಾಪುರ ನಗರಸಭೆಯ 31 ವಾರ್ಡ್ಗಳಿಗೆ ರಾಜ್ಯ ನಗರಾಭಿವೃದ್ಧಿ ಇಲಾಖೆ ಕರಡು ಮೀಸಲಾತಿ ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಪ್ರಕಟಿಸಿ ಅಂತಿಮ ಮೀಸಲಾತಿ ಪ್ರಕಟಿಸಲಾಗಿತ್ತು. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸ್ಪರ್ಧಿ ಆಕಾಂಕ್ಷಿಗಳು ಸರ್ಕಾರ ನಿಗದಿಪಡಿಸಿದ್ದ ಮೀಸಲಾತಿ ಯನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ವಿವಾದ ಚರ್ಚೆಗೆ ಗ್ರಾಸವಾಗಿತ್ತು. ಹೈಕೋಟ್ನಲ್ಲಿ ಆರೇಳು ತಿಂಗಳಿಂದ ವಾದ, ವಿವಾದ ನಡೆದಿತ್ತು.
ಮೀಸಲಾತಿ ಬದಲಾವಣೆಗೆ ನಕಾರ: ಶುಕ್ರವಾರ ಚಿಕ್ಕಬಳ್ಳಾಪುರ ನಗರಸಭೆಗೆ ರಾಜ್ಯ ನಗರಾಭಿವೃದ್ಧಿ ನಿರ್ದೇಶನಾಲಯ ನಿಗದಿಪಡಿಸಿದ್ದ ಮೀಸಲಾತಿ ಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಆದೇಶ ನೀಡಿದ್ದು, ಮೀಸಲಾತಿ ಬದಲಾಗುತ್ತದೆ ಯೆಂಬ ನಿರೀಕ್ಷೆಯಲ್ಲಿದ್ದ ಕೆಲ ಆಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದೆ.
ಯಾರು ಕೋರ್ಟ್ ಮೊರೆ ಹೋಗಿದ್ದರು?: ನಗರದ 27ನೇ ವಾರ್ಡ್ನ ಶಾಹೀನಾ ಹಿಂ. ವರ್ಗ (ಎ) ಮಹಿಳೆಗೆ ಮೀಸಲು ನಿಗದಿಪಡಿಸಿ ಈ ಹಿಂದೆ ಅಂದರೆ 2018 ಜುಲೈ 30 ರಂದು ನಗರಾಭಿವೃದ್ಧಿ ನಿರ್ದೇಶನಾಲಯದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದರು. ಈ ಬಗ್ಗೆ ನಗರಸಭೆ ವ್ಯಾಪ್ತಿಯ ಹಲವು ವಾರ್ಡ್ಗಳಿಗೆ ಅವೈಜ್ಞಾನಿಕವಾಗಿ ಮೀಸಲಾತಿ ನಿಗದಿಗೊಳಿಸಲಾಗಿದೆ.
ಮೀಸಲಾತಿ ಪಡೆದವರಿಗೆ ಮತ್ತೆ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ರವರು ವಾದ ಮಂಡಿಸಿ ಸರ್ಕಾರ ನಿಗದಿಪಡಿಸಿರುವ ಮೀಸಲಾಗಿ ಕ್ರಮ ಬದ್ಧವಾಗಿದೆ ಎಂದು ಕೋರ್ಟ್ಗೆ ಮನವರಿಕೆ ಮಾಡಿಕೊಟ್ಟ ನಂತರ ಹೈಕೋರ್ಟ್ ಸರ್ಕಾರದ ವಿರುದ್ಧ ಮೀಸಲಾತಿ ನಿಗದಿಪಡಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ತೆರವುಗೊಳಿಸಿದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
You seem to have an Ad Blocker on.
To continue reading, please turn it off or whitelist Udayavani.