ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿದೀಪ


Team Udayavani, Mar 11, 2019, 7:41 AM IST

baduku.jpg

ಬಾಗೇಪಲ್ಲಿ: ಹಿಂದುಳಿದ ಮತ್ತು ಸದಾ ಬರಗಾಲ ಪೀಡಿತ ಪ್ರದೇಶದಲ್ಲಿ ನ್ಯಾಷನಲ್‌ ಕಾಲೇಜು ಪ್ರಾರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಬದುಕು ರೂಪಿಸಿಕೊಳ್ಳುವಂತಹ ಅವಕಾಶ ಮಾಡಿಕೊಟ್ಟಿದ್ದೇ ಅಲ್ಲದೆ ನೂರಾರು ಸಂಖ್ಯೆಯ ಉಪನ್ಯಾಸಕರಿಗೂ ಅನ್ನ ಕೊಟ್ಟು ಬದುಕು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಶ್ರೇಯಸ್ಸು ಶಿಕ್ಷಣ ತಜ್ಞ ಡಾ.ಎಚ್‌.ನರಸಿಂಹಯ್ಯ ಅವರಿಗೆ ಸಲ್ಲುತ್ತದೆ ಎಂದು ನ್ಯಾಷನಲ್‌ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಪಿ.ವಿಜಯಕುಮಾರ್‌ ಅಭಿಪ್ರಾಯ ಪಟ್ಟರು.

ನ್ಯಾಷನಲ್‌ ಕಾಲೇಜಿನಲ್ಲಿ ಅಮೇಜಿಂಗ್‌-1986 ಎ ಬ್ಯಾಚ್‌ನ ವಿದ್ಯಾರ್ಥಿಗಳು ಏರ್ಪಡಿಸಿದ್ದ ಪುನರ್‌ ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1984 ರಲ್ಲಿಯೇ ಉಪನ್ಯಾಸಕ ಹುದ್ದೆಗೆ ಸೇರಬೇಕಾದರೆ ಒಂದು ಲಕ್ಷ ಕೇಳುತ್ತಿದ್ದರು. ಅಂತಹ ಸಂದರ್ಭದಲ್ಲಿ ಒಂದು ಪೈಸೆಯೂ ಪಡೆಯದೆ ನನಗೆ ಉಪನ್ಯಾಸಕ ಹುದ್ದೆ ಕೊಟ್ಟವರು ಡಾ.ಎಚ್ಚೆನ್‌ರವರು ಎಂದು ಸ್ಮರಿಸಿದರು.

ಅಂತಹ ಮಹನೀಯರು ಬಾಗೇಪಲ್ಲಿಯಲ್ಲಿ ಕಾಲೇಜು ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಮೂಲಕ ಬದುಕು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. 1984-85 ರಲ್ಲಿ ಉತ್ತಮ ವಿದ್ಯಾರ್ಥಿಗಳ ಜೊತೆಗೆ ಉತ್ತಮವಾದ ಉಪನ್ಯಾಸಕ ಮಿತ್ರರೂ ಸಿಕ್ಕಿದ್ದರಿಂದ ತೆಲುಗು ಪ್ರಭಾವದ ಪ್ರದೇಶದಲ್ಲಿ ಉಪನ್ಯಾಸಕನಾಗಿ ಮುಂದುವರಿಯಲು ಸಾಧ್ಯವಾಯಿತು ಎಂದರು. 

ನ್ಯಾಷನಲ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪೊ.ಪಿ.ವೆಂಕಟರಾಮ್‌, ನಿವೃತ್ತ ಯೋಧ ಹಾಗೂ ಹಳೆಯ ವಿದ್ಯಾರ್ಥಿ ಕೆ.ಎಲ್‌.ಕೃಷ್ಣಮೂರ್ತಿ ಮಾತನಾಡಿದರು. ಸಹಾಯಕ ನಿರ್ದೇಶಕರಾದ ಡಾ.ಚಿನ್ನಕೈವಾರಮಯ್ಯ, ಡಾ.ಎ.ಎನ್‌.ನಾಗರಾಜ್‌, ಡಾ.ಮಂಜುನಾಥ್‌ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಡಾ.ಚಂದ್ರಮೋಹನ್‌ ರೆಡ್ಡಿ, ಛಾಗಲೇರು ಜಬೀವುಲ್ಲಾ, ಡಾ.ಎಚ್‌.ಅರುಣ್‌ ಕುಮಾರ್‌, ಡಾ.ಪ್ರಸಾದ್‌,

ಸೂರ್ಯನಾರಾಯಣ ರೆಡ್ಡಿ, ಡಾ.ಅಮರನಾರಾಯಣ ರೆಡ್ಡಿ, ತ್ರಿಯಂಭಕಸ್ವಾಮಿ, ಮೆಹಬೂಬ್‌ ಬಾಷ, ಎಂ.ಎಸ್‌.ನರಸಿಂಹಾರೆಡ್ಡಿ, ವೆಂಕಟರೆಡ್ಡಿ, ಶ್ರೀರಾಮ, ವೇಣು, ಮುಸ್ತಫಾ, ಬುಜೇಂದ್ರ, ಜಗನ್ನಾಥರೆಡ್ಡಿ, ವೆಂಕಟರಮಣಾರೆಡ್ಡಿ, ಚಂದ್ರಶೇಖರ ರೆಡ್ಡಿ, ಜುಬೇರ್‌, ಜಿ.ಎಲ್‌.ಮಂಜುನಾಥ್‌ ಇದ್ದರು. ಪ್ರಾಂಶುಪಾಲ ಪ್ರೊ.ಬಿ.ಪಿ.ವಿಜಯ್‌ ಕುಮಾರ್‌, ಪ್ರೊ.ಪಿ.ವೆಂಕಟರಾಮ್‌ ಮತ್ತು ನಿವೃತ್ತ ಯೋಧ ಕೆ.ಎಲ್‌.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.