![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 15, 2020, 7:29 AM IST
ಚಿಕ್ಕಬಳ್ಳಾಪುರ: ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮೇ 19 ರಂದು ಅಂತರ್ಜಲ ಚೇತನ ಯೋಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ತಿಳಿಸಿದರು.
ನಗರದ ಜಿಪಂನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ಅಂತರ್ಜಲ ಚೇತನ ಯೋಜನೆ ಜಾರಿಗೊಳಿಸಲು ಹಮ್ಮಿಕೊಂಡಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಜಲಮೂಲಗಳಾದ ಕಲ್ಯಾಣಿ, ಗೋಕುಂಟೆ, ಕೆರೆ, ನದಿಗಳನ್ನು ಪುನಃಶ್ಚೇತನಗೊಳಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚು ಮಾಡಲು ಜಿಲ್ಲಾದ್ಯಂತ ಸುಮಾರು ಒಂದು ಸಾವಿರ ಕಾಮಗಾರಿಗಳನ್ನು ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.
ನರೇಗಾ ಯೋಜನೆಯಡಿ, ಜಲ ಸಂರಕ್ಷಣೆ ಕಾಮಗಾರಿಗಳಿಗೆ ಆದ್ಯತೆ ನೀಡಿ, ಅಂತರ್ಜಲ ಮಟ್ಟ ಹೆಚ್ಚಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಅಂರ್ತಜಲ ಯೋಜನೆ ಜಿಲ್ಲೆಯಲ್ಲಿ ನೀರು ಸಂರಕ್ಷಣೆಗೆ ಒತ್ತು ನೀಡುವುದರ ಜೊತೆಗೆ ಗ್ರಾಮೀಣ ಭಾಗದ ಬಡ ಜನರಿಗೆ ಊರಿನಲ್ಲೇ ಕೆಲಸ ದೊರಕಿಸಿಕೊಡಲಾಗುತ್ತದೆ ಹಾಗೂ ಜಿಲ್ಲೆಯ ಜಲ ಮೂಲಗಳಾದ ಕೆರೆ, ಕುಂಟೆ, ಬದು ನಿರ್ಮಾಣ,
ಗೋಕುಂಟೆ ಹಾಗೂ ಪೋಷಕ ಕಾಲುವೆಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು ಜಲ ಸಂವರ್ಧನೆ ಹೆಚ್ಚು ಮಾಡಲಾಗುತ್ತದೆ ಎಂದರು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ನೋಮೇಶ್ ಕುಮಾರ್, ಮುಖ್ಯ ಯೋಜನಾಧಿಕಾರಿ ಮಾಧುರಾಮ್, ಯೋಜನಾ ನಿರ್ದೇಶಕರಾದ ಗಿರಿಜಾ ಶಂಕರ್, ಚಿಕ್ಕಬಳ್ಳಾಪುರ ತಾಪಂ ಇಒ ಹರ್ಷವರ್ಧನ್ ಇದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.