ಕ್ಷಯಮುಕ್ತ ಭಾರತಕ್ಕಾಗಿ ಕೈ ಜೋಡಿಸಿ

ಕ್ಷಯ ರೋಗವನ್ನು ದೇಶದಲ್ಲಿ ಕೊನೆಗಾಣಿಸಿ ಕ್ಷಯಮುಕ್ತ ಭಾರತ ಎಂದು ಘೋಷಿಸುವ ಗುರಿ

Team Udayavani, Jul 22, 2022, 6:36 PM IST

ಕ್ಷಯಮುಕ್ತ ಭಾರತಕ್ಕಾಗಿ ಕೈ ಜೋಡಿಸಿ

ಚಿಕ್ಕಬಳ್ಳಾಪುರ: ಮನೆ ಬಾಗಿಲಿಗೆ ತೆರಳಿ ಕ್ಷಯರೋಗ ಪತ್ತೆ ಹಚ್ಚುವ ಜೊತೆಗೆ ಅದನ್ನು ನಿರ್ಮೂಲನೆ ಮಾಡುವಲ್ಲಿ ರಾಜ್ಯ ಸರ್ಕಾರ ಆ.15ರವರೆಗೆ ಎಲ್ಲಾ ಜಿಲ್ಲೆಯಲ್ಲಿ ಸಕ್ರಿಯ ಆಂದೋಲನವನ್ನು ಇತ್ತೀಚಿಗೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ 11 ಸದಸ್ಯರ ಜೆಎಸ್‌ಎಸ್‌ ತಂಡವು ಚಿಕ್ಕಬಳ್ಳಾಪುರಕ್ಕೂ ಭೇಟಿ ನೀಡಿತ್ತು.

ನಗರ ಹೊರವಲಯದ ಜಿಪಂ ಮಿನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಾ  ಕಾರ್ಯಕ್ರಮವನ್ನು ಜೆ.ಎಸ್‌.ಎಸ್‌ ತಂಡವು ಉದ್ಘಾಟಿಸಿ, ನಂತರ ಜಿಲ್ಲೆಯ ಕ್ಷಯರೋಗ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳುವ ಮೂಲಕ ಪ್ರಗತಿ ಪರಿಶೀಲನೆ ನಡೆಸಿತು.

ಕ್ಷಯ ರೋಗ ಕೊನೆಗಾಣಿಸಿ: ಕರಪತ್ರ ಮತ್ತು ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸುವ ಮೂಲಕ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ತಂಡದ ಸದಸ್ಯ ಡಾ. ರಾಜೇಂದ್ರ ಪಿ.ಜೋಶಿ, 2025ರ ವೇಳೆಗೆ ಕ್ಷಯ ರೋಗವನ್ನು ದೇಶದಲ್ಲಿ ಕೊನೆಗಾಣಿಸಿ ಕ್ಷಯಮುಕ್ತ ಭಾರತ ಎಂದು ಘೋಷಿಸುವ ಗುರಿಯನ್ನು ಹೊಂದಲಾಗಿದೆ. ಎಲ್ಲರೂ ಈ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕಫ‌ ಪರೀಕ್ಷಿಸಿಕೊಳ್ಳಲು ಸಲಹೆ ನೀಡಿ: ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಹಚ್ಚಲು ಆರೋಗ್ಯ ಇಲಾಖೆಯು ಮತ್ತಷ್ಟು ಅರಿವು ಮೂಡಿಸುವ ಚಟುವಟಿಕೆಗಳನ್ನು ರೂಪಿಸಬೇಕು. ರೋಗದ ಲಕ್ಷಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸರ್ಕಾರಿ ಆಸ್ಪತ್ರೆಗೆ ಬಂದು, ಕಫ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೆಚ್ಚು ಅರಿವು ಮೂಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕ್ಷಯಮುಕ್ತ ರಾಜ್ಯವನ್ನಾಗಿಸೋಣ: ಎಲ್ಲರೂ ಒಗ್ಗೂಡಿ ಕ್ಷಯ ರೋಗದ ವಿರುದ್ಧ ಹೋರಾಟ ನಡೆಸಿ, ಕರ್ನಾಟಕವನ್ನು ಕ್ಷಯಮುಕ್ತ ರಾಜ್ಯವನ್ನಾಗಿಸೋಣ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜೊತೆಗೆ ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಅಥವಾ ನಿಕ್ಷಯ್‌ ಸಹಾಯವಾಣಿ 1800116666ಕ್ಕೆ ಕರೆ ಮಾಡಬಹುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಜೆಎಸ್‌ಎಸ್‌ ತಂಡದ ಸದಸ್ಯರಾದ ಡಾ.ರಂಜನಿ ರಾಮಚಂದ್ರನ್‌, ಡಾ.ರಾಜೇಶ್‌ ಎಲ್‌. ಕಡೆಮಣಿ, ಡಾ.ಜಾರ್ಜ್‌ ಬೆಲಾ ಸ್ಟೇಕ್‌, ಡಾ.ಎಸ್‌.ಆನಂದ, ಡಾ.ಶೀಬು ಬಾಲಕೃಷ್ಣ, ಡಾ.ಶಿವವಲ್ಲಿನಾಥನ್‌ ಅರುಣಾಚಲಂ, ವಿN°àಶ್ವರನ್‌, ಸೋಮಸುಂದರನ್‌, ಡಾ.ಹರ್ಷಿದ್‌ ಲಾಂಡೆ, ಡಾ.ಸಮಂತಾ ಗ್ರೇಸ್‌, ಡಾ.ಕೊಪ್ಪಳ್‌ ಶ್ರೀವತ್ಸವಾ, ಜಿಲ್ಲಾ ಕುಟುಂಬ ಕಲ್ಯಾಣಾ ಧಿಕಾರಿ ಡಾ.ಎಸ್‌.ಎಸ್‌.ಮಹೇಶ್‌ ಕುಮಾರ್‌, ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಯೆಲ್ಲಾ ರಮೇಶ್‌ ಬಾಬು, ಡಾ.ಅನಿಲ್‌ ಸೇರಿದಂತೆ ಆರೋಗ್ಯ ಇಲಾಖೆಯ ಅಧಿ ಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.