4 ತಿಂಗಳಿಂದ ಅಸಮರ್ಪಕ ನೀರು ಪೂರೈಕೆ: ಪ್ರತಿಭಟನೆ


Team Udayavani, May 5, 2019, 3:00 AM IST

4tingalininda

ಗೌರಿಬಿದನೂರು: ಕುಡಿವ ನೀರು, ಬೀದಿದೀಪ, ಚರಂಡಿ ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುವಂತಾಗಿದ್ದು, ನಗರಸಭೆ ಕೂಡಲೇ ಸೂಕ್ತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ನಗರದ ಕೂಗಳತೆಯ ದೂರದಲ್ಲಿರುವ ಮಿಟ್ಟೆನಹಳ್ಳಿ ಬಡಾವಣೆ ಮಹಿಳೆಯರು ಕುಡಿಯುವ ನೀರಿನ ಕ್ಯಾನುಗಳನ್ನು ಪ್ರದರ್ಶಿಸಿ ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.

ನಗರಸಭೆ ವ್ಯಾಪ್ತಿಗೆ ಬರುವ ಮಿಟ್ಟೆನಹಳ್ಳಿ ಬಡಾವಣೆಯಲ್ಲಿ (23ನೇ ವಾರ್ಡ) ಸುಮಾರು 100ಕ್ಕೂ ಹೆಚ್ಚು ಮನೆಗಳಿದ್ದು, ಇಲ್ಲಿನ ಜನತೆ ಕನಿಷ್ಠ ಮೂಲಭೂತ ಸೌಕರ್ಯಯಗಳಿಲ್ಲದೆ ಪರಿತಪಿಸುವಂತಾಗಿದೆ ಆಕ್ರೋಶ ವ್ಯಕ್ತಪಡಿಸಿದರು.

4 ತಿಂಗಳಿಂದ ನೀರಿಲ್ಲ: ಕಳೆದ ಶಿವರಾತ್ರಿ ಹಬ್ಬದಿಂದ (ನಾಲ್ಕು ತಿಂಗಳಿಂದ)ಈವರೆಗೂ ಬಡಾವಣೆಗೆ ನೀರು ಸರಬರಾಜಾಗಿಲ್ಲ. ಅಮಾವಾಸ್ಯೆಗೋ, ಪೌರ್ಣಮಿಗೋ ಒಂದು ಟ್ಯಾಂಕರ್‌ ನೀರು ಬರುತ್ತದೆ. ಅದು ಸಿಕ್ಕರೆ ಸಿಕು¤, ಇಲ್ಲವಾದರೆ ಇಲ್ಲ. ಕುಡಿವ ನೀರಿಗಾಗಿ ಹಾಹಾಕಾರು ಶುರುವಾಗಿದೆ.

ಪ್ರತಿನಿತ್ಯ ಹಣ ಕೊಟ್ಟು ಎರಡು ಕ್ಯಾನ್‌ ನೀರು ಖರೀದಿಸಬೇಕು, ಕೂಲಿಯಲ್ಲಿ ಬರುವ ಹಣವೆಲ್ಲ ನೀರಿಗೆ ಇಟ್ಟರೆ ಹೊಟ್ಟೆಗೇನು ಮಾಡೋದು, ನಗರಸಭೆಯವರಿಗೆ ದೂರು ನೀಡಿದರೆ ಇಗೋ ಬಂತು ಟ್ಯಾಂಕರ್‌ ಅಂತಾರೆ. ಟ್ಯಾಂಕರೂ ಇಲ್ಲ ನೀರು ಇಲ್ಲ ಎಂದ ಮಹಿಳೆಯರು, ನಗರಸಭೆಗೆ ಹಿಡಿಶಾಪ ಹಾಕಿದರು.

ಸೊಳ್ಳೆಗಳ ತಾಣ: ಚರಂಡಿ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಆ ಸ್ಥಳಗಳು ಸೊಳ್ಳೆಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿವೆ. ಇಲ್ಲಿನ ಜನರು ಸಾಂಕ್ರಮಿಕ ರೋಗದ ಭೀತಿಯಲ್ಲಿ ದಿನದೂಡುವಂತಾಗಿದೆ ಎಂದು ಬಡಾವಣೆಯ ಗಂಗಮ್ಮ ಅಳಲು ತೋಡಿಕೊಂಡರು.

ಕಗ್ಗತ್ತಲು: ಬಡಾವಣೆಯಲ್ಲಿ ಸಂಜೆಯಾದರೆ ಕಗ್ಗತ್ತಲು ಆವರಿಸುತ್ತದೆ, ವಿದ್ಯುತ್‌ ಕಂಬಗಳಿದ್ದರೂ ಬೀದಿ ದೀಪಗಳು ಅಳವಡಿಸಿಲ್ಲ. ನಗರ ಮತ್ತು ಇನ್ನಿತರೆ ಹೊಲಗದ್ದೆಗಳಲ್ಲಿ ಕೂಲಿನಾಲಿ ಮಾಡಿಕೊಂಡು ಮನೆಗೆ ಬರುವಾಗ ಕಗ್ಗತ್ತಲು ಆವರಿಸಿರುತ್ತದೆ. ಬೆಳಕಿಲ್ಲದೇ ವಿಷಜಂತುಗಳ ಆತಂಕ ಕಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಪರಿಹಾರ: ಸ್ಥಳಕ್ಕಾಗಮಿಸಿದ ನಗರಸಭೆ ಮಾಜಿ ಉಪಾಧ್ಯಕ್ಷ ಆರ್‌.ಪಿ.ಗೋಪಿನಾಥ್‌ ಮತ್ತು ನಗರ ನೀರು ಸರಬರಾಜು ವ್ಯವಸ್ಥಾಪಕ ಮುರಳಿ ಮಾತನಾಡಿ, ಇನ್ಮುಂದೆ ಸಮರ್ಪಕವಾಗಿ ನೀರು ಸರಬರಾಜು ಮಾಡುವುದರ ಜತೆಗೆ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದರೂ ಮಹಿಳೆಯರು ಪ್ರತಿಭಟನೆ ಹಿಂಪಡೆಯಲಿಲ್ಲ.

ಕೆಲ ಕಾಲ ಮಹಿಳೆಯರು ಮತ್ತು ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದರಿಂದ ಕೂಡಲೇ ಟ್ಯಾಂಕರ್‌ ಕಳುಹಿಸಲಾಗುವುದು. ಚರಂಡಿ ಸ್ವತ್ಛತೆಗೆ ಸಿಬ್ಬಂದಿಯನ್ನು ಕಳುಹಿಸುತ್ತಿದ್ದು, ಇನ್ನೆರಡು ದಿನಗಳಲ್ಲಿ ಬೀದಿ ದೀಪಗಳ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ನಂತರ ನೀರಿನ ಟ್ಯಾಂಕರ್‌ ಕಳುಹಿಸಿದ ಬಳಿಕವಷ್ಟೇ ಪ್ರತಿಭಟನೆ ಹಿಂಪಡೆದರು.

ನಿತ್ಯ ನೀರಿಲ್ಲದೇ ಸ್ನಾನಕ್ಕೆ ಹಾಗೂ ಬಹಿರ್ದೆಸೆಗೂ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸ್ನಾನ ವಾರಕ್ಕೊಮ್ಮೆ ಮಾಡಿಕೊಳ್ಳುವ ಪರಿಸ್ಥಿಗೆ ಬಂದಿದ್ದೇವೆ. ಸ್ವತ್ಛತೆ ಮರೀಚಿಕೆಯಾಗಿ ಸಾಂಕ್ರಮಿಕ ರೋಗದ ಭೀತಿ ಕಾಡುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ.
-ಪ್ರೇಮಮ್ಮ, ಬಡಾವಣೆಯ ನಿವಾಸಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.