ಸ್ಥಳೀಯ ಸಂಸ್ಥೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ

ಬಹುತೇಕ ಕಡೆ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ , ಒಗ್ಗಟ್ಟುಪ್ರದರ್ಶಿಸಿದರೆ ಗದ್ದುಗೆಗ

Team Udayavani, Oct 24, 2020, 3:38 PM IST

ಸ್ಥಳೀಯ ಸಂಸ್ಥೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ

ಚಿಕ್ಕಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿದ  ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಉಪವಿಭಾಗಾಧಿಕಾರಿ ರಘುನಂದನ್‌ ಅವರು ವೇಳಾಪಟ್ಟಿ ಬಿಡುಗಡೆಮಾಡಿದ್ದಾರೆ. ಇದರಿಂದ ಸುಮಾರು ಒಂದೂವರೆ ವರ್ಷಗಳ ನಂತರ ನಗರಸಭಾ ಹಾಗೂ ಪುರಸಭಾ ಸದಸ್ಯರಿಗೆ ಅಧಿಕಾರ ಭಾಗ್ಯ ಒದಗಿ ಬರುವಂತಾಗಿದೆ.

ಶಿಡ್ಲಘಟ್ಟ ನಗರಸಭೆ: ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅ.31 ರಂದು ಚುನಾವಣೆ ನಿಗದಿಯಾಗಿದ್ದು ಮಧ್ಯಾಹ್ನ 2ರಿಂದ 3 ರವರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ 5ರಿಂದ 5:15 ರವರೆಗೆ ನಾಮಪತ್ರಗಳ ಪರಿಶೀಲನೆ, 5:15 ರಿಂದ 5:30 ವರೆಗೆ ನಾಮಪತ್ರ ವಾಪಸ್ಸಾತಿ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 5:30ರ ನಂತರ ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದ್ದು, ಬಳಿಕ ಫಲಿತಾಂಶವನ್ನುಚುನಾವಣಾಧಿಕಾರಿಗಳುಘೋಷಣೆ ಮಾಡಲಿದ್ದಾರೆ.

ನಗರಸಭೆಯಲ್ಲಿ 31 ಸ್ಥಾನಗಳಿದ್ದು, ಕಾಂಗ್ರೆಸ್‌ 13, ಜೆಡಿಎಸ್‌ 10, ಪಕ್ಷೇತರ 4, ಬಿಜೆಪಿ 02 ಹಾಗೂ ಬಿಎಸ್‌ಪಿ 03 ಸದಸ್ಯರು ಚುನಾಯಿತರಾಗಿದ್ದು, ಪಕ್ಷೇತರ ಹಾಗೂ ಬಿಎಸ್ಪಿ ಸದಸ್ಯರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಈಗಾಗಲೇ ಕೆಲ ಪಕ್ಷೇತರ ಸದಸ್ಯರು ಕಾಂಗ್ರೆಸ್‌ ಪಕ್ಷದೊಂದಿಗೆ ಗುರುತಿಸಿ ಕೊಂಡಿದ್ದು, ಕೊನೆಯ ಘಳಿಗೆಯಲ್ಲಿ ನಿರ್ಧಾರ ಬದಲಿಸುತ್ತಾರೆಯೇ? ಅಥವಾ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುತ್ತಾರಾ? ಎಂಬುದು ಕುತೂಹಲ ಕೆರಳಿಸಿದೆ.

ಗೌರಿಬಿದನೂರು ನಗರಸಭೆ: ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನ.01 ರಂದು ಚುನಾವಣೆ ನಿಗದಿಯಾಗಿದ್ದು, ಅಧ್ಯಕ್ಷ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದು,

ಪೂರ್ವಾಹ್ನ 8ರಿಂದ 9 ರವರೆಗೆ ನಾಮಪತ್ರಗಳ ಸ್ವೀಕಾರ, ಪೂರ್ವಾಹ್ನ 11ರಿಂದ 11:15 ವರೆಗೆ ನಾಮಪತ್ರಗಳ ಪರಿಶೀಲನೆ, 11:15 ರಿಂದ 11:30 ವರೆಗೆ ನಾಮಪತ್ರ ವಾಪಸ್ಸಾತಿ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 11:30ರ ನಂತರ ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದ್ದು ಬಳಿಕ ಫಲಿತಾಂಶ ಘೋಷಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಗರಸಭೆಯ 31 ಸದಸ್ಯರ ಸ್ಥಾನಗಳ ಪೈಕಿ ಕಾಂಗ್ರೆಸ್‌ 15, ಪಕ್ಷೇತರ 01, ಜೆಡಿಎಸ್‌ 06, ಬಿಜೆಪಿ 03, ಹಾಗೂ ಪುಟ್ಟಸ್ವಾಮಿಗೌಡ ಬಣದ 6 ಸದಸ್ಯರು ಗೆಲುವು ಸಾಧಿಸಿದ್ದಾರೆ. ಶಾಸಕ ಎನ್‌.ಎಚ್‌. ಶಿವಶಂಕರ್‌ರೆಡ್ಡಿ ಅವರು ಮತ ಚಲಾಯಿಸಲಿರುವುದರಿಂದ ಕಾಂಗ್ರೆಸ್‌ ಪಕ್ಷದ ಸದಸ್ಯರು ಅಧಿಕಾರಕ್ಕೇರುವ ಲಕ್ಷಣಗಳು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೊನೆ ಘಳಿಗೆಯಲ್ಲಿ ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದು ಕಾದು ನೋಡಬೇಕಾಗಿದೆ.

ಚಿಂತಾಮಣಿ ನಗರಸಭೆ: ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನ.1 ರಂದು ಚುನಾವಣೆ ನಿಗದಿಯಾಗಿದ್ದು, ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ ಬಿ ಮಹಿಳೆಗೆ ಮೀಸಲಾಗಿದೆ. ಅಪರಾಹ್ನ 2ರಿಂದ ಅಪರಾಹ್ನ 3 ರವರೆಗೆ ನಾಮಪತ್ರಗಳ ಸ್ವೀಕಾರ, ಅಪರಾಹ್ನ 5ರಿಂದ 5:15 ಗಂಟೆ ವರೆಗೆ ನಾಮಪತ್ರಗಳ ಪರಿಶೀಲನೆ, 5:15 ರಿಂದ 5:30 ವರೆಗೆ ನಾಮಪತ್ರ ವಾಪಸ್ಸಾತಿ ಪ್ರಕ್ರಿಯೆ ನಡೆಯಲಿದೆ. 5:30ರ ನಂತರ ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದ್ದು ಬಳಿಕ ಫಲಿತಾಂಶಘೋಷಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಗರಸಭೆಯ 31 ಸದಸ್ಯರ ಸ್ಥಾನಗಳ ಪೈಕಿ ಜೆಡಿಎಸ್‌ 14, ಕಾಂಗ್ರೆಸ್‌ 01, ಮಾಜಿ ಶಾಸಕ ಸುಧಾಕರ್‌ ಬಣದ 14, ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದು ಇಲ್ಲಿಯೂ ಸಹ ಚುನಾವಣೆ ರಂಗೇರುವ ಸಾಧ್ಯತೆ ಹೆಚ್ಚಾಗಿದೆ.ಪಕ್ಷೇತರ ಮತಗಳು ನಿರ್ಣಾಯಕವಾಗಲಿದ್ದು, ಇಬ್ಬರು ಯಾವ ಕಡೆ ಒಲವು ವ್ಯಕ್ತಪಡಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಚಿಕ್ಕಬಳ್ಳಾಪುರ: ಬಿಜೆಪಿಗೆ ಪ್ರತಿಷ್ಠೆ  :  ಜಿಲ್ಲೆಯ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅ.30 ರಂದು ಚುನಾವಣೆ ನಿಗದಿಯಾಗಿದ್ದು ಮಧ್ಯಾಹ್ನ 12ರಿಂದ ಮಧ್ಯಾಹ್ನ 1ರ ವರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ 3ರಿಂದ 3:15 ರವರೆಗೆ ನಾಮಪತ್ರಗಳ ಪರಿಶೀಲನೆ, 3:15 ರಿಂದ 3:30 ವರೆಗೆ ನಾಮಪತ್ರ ವಾಪಸ್ಸಾತಿ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 3:30ರ ನಂತರ ಚುನಾವಣೆಪ್ರಕ್ರಿಯೆ ಮುಂದುವರಿಯಲಿದ್ದು,ಬಳಿಕ ಫಲಿತಾಂಶ ಘೋಷಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ(ಎ) ಮೀಸಲಾಗಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ತಮ್ಮ ತಮ್ಮ ರಾಜಕೀಯ ಗಾಡ್‌ ಫಾದರ್‌ಗಳ ಮನವೊಲಿಸುವ ಕಾಯಕದಲ್ಲಿ ತೊಡಗಿದ್ದಾರೆ. ಈ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಮಹಿಳೆಯಿಂದ ಇದೀಗ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದರಿಂದ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪ್ರತಿಷ್ಠೆಯಾಗಿದೆ. ನಗರಸಭೆಯಲ್ಲಿ ಕಾಂಗ್ರೆಸ್‌ 16, ಬಿಜೆಪಿ 09, ಪಕ್ಷೇತರ 04, ಜೆಡಿಎಸ್‌2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ರಾಜ್ಯ ಸರ್ಕಾರದಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ನಗರಸಭೆಯಲ್ಲಿ ಆಡಳಿತ ಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ಗೆ ಚುಕ್ಕಾಣಿ ಸಾಧ್ಯತೆ :  ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಪಕ್ಷದ ಸದಸ್ಯರು ಒಗ್ಗಟ್ಟು ಪ್ರದರ್ಶನ ಮಾಡಿದರೆ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಹಾಗೂ ಗೌರಿಬಿದನೂರು ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬಹುದಾಗಿ ಅದೇ ರೀತಿ ಬಾಗೇಪಲ್ಲಿ ಪುರಸಭೆಯಲ್ಲಿ ಸಹ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿಹಿಡಿಯುವ ಸಾಧ್ಯತೆ ಹೆಚ್ಚಾಗಿದೆ. ಚಿಕ್ಕಬಳ್ಳಾಪುರ ನಗರಸಭೆಯ ಚುನಾವಣೆಯಲ್ಲಿ ಮಾತ್ರ ರಂಗೇರಿದ್ದು ಇಲ್ಲಿ ಆಪರೇಷನ್‌ ಕಮಲ ನಡೆಯುವುದೇ? ಎಂಬ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.