ಜಿಲ್ಲೆಯಲ್ಲಿ ಸರಳ ಸಪ್ತಪದಿಗೆ ಅಸಡ್ಡೆ !


Team Udayavani, Feb 22, 2020, 3:30 PM IST

cb-tdy-1

ಸಾಂಧರ್ಬಿಕ ಚಿತ್ರ

ಚಿಕ್ಕಬಳ್ಳಾಪುರ: ಸರಳ ಮದುವೆಗೆ ಪ್ರೋತ್ಸಾಹ ಹಾಗೂ ಮದುವೆ ಹೆಸರಿನಲ್ಲಿ ನಡೆಯುವ ದುಂದು ವೆಚ್ಚಗಳಿಗೆ ಕಡಿವಾಣ ಹಾಕಲು ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಇದೇ ಮೊದಲ ಬಾರಿಗೆ ಮುಜರಾಯಿ ದೇಗುಲಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲು ನಿರ್ಧರಿಸಿದೆ. ಆದರೆ, ಜಿಲ್ಲೆಯಲ್ಲಿ ಬಡವರ ಕಲ್ಯಾಣ ಕಾರ್ಯಕ್ರಮಕ್ಕೆ ಸೂಕ್ತ ಪ್ರಚಾರದ ಕೊರತೆಯಿಂದ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಸೊರಗುವಂತಾಗಿದೆ.

ಹೌದು, ಎ ವರ್ಗದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಏ.26 ಹಾಗೂ ಮೇ 24 ರಂದು ಸರಳ ಸಾಮೂಹಿಕ ವಿವಾಹ ಆಯೋಜಿಸುವಂತೆ ಮುಜರಾಯಿ ಇಲಾಖೆ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಕ್ತ ಕ್ರಮಕ್ಕೆ ಸುತ್ತೋಲೆ ಹೊರಡಿಸಿದೆ. ಆದರೂ ಜಿಲ್ಲೆಯಲ್ಲಿ ಮಾತ್ರ ಸಪ್ತಪದಿ ಸರಳ ಸಾಮೂಹಿಕ ವಿವಾಹಗಳ ಆಯೋಜನೆಗೆ ಯಾವುದೇ ಸಿದ್ಧತೆ ನಡೆ ಯದಿರುವುದು ಬಿಡಿ. ಕನಿಷ್ಠ ಅದರ ಬಗ್ಗೆ ಜಿಲ್ಲೆಯ ಜನ ಸಾಮಾನ್ಯರಲ್ಲಿ ಅರಿವಿನ ಕೊರತೆ ಎದ್ದು ಕಾಣುತ್ತಿದೆ.

ಜಿಲ್ಲೆಯ ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರುವ ಎ ದರ್ಜೆ ದೇಗುಲಗಳ ಪೈಕಿ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಐತಿಹಾಸಿಕ ಪ್ರಸಿದ್ಧ ವಿಧುರಾಶ್ವತ್ಥದ ನಾರಾ ಯಣಸ್ವಾಮಿ ದೇವಾಲಯದಲ್ಲಿ ಮಾತ್ರ ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜನೆಗೆ ಸರ್ಕಾರ ಸೂಚಿಸಿದರೂ ಇದುವರೆಗೂ ಜಿಲ್ಲೆಯಲ್ಲಿ ಸರಳ ಸಾಮೂಹಿಕ ವಿವಾಹಗಳ ನೋಂದಣಿ ಬಗ್ಗೆ ಪ್ರಚಾರ ನಡೆದಿಲ್ಲ. ಹೀಗಾಗಿ ಸರ್ಕಾರ ಸೂಚಿಸಿರುವಂತೆ ಏಪ್ರಿಲ್‌ ಮೊದಲ ಹಂತದ ಕಾರ್ಯಕ್ರಮ ನಡೆ ಯುತ್ತಾ? ಇಲ್ಲವಾ ಎನ್ನುವುದು ಇನ್ನೂ ಗೊಂದಲ ದಲ್ಲಿದೆ. ಇದಕ್ಕೆ ತಾಜಾ ಉದಾಹರಣೆಯೆಂದರೆ ಇದುವರೆಗೂ ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಒಂದು ಜೋಡಿಯೂ ನೋಂದಣಿ ಮಾಡಿಸಿಲ್ಲ. ಏಪ್ರಿಲ್‌-ಮೇನಲ್ಲಿ ವಿವಾಹ ನಡೆಸಲು ನಿರ್ಧರಿಸಿದೆ. ಅದಕ್ಕಾಗಿ ಮುಜರಾಯಿ ಇಲಾಖೆ ಸಾಕಷ್ಟು ಕೆಲಸ ಮಾಡುತ್ತಿದೆ.

ಏನು ಸಪ್ತಪದಿ ವಿವಾಹ ಕಾರ್ಯಕ್ರಮ?:  ಇತ್ತೀಚಿನ ದಿನಗಳಲ್ಲಿ ಜನತೆ ಮದುವೆ ಹೆಸರಿನಲ್ಲಿ ದುಂದು ವೆಚ್ಚ ಮಾಡಿ ಆರ್ಥಿಕ ಹೊರೆ ಹೆಚ್ಚಿಸಿಕೊಂಡು ಜೀವನದ ಉದ್ದಕ್ಕೂ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಹೀಗಾಗಿ ಮುಜರಾಯಿ ಇಲಾಖೆ ಸಪ್ತಪದಿ ಸರಳ ಸಾಮೂಹಿಕ ವಿವಾಹ ಯೋಜನೆ ರೂಪಿಸಿ ಆ ಮೂಲಕ ಸರ್ಕಾರದಿಂದಲೇ ವಿವಾಹ ನಡೆಸಿ ಕೊಡುವ ವಿಶಿಷ್ಠ ಕಾರ್ಯಕ್ರಮ ರೂಪಿಸಿದೆ. ಇದಕ್ಕಾಗಿ ಪ್ರತಿ ಜೋಡಿಗೆ 55 ಸಾವಿರ ರೂ, ವೆಚ್ಚ ಮಾಡಲು ನಿರ್ಧರಿಸಿದೆ. ಕಲ್ಯಾಣಕ್ಕೆ ಬರುವ ಪೋಷಕರಿಗೆ ಊಟದ ಜೊತೆಗೆ ವಧು, ವರರಿಗೆ ಸಮವಸ್ತ್ರ, ತಾಳಿ ವಿತರಿಸುತ್ತಿದೆ. ಅನೇಕ ನಿಯಮಾವಳಿ ರೂಪಿಸಿ ಆಯಾ ದೇಗುಲಗಳ ಆಡಳಿತ ಮಂಡಳಿ ಉಸ್ತುವಾರಿಯಲ್ಲಿ ಮದುವೆಗಳನ್ನು ಪಾರದರ್ಶಕವಾಗಿ ಲೋಪವಿಲ್ಲದೆ ನಡೆಸಲು ಸೂಚಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಎಚ್ಚೆತ್ತುಕೊಂಡು ಜಿಲ್ಲೆಯ ಎಲ್ಲಾ ವರ್ಗದ ಜನರಲ್ಲಿ ಸರ್ಕಾರದ ಸಪ್ತಪದಿ ಸರಳ ಸಾಮೂಹಿಕ ವಿವಾಹದ ಕಡೆ ಆಕರ್ಷಿಸುವ ಕಾರ್ಯ ಮಾಡಬೇಕಿದೆ.

ಒಂದು ಜೋಡಿಯೂ ನೋಂದಣಿ ಆಗಿಲ್ಲ :  ಸಪ್ತಪದಿ ಸರಳ ಸಾಮೂಹಿಕ ವಿವಾಹಕ್ಕೆ ಇದುವರೆಗೂ ಒಂದು ಜೋಡಿಯೂ ನೋಂದಣಿ ಮಾಡಿಸಿಲ್ಲ. ಕಾರ್ಯಕ್ರಮದ ಕುರಿತು ಜಿಲ್ಲಾದ್ಯಂತ ಪ್ರಚಾರ ನಡೆಸಬೇಕು. ಆದರೆ ಯಾರೂ ಗಮನ ಕೊಡುತ್ತಿಲ್ಲ. ವಿಧುರಾಶ್ವತ್ಥದಲ್ಲಿ ಮಾತ್ರ ಮುಜರಾಯಿ ದೇಗುಲದಲ್ಲಿ ಕರಪತ್ರ ವಿತರಿಸುತ್ತಿರುವುದು ಬಿಟ್ಟರೆ ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ರಥಯಾತ್ರೆ ಅಥವ ಆಟೋ ಪ್ರಚಾರ ನಡೆಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಪಕ್ಕದ ಜಿಲ್ಲೆಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹದ ಬಗ್ಗೆ ರಥಯಾತ್ರೆ ನಡೆಯುತ್ತಿದೆ. ಸಿದ್ಧತೆಗಳ ಬಗ್ಗೆ ಪದೇ ಪದೇ ಪೂರ್ವಭಾವಿ ಸಭೆಗಳನ್ನು ಹಿರಿಯ ಅಧಿಕಾರಿಗಳು ನಡೆಸುತ್ತಿದ್ದರೂ ಜಿಲ್ಲೆಯಲ್ಲಿ ಮಾತ್ರ ಇದರ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಿ ಕೆಲಸ ಮಾಡದಿರುವುದು ವಿಷಾದಕರ.

ಶಾಸಕರು ಸಿಗಲ್ಲ  ಎಂದುಮೇ ತಿಂಗಳಿಗೆ ಮುಂದೂಡಿಕೆ! :  ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಹೊರಡಿಸಿರುವ ಸುತ್ತೋಲೆ ಪ್ರಕಾರ ಸಪ್ತಪದಿ ಸರಳ ಸಾಮೂಹಿಕ ವಿವಾಹವನ್ನು ಜಿಲ್ಲೆಯಲ್ಲಿ ಏಪ್ರಿಲ್‌ ಹಾಗೂ ಮೇ ನಲ್ಲಿ ಒಟ್ಟು ಎರಡು ಹಂತದಲ್ಲಿ ನಡೆಸಬೇಕು. ಆದರೆ ಏಪ್ರಿಲ್‌ ತಿಂಗಳಲ್ಲಿ ಸ್ಥಳೀಯ ಗೌರಿಬಿದನೂರು ಕ್ಷೇತ್ರದ ಶಾಸಕರು ಇರುವುದಿಲ್ಲ ಎಂಬ ಕಾರಣಕ್ಕೆ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಅಧಿಕಾರಿ ಗಳು ಏಪ್ರಿಲ್‌ ಬಿಟ್ಟು ಮೇ ನಲ್ಲಿಯೇ ನಡೆಸಲು ಸಿದ್ಧತೆ ನಡೆಸುತ್ತಿದ್ದಾ ರೆಂದು ಮುಜರಾಯಿ ಇಲಾಖೆ ಸಿಬ್ಬಂದಿ “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥದಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ನಡೆಸಲಾಗುತ್ತದೆ. ಈಗಾಗಲೇ ಕರಪತ್ರ ಮುದ್ರಿಸಿ ಹಂಚಿಕೆ ಮಾಡಲಾಗುತ್ತಿದೆ. ಆದರೆ, ಇದುವರೆಗೂ ಯಾರೂ ಸರಳ ವಿವಾಹಕ್ಕೆ ನೋಂದಣಿ ಮಾಡಿಸಿಕೊಂಡಿಲ್ಲ. ಏಪ್ರಿಲ್‌ ಬದಲು ಮೇ ನಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹವನ್ನು ವಿಧುರಾಶ್ವತ್ಥದಲ್ಲಿ ಆಯೋಜಿಸಲಾಗುವುದು. – ರಾಜಣ್ಣ, ತಹಶೀಲ್ದಾರ್‌, ಗೌರಿಬಿದನೂರು, ವಿಧುರಾಶ್ವತ್ಥದ ನೋಡಲ್‌ ಅಧಿಕಾರಿ

 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.