ಬ್ಯಾಂಕಾಕ್‌ನಿಂದ ಹಿಂದಿರುಗಿದ್ದ ವ್ಯಾಪಾರಿಗೆ ತಪಾಸಣೆ


Team Udayavani, Mar 16, 2020, 3:00 AM IST

bankok-

ಚಿಕ್ಕಬಳ್ಳಾಪುರ: ಬ್ಯಾಂಕಾಕ್‌ನಿಂದ ಹಿಂದಿರುಗಿ ಬಂದಿದ್ದ ವ್ಯಕ್ತಿಯೋರ್ವ ಕೊರೊನಾ ವೈರಸ್‌ ಹರಡಿರುವ ಸಾಧ್ಯತೆ ಇರಬಹುದೆಂದು ಭೀತಿಗೊಂಡು ನಗರದ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಗಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದ್ದು, ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಕೊರನಾ ಭೀತಿ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ.

ಜಮ್ಸ್‌ ಸ್ಟೋನ್‌ ವ್ಯಾಪಾರಿ ಬ್ಯಾಂಕಾಕ್‌ಗೆ ತೆರಳಿ ಕಳೆದ ಮಾ.7 ರಂದು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸ್ವಗ್ರಾಮ ಅಲ್ಲೀಪುರಕ್ಕೆ ಹಿಂದಿರುಗಿದ್ದಾನೆ. ಈ ವೇಳೆ ಆತನಲ್ಲಿ ಶಂಕಿತ ಕೊರಾನ ವೈರಸ್‌ ಲಕ್ಷಣಗಳು ಕಾಣಿಸಿಕೊಂಡು ಆರೋಗ್ಯದಲ್ಲಿ ತುಸು ಏರುಪೇರು ಕಂಡಿದೆ. ಭಯಭೀತನಾಗಿ ಜಿಲ್ಲಾಸ್ಪತ್ರೆಗೆ ಆಗಮಿಸಿ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾನೆ.

ತಜ್ಞ ವೈದ್ಯರ ಪರಿಶೀಲನೆ: ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೇಶ್‌ಗೌಡ ಮುಂದಾಳತ್ವದಲ್ಲಿ ಜಿಲ್ಲಾಸ್ಪತ್ರೆಯ ನುರಿತ ವೈದ್ಯರು ಅಲ್ಲೀಪುರದ ವ್ಯಾಪಾರಿಯ ಆರೋಗ್ಯ ತಪಾಸಣೆ ನಡೆಸಿದ್ದು, ಕೊರೊನಾ ವೈರಸ್‌ ಲಕ್ಷಣ ಇಲ್ಲದಿರುವುದನ್ನು ದೃಢಪಡಿಸಿಕೊಂಡು ಮನೆಗೆ ವಾಪಸು ಕಳಿಸಿದ್ದಾರೆ. ಜಮ್ಸ್‌ ಸ್ಟೋನ್‌ ವ್ಯಾಪಾರಿಯಾಗಿರುವ ಆತ ಸಾಕಷ್ಟು ಬಾರಿ ಬ್ಯಾಂಕಾಕ್‌ಗೆ ಹೋಗಿ ವಾಪಸ್‌ ಆಗಿದ್ದನೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯೋಗೇಶ್‌ಗೌಡ ತಿಳಿಸಿದರು.

ಸಾರ್ವಜನಿಕ ವಲಯದಲ್ಲಿ ಆತಂಕ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲ್ಲೀಪುರದ ಜಮ್ಸ್‌ ವ್ಯಾಪಾರಿಗೆ ಶಂಕಿತ ಕೊರನಾ ವೈರಸ್‌ ಲಕ್ಷಣ ಕಾಣಿಸಿಕೊಂಡಿದೆ ಎಂದು ಸ್ವಯಂ ಆತನೆ ಜಿಲ್ಲಾಸ್ಪತ್ರೆಗೆ ಬಂದು ವೈದ್ಯರ ತಪಾಸಣೆಗೆ ಒಳಗಾದ ವಿಷಯ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಕೆಲಕಾಲ ಆತಂಕ ಮೂಡಿಸಿದರೂ ವೈದ್ಯರ ತಂಡ ವ್ಯಾಪಾರಿಯಲ್ಲಿ ಕೊರೊನಾ ವೈರಸ್‌ ಲಕ್ಷಣ ಇಲ್ಲ ಎಂದು ದೃಢಪಡಿಸಿದ ಬಳಿಕ ಆರೋಗ್ಯ ಇಲಾಖೆ ಅಧಿಕಾರಿಗಳು ಸಹ ನೆಮ್ಮದಿಯ ನಿಟ್ಟಿಸಿರು ಬಿಟ್ಟರು.

ಅಲ್ಲೀಪುರದಲ್ಲಿ 46 ಮಂದಿ ಮೇಲೆ ನಿಗಾ: ಜಮ್ಸ್‌ ಸ್ಟೋನ್‌ ವ್ಯಾಪಾರಿಗೆ ಕೊರೊನಾ ಲಕ್ಷ್ಮಣಗಳು ಇಲ್ಲದೇ ಇರುವುದನ್ನು ವೈದ್ಯರ ತಂಡ ದೃಢಪಡಿಸಿದ್ದರೂ ವಿದೇಶಕ್ಕೆ ಹೋಗಿ ಬಂದಿರುವುದರಿಂದ ವ್ಯಾಪಾರಿ ಜೊತೆಗೆ ಆತನ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಜೊತೆಗೆ ವಿದೇಶಗಳಿಂದ ಬಂದಿರುವ ಒಟ್ಟು 46 ಮಂದಿ ಮೇಲೆ ಜಿಲ್ಲೆಯ ವೈದ್ಯರ ತಂಡ ನಿಗಾ ವಹಿಸಿ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೇಶ್‌ಗೌಡ ಉದಯವಾಣಿಗೆ ತಿಳಿಸಿದರು.

ಹಲವು ದಿನಗಳ ಹಿಂದೆ ಬ್ಯಾಂಕಾಕ್‌ನಿಂದ ಅಲ್ಲೀಪುರಕ್ಕೆ ವಾಪಸ್‌ ಬಂದಿರುವ ಜಮ್ಸ್‌ ಸ್ಟೋನ್‌ ವ್ಯಾಪಾರಿ ಶಂಕಿತ ಕೊರೊನಾ ವೈರಸ್‌ ಲಕ್ಷ್ಮಣ ಇದೆಯೆಂದು ಭಯ ಭೀತನಾಗಿ ಜಿಲ್ಲಾಸ್ಪತ್ರೆಗೆ ಬಂದಿದ್ದ. ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ರೀತಿಯ ಲಕ್ಷಣಗಳು ಕಾಣಸಿಲ್ಲ. ಜಿಲ್ಲೆಯ ಒಟ್ಟು 46 ಸಂಶಯಾಸ್ಪದ ವ್ಯಕ್ತಿಗಳ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ.
-ಡಾ.ಯೋಗೇಶ್‌ಗೌಡ, ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.