janata darshan: ಉಸ್ತುವಾರಿ ಸಚಿವರ ಜನತಾ ದರ್ಶನದಲ್ಲಿ ಸಮಸ್ಯೆಗಳ ಸ್ಫೋಟ!


Team Udayavani, Sep 26, 2023, 4:19 PM IST

tdy-12

ಚಿಕ್ಕಬಳ್ಳಾಪುರ: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಜನತಾ ದರ್ಶನದಲ್ಲಿ ರಾಜ್ಯದ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಹೆಚ್ಚು ಅರ್ಜಿಗಳ ಸಲ್ಲಿಕೆ ಆಗಿದ್ದು, ಸಲ್ಲಿಕೆಯಾದ ಅಹವಾಲುಗಳ ಪೈಕಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ದೂರು, ದುಮ್ಮಾನಗಳೇ ಜಾಸ್ತಿ ಒಂದಡೆಯಾದರೆ, ರಸಗೊಬ್ಬರ ಸಿಗುತ್ತಿಲ್ಲ, ರಸ್ತೆ ಸರಿಯಿಲ್ಲ, ಪಡಿತರ ಚೀಟಿ, ವಸತಿ, ನಿವೇಶನ ಕಲ್ಪಿಸಿ ಕೊಡಿಯೆಂದು ಅರ್ಜಿ ಹಿಡಿದರೇ ಹೆಚ್ಚು. ಹೌದು, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಜಿಲ್ಲಾ ಕೇಂದ್ರದ ಪೊಲೀಸ್‌ ಸಮುದಾಯ ಭವನದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್‌ ಅವರ ನೇತೃತ್ವದಲ್ಲಿ ಆರಂಭಗೊಂಡ ಚೊಚ್ಚಲ ಮೊದಲ ಜನತಾ ದರ್ಶನ ಜಿಲ್ಲೆಯ ಜನರ ದೂರು, ದುಮ್ಮಾನ ಹೇಳಿಕೊಳ್ಳಲು ವೇದಿಕೆ ಆಯಿತು.

ವಿವಿಧ ಇಲಾಖೆಗಳಿಗೆ ಮನವಿ: ಬೆಳಗ್ಗೆ 11:30ರಿಂದ ಸಂಜೆ 5:30ರ ಯವರೆಗೂ ಅರ್ಜಿ ಸ್ಪೀಕಾರ ನಡೆದು ಬರೋಬ್ಬರಿ 237 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದವು. ಜನತಾ ದರ್ಶನದಲ್ಲಿ ಜನರ ಸಂಖ್ಯೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿದ್ದರೂ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದರೂ ಗ್ರಾಪಂ ಹಾಗೂ ತಾಪಂ ಮಟ್ಟದಲ್ಲಿ ಪರಿಹರಿಸಬಹುದಾಗಿದ್ದ ಸಮಸ್ಯೆಗಳನ್ನು ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನಕ್ಕೆ ಆಗಮಿಸಿ ತಮ್ಮ ಅಹವಾಲು ಸಲ್ಲಿಸಿದರು. ಇದರಿಂದ ಜನತಾ ದರ್ಶನ ಒಂದು ರೀತಿ ಜಿಲ್ಲೆಯ ಜನರ ಸಮಸ್ಯೆಗಳ ಸ್ಫೋಟವಾಗಿ ಜಿಲ್ಲಾಡಳಿತದ ಕಾರ್ಯವೈಖರಿಯನ್ನು ಅಣಕಿಸುವಂತಿತ್ತು. ಬಹಳಷ್ಟು ಮಂದಿ ನಾಗರಿಕರು ವಸತಿ, ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದರೆ ಇನ್ನೂ ಕೆಲವರು ಖಾತೆ ಆಗುತ್ತಿಲ್ಲ. ಪೌತಿ ಖಾತೆ ಮಾಡುತ್ತಿಲ್ಲ ಎಂದು ವಯೋವೃದ್ಧರು , ರೈತರು ಕಂದಾಯ ಅಧಿಕಾರಿಗಳ ವಿರುದ್ಧ ಆರೋಪಗಳ ಸುರಿಮಳೆಗೈದರು. ರಸ್ತೆಗಳು ಸರಿಯಲ್ಲ, ಒಳಚರಂಡಿ ಸಮಸ್ಯೆ ಇದೆ ಅಂತ ಅರ್ಜಿ ಸಲ್ಲಿಸಿದರು. ಕೆಲವರು ಸ್ವಂಯ ಉದ್ಯೋಗ ಕಲ್ಪಿಸಿ, ಸಾಲ, ಸೌಲಭ್ಯ ಕೊಡಿಸಿ ಅಂತ ಮಹಿಳೆಯರು, ವಿಕಲಚೇತನರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮೊರೆ ಇಟ್ಟರು.

ಗ್ಯಾರಂಟಿಗಳು ಸಿಗುತ್ತಿಲ್ಲ ಎಂದು ಅರ್ಜಿ ಹಿಡಿದು ಬಂದ್ರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನದ ವೇಳೆ ಸರ್ಕಾರ ಘೋಷಿಸಿ ಅನುಷ್ಟಾನಗೊಳಿಸುತ್ತಿರುವ ಹಲವು ಗ್ಯಾರಂಟಿಗಳು ಸಿಗದ ಬಗ್ಗೆ ಸಾರ್ವಜನಿಕರು ಅರ್ಜಿ ಹಿಡಿದು ತಂದಿದ್ದರು. ವಿಶೇಷವಾಗಿ ಗೃಹ ಜ್ಯೋತಿ, ಗೃಹಲಕ್ಷ್ಮಿಯೋಜನೆಯಡಿ ನಮಗೆ ಹಣ ಬರುತ್ತಿಲ್ಲ ಎಂದು ಕೆಲ ಮಹಿಳೆಯರು ಅರ್ಜಿ ಹಿಡಿದು ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಅಧಿಕಾರಿಗಳಿಗೆ ಸಲ್ಲಿಸಿದರು.

ಅಧಿಕಾರಿಗಳು, “ಕೈ’ ಮುಖಂಡರು, ಕಾರ್ಯಕರ್ತರ ಕಾರುಬಾರು!: ವಿಪರ್ಯಾಸ ಅಂದರೆ ಜನತಾ ದರ್ಶನದಲ್ಲಿ ಇಲಾಖೆಗಳ ಅಧಿಕಾರಿಗಳು, ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರೇ ಹೆಚ್ಚು ತುಂಬಿ ತುಳಕಿದ್ದು ಎದ್ದು ಕಾಣುತ್ತಿತ್ತು. ಸಾರ್ವಜನಿಕರಗಿಂತ ಹೆಚ್ಚಾಗಿ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಅವರ ಕಚೇರಿ ಸಹಾಯಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಜತೆಗೆ ಕ್ಷೇತ್ರದ ಕಾಂಗ್ರೆಸ್‌, ಮುಖಂಡರು, ಕಾರ್ಯಕರ್ತರ ದಂಡೇ ಹೆಚ್ಚಾಗಿ ಕಂಡು ಬಂತು.

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.