ವೈದ್ಯಕೀಯ ವೆಚ್ಚ ಮರುಪಾವತಿಯಲ್ಲಿ ಅಕ್ರಮ


Team Udayavani, Jun 2, 2020, 7:00 AM IST

vydyakeeya

ಚಿಕ್ಕಬಳ್ಳಾಪುರ: ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವ ವಿಷಯದಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಚ್‌. ವಂಶಿಕೃಷ್ಣ ಎಂಬಾತ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಹಿ ನಕಲು  ಮಾಡಿ ಲಕ್ಷಾಂತರ ರೂ. ಅಕ್ರಮ ಬಿಲ್‌ ಪಾವತಿಗೆ ಅನುಮೋದನೆ ನೀಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಿಲ್ಲೆಯ ಗೌರಿಬಿದನೂರಿನ 107 ಮಂದಿ ಶಿಕ್ಷಕರಿಗೆ ವಿಚಾರಣೆಗೆ ಹಾಜರಾಗುವಂತೆ ಚಿಕ್ಕಬಳ್ಳಾಪುರ ನಗರ ಠಾಣೆ  ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ಏನಿದು ಪ್ರಕರಣ?: ಸರ್ಕಾರಿ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ತಮಗೆ ತಗಲುವ ವೈ ವೆಚ್ಚವನ್ನು ಮರು ಪಾವತಿ ಮಾಡಿಕೊಳ್ಳಲು ಅವಕಾಶ ಇದ್ದು ಇದಕ್ಕೆ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರ ದೃಢೀಕರಣ ಅಗತ್ಯ. ಆದರೆ ಜಿಲ್ಲೆಯ  ಗೌರಿಬಿದನೂರು ತಾಲೂಕಿನ 107 ಮಂದಿ ಪ್ರಾಥಮಿಕ ಶಾಲಾ ಶಿಕ್ಷಕರ ವೈದ್ಯಕೀಯ ವೆಚ್ಚ ಮರು ಪಾವತಿಸುವ ವಿಚಾರದಲ್ಲಿ ಜಿಲ್ಲಾಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ವಂಶಿಕೃಷ್ಣ ಎಂಬಾತ ಶಸ್ತ್ರಚಿಕಿತ್ಸಕರ ಸಹಿ ನಕಲು ಮಾಡಿ  ಅಕ್ರಮವೆಸಗಿರುವ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಚಿಕ್ಕಬಳ್ಳಾಪುರ ನಗರ ಠಾಣೆ ಆರಕ್ಷಕ ಉಪ ನಿರೀಕ್ಷಕರಿಗೆ ಕೋರಿದ್ದರು.

ಶಿಕ್ಷಕರಿಗೆ ನೋಟಿಸ್‌: ಈಗ 2015 ಜೂನ್‌ 4ರಿಂದ 2018ರ ಜನವರಿ 1 ರವರೆಗೂ ವೈದ್ಯಕೀಯ ವೆಚ್ಚ ಮರು ಪಾವತಿ ಮಾಡಿಕೊಳ್ಳಲು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರ ಸಹಿಯನ್ನು ಆಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ನಕಲು ಮಾಡಿ 107  ಮಂದಿಗೆ ದೃಢೀಕರಣ ನೀಡಿರುವ ಹಿನ್ನೆಲೆಯಲ್ಲಿ 107 ಮಂದಿ ಶಿಕ್ಷಕರನ್ನು ವಿಚಾರಣೆಗೆ ಕರೆದಿದ್ದು, ಸೋಮವಾರ 15 ಮಂದಿ ಶಿಕ್ಷಕರು ವಿಚಾರಣೆಗೆ ಹಾಜರಾಗಿದ್ದರು. ಒಟ್ಟು 7 ದಿನಗಳನ್ನು ನಿಗದಿಪಡಿಸಿ ಶಿಕ್ಷಕರ ನ್ನು ಚಿಕ್ಕಬಳ್ಳಾಪುರ ನಗರ  ಠಾಣೆ ಪೊಲೀಸರು ವಿಚಾರಣೆಗೆ ಕರೆದಿದ್ದು, ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿದೆ.

ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ವಂಶಿಕೃಷ್ಣ ಈ ಹಿಂದೆ ಶಸ್ತ್ರಚಿಕಿತ್ಸಕರ ಸಹಿ ನಕಲು ಮಾಡಿ ಕೆಲ ಶಿಕ್ಷಕರಿಗೆ ವೈದ್ಯಕೀಯ ವೆಚ್ಚ ಮರು ಪಾವತಿಗೆ ದೃಢೀಕರಣ ಮಾಡಿದ್ದು, ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ತಪ್ಪಿತಸ್ಥರ  ಮೇಲೆ ಕ್ರಮ ವಹಿಸುವಂತೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.
-ಡಾ.ರಮೇಶ್‌, ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯರು

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.