ಸರ್ವಜ್ಞ ಯಾವುದೇ ಜಾತಿ, ಧರ್ಮ, ಸಮುದಾಯಕ್ಕೆ ಸೀಮಿತವಲ್ಲ


Team Udayavani, Feb 21, 2017, 4:02 PM IST

Court-laloo-27-7.jpg

ಚಿಂತಾಮಣಿ: ಕವಿ ಸರ್ವಜ್ಞ 17ನೇ ಶತಮಾನದ ಓರ್ವ ದಾರ್ಶನಿಕ ವ್ಯಕ್ತಿ. ಈತ ಯಾವುದೇ ಜಾತಿ, ಮತ, ಧರ್ಮಕ್ಕೆ ಸಿಮೀತವಾಗಿಲ್ಲ. ಸರ್ವಧರ್ಮಗಳ ಸಮಾನ ವ್ಯಕ್ತಿಯಾಗಿ ತನ್ನ ವಚನಗಳ  ಮೂಲಕ ಸಮಾಜಕ್ಕೆ, ಮಾನವ ಕುಲಕ್ಕೆ ಸಾಕಷ್ಟು ವಿಚಾರ ಧಾರೆಗಳನ್ನು ಎರೆದ ಮಹಾನ್‌ ವ್ಯಕ್ತಿ ಎಂದು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ತಿಳಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಚಿಂತಾಮಣಿ ತಾಲೂಕು ಕುಂಬಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮೂರನೇ ವರ್ಷದ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮುದಾಯಕ್ಕೆ ಸೀಮಿತವಲ್ಲ: ಸರ್ವಜ್ಞ, ಕನಕದಾಸ, ಬಸವಣ್ಣ, ಪುರಂದರದಾಸ, ಕುವೆಂಪುರಂತಹ ಮಹನೀಯರನ್ನು ಒಂದೊಂದು ಸಮುದಾಯಕ್ಕೆ ಮೀಸಲು ಎಂಬಂತೆ ಕಾಣಲಾಗುತ್ತಿದೆ. ಇಂತಹ ಮಹಾನ್‌ ಪುರುಷರಿಗೆ ಜಾತಿ ಭೇದ ಮಾಡುತ್ತಿರುವುದು ಖೇದಕರ. ಇವರೆಲ್ಲ ಯಾವುದೇ ಸಮುದಾಯಕ್ಕೆ ಸೇರಿದವರಲ್ಲ. ಅಂತಹ ಮಹನೀಯರ ಆದರ್ಶಗಳನ್ನು ಪಾಲಿಸಬೇಕು. ಎಲ್ಲರೂ ಒಂದೇ ಎಂಬ ಭಾವನೆ ಹೊಂದಿ ಸಹಬಾಳ್ವೆ ಹೊಂದಬೇಕೆಂದು ಹೇಳಿದರು.

ಸರ್ಕಾರಿ ಸೌಲಭ್ಯ ಸದ್ಬಳಕೆಯಾಗಲಿ: ಕುಂಬಾರ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಆನೇಕ  ಸೌಲಭ್ಯಗಳನ್ನು ನೀಡುತ್ತಿದೆ. ಈ ಎಲ್ಲಾ ಸೌಲಭ್ಯಗಳ ಸದ್ಬಳಕೆ ಪಡೆದು ಎಲ್ಲಾ ಜನಾಂಗದವರು ಸಮಾಜದ ಮುಖ್ಯವಾಹಿನಿಗೆ ಬರ ಬೇಕು. ಕವಿ ಸರ್ವಜ್ಞನ ತತ್ವ ಸಿದ್ಧಾಂತಗಳನ್ನು ಅರಿಯಬೇಕು ಎಂದರು. ಮಹಿಳಾ ಕಾಲೇಜಿನ ಉಪನ್ಯಾಸಕ ಪ್ರೊ.ರಘು ಕಾರ್ಯಕ್ರಮ ಉದ್ಘಾಟಿಸಿದರು. ತಹಶೀಲ್ದಾರ್‌ ಗಂಗಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನಡಂಪಲ್ಲಿ ಶ್ರೀನಿವಾಸ್‌ ಮಾತನಾಡಿದರು.

ಬೃಹತ್‌ ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದ ಬಳಿ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಸ್ತಬ್ದ ಚಿತ್ರಗಳ ಮೆರವಣಿಗೆಯನ್ನು ನಗರದ ಮುಖ್ಯ ರಸ್ತೆಗಳಲ್ಲಿ ನಡೆಸಲಾಯಿತು. ಮೆರವಣಿಗೆಯಲ್ಲಿ, ಡೊಳ್ಳು ಕುಣಿತ, ತಮಟೆ ವಾದ್ಯ ಮನಸೆಳೆದವು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ಉಪಾಧ್ಯಕ್ಷ ನಡಂಪಲ್ಲಿ ಶ್ರೀನಿವಾಸ್‌, ತಹಶೀಲ್ದಾರ್‌ ಗಂಗಪ್ಪ, ಕ್ಷೇತ್ರ ಶಿಕ್ಷಣಾದಿಕಾರಿ ಮೊಹಮ್ಮದ್‌ ಖಲೀಲ್‌, ನಗರಸಭೆ ಸದಸ್ಯ ನಟರಾಜ್‌, ಮಹಿಳಾ ಕಾಲೇಜಿನ ಉಪನ್ಯಾಸಕ ಪ್ರೊ. ರಘು, ಕರವೇ ಅಂಬರೀಷ್‌, ಕುಂಬಾರರ ಸಂಘದ ತಾಲೂಕು ಅಧ್ಯಕ್ಷ ಎಸ್‌.ಕೃಷ್ಣಮೂರ್ತಿ, ಗೌರವಾಧ್ಯಕ್ಷ ಎನ್‌ ಶಂಕರಪ್ಪ, ಉಪಾಧ್ಯಕ್ಷ ಕೆ.ಎಂ.ಅಶ್ವತ್ಥನಾರಾಯಣ, ಕಾರ್ಯದರ್ಶಿ ನೆನ್ಕìಲ್ಲು ಮಂಜುನಾಥ, ಸಹಕಾರ್ಯದರ್ಶಿ ಆರ್‌. ಲಕ್ಷ್ಮೀನಾರಾಯಣ, ಖಜಾಂಚಿ ಚೇಳೂರು ಶ್ರೀರಾಮ್‌, ಪತ್ರಿಕಾ ಪ್ರತಿನಿದ್ಧಿ ಶ್ರೀರಾಮನಗರ ಶಂಕರ್‌, ಲೆಕ್ಕ ಪರಿಶೋಧಕ ಎನ್‌.ಬಾಲಕೃಷ್ಣ ಇತರರು ಇದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.