Lack of facility: 19 ವರ್ಷ ಕಳೆದರೂ ಬಡಾವಣೆಗಿಲ್ಲ ಸೌಕರ್ಯ


Team Udayavani, Oct 28, 2023, 4:19 PM IST

Lack of facility: 19 ವರ್ಷ ಕಳೆದರೂ ಬಡಾವಣೆಗಿಲ್ಲ ಸೌಕರ್ಯ

ಬಾಗೇಪಲ್ಲಿ; ಪಟ್ಟಣದ ಹೊರವಲಯದಲ್ಲಿ ಸುಮಾರು 19 ವರ್ಷಗಳ ಹಿಂದೆ ಪುರಸಭೆ ವತಿಯಿಂದ ನಿರ್ಮಾಣ ಮಾಡಿರುವ ಹೊಸ ಬಡಾವಣೆಯಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ಇಲ್ಲಿ ಅಭಿವೃದ್ಧಿ ಕಾಣದಾಗಿದೆ. ಪಟ್ಟಣದ ಹೊರವಲಯದ ತೀಮ್ಮಾಕಲಪಲ್ಲಿ ಗ್ರಾಮದ ಬಳಿ ಮನೆ ವಂಚಿತ ಫಲಾಭವಿಗಳಿಗೆ ಸರ್ಕಾರ ನಿವೇಶನಗಳನ್ನು ನೀಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಆರ್ಥಿಕ ನೆರವು ಒದಗಿಸಿದೆ.

ಈ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕರು ಸುಮಾರು 400 ನಿವೇಶನಗಳನ್ನು ಪಡೆದು ಈಗಾಗಲೇ 300 ಮನೆಗಳನ್ನು ನಿರ್ಮಾಣ ಮಾಡಿಕೊಂಡು ಕುಟುಂಬ ಸಮೇತ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಾರೆ. ಆದರೆ, ಬಡಾವಣೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ತಾಂಡವಾಡುತ್ತಿದೆ.

ವಿಷಜಂತುಗಳ ಕಾಟ: ಪಟ್ಟಣಕ್ಕೆ ಹೊಂದಿಕೊಂಡಿರುವ ಬಡಾವಣೆಗೆ ಸರಿಯಾದ ರಸ್ತೆ ಮಾರ್ಗವಿಲ್ಲ, ಬೀದಿದೀಪ ಹಾಗೂ ಮನೆಗಳಿಗೆ ವಿದ್ಯುತ್‌ ಮರೀಚೆಕೆಯಾಗಿದೆ. ಕುಡಿಯುವ ನೀರಿಗಾಗಿ ತೀಮ್ಮಾಕಲಪಲ್ಲಿ ಗ್ರಾಮಕ್ಕೆ ಸುಮಾರು 1ಕೀ.ಮೀ.ಪಾದಯಾತ್ರೆ ಮಾಡಿ ನೀರು ತರಬೇಕಾಗಿದೆ. ರಾತ್ರಿ ವೇಳೆಯಲ್ಲಿ ಹಾವು ಮತ್ತು ಚೇಳುಗಳ ಕಾಟ ವಿಪರೀತವಾಗಿದ್ದು, ಮಕ್ಕಳು, ಮಹಿಳೆಯರು ಹಾಗೂ ವೃದ್ಧರೂ ಭಯದ ವಾತಾವರಣದಲ್ಲಿ ಒಡಾಡುತ್ತಿದ್ದಾರೆ.ಈ ಬಡಾವಣೆಯಲ್ಲಿ 1500 ಜನಸಂಖ್ಯೆ ಇದ್ದು, ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳು ಇಲ್ಲದಿರುವುದರಿಂದ ಮಕ್ಕಳು ಪ್ರಾಥಮಿಕ ಹಂತದಲ್ಲೆ ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚರಂಡಿ ವ್ಯವಸ್ಥೆ ಇಲ್ಲ: ಬಡಾವಣೆಯಲ್ಲಿ ಚರಂಡಿಗಳ ವ್ಯವಸ್ಥೆ ಇಲ್ಲದೆ ಮನೆಗಳಿಂದ ಹೊರ ಬರುವ ಕೊಚ್ಚೆ ನೀರು ರಸ್ತೆ ಸಣ್ಣ ಕಾಲುವೆಗಳ ಮೂಲಕ ಹೊರ ಬಿಡಲಾಗುತ್ತಿದೆ ಇದರಿಂದ ಬಡಾವಣೆಯಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ.

ನನ್ನ ಅನುದಾನದಲ್ಲಿ ಈ ಬಡಾವಣೆಯ ಅಭಿವೃದ್ಧಿಗೆ 1ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ಆದರೆ ಈ ಬಡಾವಣೆಯ ನಿವೇಶನಗಳು ಪುರಸಭೆ ವ್ಯಾಪ್ತಿಯಲ್ಲಿವೆ. ಜಮೀನು ಪರಗೋಡು ಗ್ರಾಪಂ ವ್ಯಾಪ್ತಿಯಲ್ಲಿವೆ. ಇದರಿಂದಲೇ ಈ ಅನುದಾನ ಖರ್ಚು ಮಾಡಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪ್ರತ್ಯೇಕವಾಗಿ ಗೆಜಟ್‌ ನೋಟಿಫಿಕೆಷನ್‌ ಮಾಡಿಸಿದ ನಂತರ ಅಭಿವೃದ್ಧಿ ಕೆಲಸಗಳು ಮಾಡಬಹುದಾಗಿದೆ. – ಎಸ್‌.ಎನ್‌.ಸುಬ್ಟಾರೆಡ್ಡಿ, -ಶಾಸಕರು

ಜಿ.ಎಂ.ಗುರುಮೂರ್ತಿ

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.