![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 20, 2024, 5:02 PM IST
ಚಿಕ್ಕಬಳ್ಳಾಪುರ: ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನಾ ಮಹೋತ್ಸವಕ್ಕೆ ನನಗೆ ಆಹ್ವಾನ ಬಂದಿಲ್ಲ, ಜ. 22ರ ಬಳಿಕ ಆಯೋಧ್ಯೆಗೆ ಹೋಗುತ್ತೇನೆ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ದಿಶಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಯೋಧ್ಯೆಗೆ ನನಗೆ ಆಹ್ವಾನ ಬಂದಿಲ್ಲ. ಬೇರೆ ಯಾರಿಗೆ ಬಂದಿದೆ ಅಂತ ನನಗೆ ಗೊತ್ತಿಲ್ಲ. ಜ.22 ರ ಬಳಿಕ ಅಯೋಧ್ಯೆಗೆ ಹೋಗುತ್ತೇನೆ ಎಂದರು.
ನಾನು ಕೂಡ ರಾಮನ ಭಕ್ತ, ನಮ್ಮೂರಿನಲ್ಲಿ ನಾನು ಹಲವು ವರ್ಷಗಳ ಹಿಂದೆಯೆ ರಾಮನ ದೇವಾಲಯ ಕಟ್ಟಿಸಿದ್ದೇನೆ. ಜತೆಗೆ ಛತ್ರ ಕೂಡ ಕಟ್ಟಿಸಿದ್ದೇನೆ. ಅಲ್ಲಿಗೆ ಹೋಗಿ ರಾಮನ ಸ್ಮರಣೆ ಮಾಡುತ್ತೇನೆ ಎಂದರು.
”ನಾನು ಚುನಾವಣ ರಾಜಕಾರಣದಿಂದ ದೂರ ಸರಿಯುವುದು ಖಚಿತ. ಲೋಕಸಭಾ ಚುನಾವಣೆ ಘೋಷಣೆ ಆಗಲಿ, ಆಗ ನನ್ನ ಬೆಂಬಲ, ತಿರ್ಮಾನ ಹೇಳುತ್ತೇನೆ. ನನ್ನ ಅವಧಿ ಇನ್ನೂ ಮುಗಿದಿಲ್ಲ. ಈಗಲೂ ನಾನು ಬಿಜೆಪಿ ಸಂಸದ” ಎಂದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.