ಲೋಕಸಭೆಗೆ ಸ್ಪರ್ಧಿಸಲು ಕೆ.ಸುಧಾಕರ್ ‘ಕಾಂಗ್ರೆಸ್’ ಟಿಕೆಟ್ ಕೇಳಿದ್ದಾರೆ: ಪ್ರದೀಪ್ ಈಶ್ವರ್
Team Udayavani, Jul 29, 2023, 2:22 PM IST
ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ.ಕೆ.ಸುಧಾಕರ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಟಿಕೆಟ್ ಕೇಳಿದ್ದಾರೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಾಂಬ್ ಸಿಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಧಾಕರ್ ನಮ್ಮ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿರುವುದು ನಿಜ ಎಂದರು.
ಸುಧಾಕರ್ ಈ ಬಗ್ಗೆ ಇಲ್ಲ ಅಂತ ಹೇಳಲಿ ನೋಡೋಣ ಎಂದು ಸವಾಲು ಹಾಕಿದ ಪ್ರದೀಪ್ ಈಶ್ವರ್, ಆದರೆ ನಮ್ಮ ಪಕ್ಷದ ಕೆಲ ನಾಯಕರು ಅವರ ಭೇಟಿಗೆ ಸುಧಾಕರ್ ಗೆ ಅವಕಾಶ ನೀಡಿಲ್ಲ ಎಂದರು.
ಇದನ್ನೂ ಓದಿ:ಮದ್ಯಪಾನ ಮಾಡದಿದ್ದರೆ ನಾನು.. ʼಜೈಲರ್ʼ ಆಡಿಯೋ ಬಿಡುಗಡೆ ವೇದಿಕೆಯಲ್ಲಿ ʼತಲೈವಾʼ ಮಾತು ವೈರಲ್
ಸುಧಾಕರ್ ಈಗಾಗಲೇ ಕಾಂಗ್ರೆಸ್ ಕದ ತಟ್ಟಿದ್ಸಾರೆ. ಆದರೆ ನಾವು ಅವರನ್ನು ಸೇರಿಸಿಕೊಳ್ಳುವುದಿಲ್ಲ ಎಂದರು.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂಬ ಸುಧಾಕರ್ ಹೇಳಿಕೆಗೆ ಪ್ರತಿಕ್ತಿಯೆ ನೀಡಿದ ಈಶ್ವರ್, ಒಮ್ಮೆ ಕಾಂಗ್ರೆಸ್ ಗೆ ದ್ರೋಹ ಮಾಡಿ ಬಿಜೆಪಿ ಸೇರಿದ್ದಾರೆ. ಈಗ ಮತ್ತೆ ಪಕ್ಷೇತರರಾಗಿ ಚುನಾವಣೆಗೆ ನಿಲ್ಲೋಣ ಅಂತ ಹೇಳುತ್ತಿದ್ಸಾರೆ. ಯಾಕೆ ಸುಧಾಕರ್ ಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲವೇ ಎಂದು ಪ್ರಶ್ನಿಸಿದರು.
ಬುಲೆಟ್ ಗೆ ಏಕೆ ಗನ್: ಅಧಿಕಾರ ಇದ್ದಾಗ ತಗ್ಗಿಬಗ್ಗಿ ನಡೆಯಬೇಕು. ನಾನು ಒಬ್ಬ ಶಾಸಕ, ಇಲ್ಲಿವರೆಗೂ ಗನ್ ಮ್ಯಾನ್ ಇಟ್ಟುಕೊಂಡಿಲ್ಲ. ಅವರು ಶಾಸಕರಿದ್ದಾಗ ಎಸ್ಕಾರ್ಟ್ ಪೊಲೀಸರನ್ನು ಬಳಸುತ್ತಿದ್ದರು. ಆದರೆ ನಾನು ಎಲ್ಲಿ ಬಂದರೂ ಪೊಲೀಸರಿಗೂ ಹೇಳಲ್ಲ. ಬುಲೆಟ್ ಗೆ ಏಕೆ ಗನ್ ಎಂದು ಪ್ರದೀಪ್ ಈಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.