ದುಶ್ಚಟಗಳಿಂದ ಸಮಾಜದ ಸ್ವಾಸ್ಥ್ಯ ಹಾಳು: ಅರುಣ್‌ ಭಗವಾನ್‌


Team Udayavani, Oct 27, 2019, 3:00 AM IST

dushchata

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ, ಯುವ ಪೀಳಿಗೆಯು ಮೋಜು, ಮಸ್ತಿಗಾಗಿ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುವಂತಾಗಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಧಕ್ಕೆ ಆಗುತ್ತಿದೆ ಎಂದು ಶ್ರೀ ಸತ್ಯಜ್ಞಾನ ಸಿದ್ಧಾಶ್ರಮದ ಶ್ರೀ ಅರುಣ್‌ ಭಗವಾನ್‌ ತಿಳಿಸಿದರು.

ತಾಲೂಕಿನ ಮಾರಗಾನಹಳ್ಳಿ ಗ್ರಾಮದ ಚನ್ನಕೇಶವಸ್ವಾಮಿ ಸಮುದಾಯ ಭವನದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಟ್ರಸ್ಟ್‌ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ 1,421 ನೇ ಮದ್ಯ ವರ್ಜನ ಶಿಬಿರ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನೆಮ್ಮದಿಯ ಬದುಕು: ಮನುಷ್ಯ ಕೆಟ್ಟ ಚಟಗಳಿಂದ ದೂರವಾದರೆ ಮಾತ್ರ ಉತ್ತಮ ಆರೋಗ್ಯದೊಂದಿಗೆ ಸುಖೀ ಸಂಸಾರಿಯಾಗಿ ಬಾಳಲು ಸಾಧ್ಯ. ಇಡೀ ಕುಟುಂಬ ನೆಮ್ಮದಿಯಿಂದ ಇರಬಹುದು. ಮನುಷ್ಯನ ದುಶ್ಚಟಗಳನ್ನು ದೂರ ಮಾಡುವ ಉದ್ದೇಶದಿಂದ ಕ್ಷೇತ್ರ ಧರ್ಮಸ್ಥಳ ಇಂತಹ ಶಿಬಿರಗಳನ್ನು ಏರ್ಪಡಿಸಿರುವುದು ನೂರಾರು ಕುಟುಂಬಗಳಿಗೆ ನೆಮ್ಮದಿಯ ಬದುಕು ರೂಪಿಸುತ್ತಿದೆ ಎಂದರು.

ಕುಡಿತದಿಂದ ಮನುಷ್ಯ ಮಾನಸಿಕ, ಶಾರೀರಕ ಹಾಗೂ ಸಾಮಾಜಿಕ ಸ್ಥಿತಿ ಹಾಳು ಮಾಡಿಕೊಂಡಿರುತ್ತಾನೆ. ಹಾಗಾಗಿ ಕುಡಿತದ ಚಟ ತ್ಯಜಿಸಿದವರು ನೆಮ್ಮದಿ ಜೀವನ ನಡೆಸಿ ಸಮಾಜದಲ್ಲಿ ಒಳ್ಳೆಯ ಹೆಸರು ಪಡೆದು ಮತ್ತೂಬ್ಬರಿಗೆ ಮಾದರಿಯಾಗಬೇಕು ಎಂದರು.

ಯೋಗ, ಧ್ಯಾನ ಮಾಡಿ: ಕುಡಿತದ ಚಟಕ್ಕೆ ಅಂಟಿಕೊಂಡರೆ ಕುಟುಂಬದ ನೆಮ್ಮದಿ ಜೊತೆಗೆ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕುಡಿತ ಚಟದ ಬದಲಿಗೆ ಯೋಗ, ಧ್ಯಾನ, ಪುಸ್ತಕ ಓದುವ ಹವ್ಯಾಸವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಶಿಬಿರಗಳಿಂದ ಸಂಸ್ಕಾರ: ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಯಲುವಹಳ್ಳಿ ಎನ್‌.ರಮೇಶ್‌ ಮಾತನಾಡಿ, ಕುಡಿತದ ಹವ್ಯಾಸ ಹೊಂದಿರುವವರು ಕುಡಿತ ಬಿಟ್ಟು ಹೊಸ ಜೀವನ ನಡೆಸುವುದರ ಮೂಲಕ ಎಲ್ಲರೊಂದಿಗೆ ಕೂಡಿ ಬಾಳುವಂತರಾಗಬೇಕು. ಪ್ರತಿಯೊಬ್ಬರಿಗೂ ಸಂಸ್ಕಾರ ಕೊಡುವ ಇಂತಹ ಶಿಬಿರಗಳು ಸಮಾಜಕ್ಕೆ ಮಾದರಿ. ಕುಡಿತದ ಚಟ ಕೇವಲ ಸಂಸಾರಗಳನ್ನಷ್ಟೇ ಅಲ್ಲದೇ ಸಮಾಜವನ್ನು ಕೂಡ ಹಾಳು ಮಾಡುತ್ತಿದೆ ಎಂದರು.

ಸ್ವಾಸ್ಥ್ಯ ಸಮಾಜಿ ನಿರ್ಮಿಸಿ: ಮದ್ಯ ವರ್ಜನ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಚನ್ನಕೃಷ್ಣಪ್ಪ ಮಾತನಾಡಿ, ಒಬ್ಬ ವ್ಯಕ್ತಿಯನ್ನು ಕುಡಿತದಿಂದ ಪರಿವರ್ತನೆ ಮಾಡಿ ಸಂಸ್ಕಾರ ಕೊಡುವ ಶ್ರೇಷ್ಠ ಮತ್ತು ಪುಣ್ಯ ಕಾರ್ಯವನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಟ್ರಸ್ಟ್‌ ಮಾಡುತ್ತಿದೆ. ಇಂತಹ ಹಲವು ಶಿಬಿರಗಳನ್ನು ಹಲವು ಸಂಸ್ಥೆಗಳು ಮಾಡುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬೇಕಿದೆ ಎಂದರು.

ಶಿಬಿರದಲ್ಲಿ ವಿಶೇಷಚೇತನರಿಗೆ ಉಪಯುಕ್ತ ಸಲಕರಣೆಗಳನ್ನು ವಿತರಿಸಲಾಯಿತು. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಿ.ವಸಂತ್‌, ಯೋಜನಾಧಿಕಾರಿ ಎಚ್‌.ಮಹೇಶ್‌, ಮುಖಂಡರಾದ ಸಂದೀಪ್‌ರೆಡ್ಡಿ, ಎಂ.ರಾಜಣ್ಣ, ರಾಮಕೃಷ್ಣರೆಡ್ಡಿ, ಉಮೇಶ್‌, ಅಭಿಲಾಷ್‌ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.