
ಮೇ 3ಕ್ಕೆ ಮುಗಿಯಲ್ಲ ರಾಜ್ಯದಲ್ಲಿ ಲಾಕ್ ಡೌನ್: ಸಚಿವ ಸುಧಾಕರ್ ಏನು ಹೇಳಿದ್ರು ಗೊತ್ತಾ?
ರೆಡ್ ಜೋನ್ ಇರುವ ಪ್ರದೇಶಗಳಲ್ಲಿ ಮೇ 3ರ ನಂತರವು ಲಾಕ್ ಡೌನ್ ಮುಂದುವರಿಕೆ ಅಗತ್ಯ
Team Udayavani, Apr 20, 2020, 10:45 PM IST

ಚಿಕ್ಕಬಳ್ಳಾಪುರ: ಈ ಲಾಕ್ ಡೌನ್ ಒಮ್ಮೆ ಮುಗಿದ್ರೆ ಸಾಕಪ್ಪಾ ಅಂತ ನೀವಂದುಕೊಂಡಿದ್ರೆ ಅದಕ್ಕೆ ನೀವು ಮೆ 3ರ ನಂತರವೂ ಕಾಯಬೇಕಾಗುತ್ತಾ? ಈ ಸಂದೇಹಗಳಿಗೆ ಕರ್ನಾಟಕದ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಕೆ. ಸುಧಾಕರ್ ಅವರೇ ಸ್ವತಃ ಉತ್ತರಿಸಿದ್ದಾರೆ.
ಮೇ 3ರವರೆಗೆ ದೇಶಾದ್ಯಂತ ಲಾಕ್ ಡೌನ್ ಪರಿಸ್ಥಿತಿಯನ್ನು ಕೇಂದ್ರ ಸರಕಾರ ಮುಂದುವರಿಸಿದೆ. ಆ ಬಳಿಕ ಲಾಕ್ ಡೌನ್ ತೆರವು ಮಾಡುವ ವಿಚಾರ ಇನ್ನಷ್ಟೇ ನಿರ್ಧಾರವಾಗಬೇಕಿದೆ.
ಆದರೆ ಕೋವಿಡ್ 19 ಸೋಂಕಿತರು ಹೆಚ್ಚಾಗಿದ್ದು ಈಗಾಗಲೇ ಕೇಂದ್ರ ಸರಕಾರದಿಂದ ರೆಡ್ ಜೋನ್ ಪ್ರದೇಶಗಳೆಂದು ಗುರುತಿಸಲ್ಪಟ್ಟಿರುವ ಪ್ರದೇಶಗಳಲ್ಲಿ ಮೇ 3ರ ನಂತರವು ಲಾಕ್ ಡೌನ್ ಮುಂದುವರಿಕೆ ಅಗತ್ಯವೆಂದು ಸಚಿವ ಡಾ.ಕೆ.ಸುಧಾಕರ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ದೇಶದಲ್ಲೇ ಕರ್ನಾಟಕ 11ನೇ ಸ್ಥಾನದಲ್ಲಿದೆ. ಇನ್ನು ಟೆಸ್ಟ್ ರೇಟ್ ನಲ್ಲಿ ಕರ್ನಾಟಕದ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನ ಹರಿಯಾಣ, ಮೂರನೇ ಸ್ಥಾನದಲ್ಲಿ ಕೇರಳ ಇದೆ ಎಂದರು.
ಕೇಂದ್ರ ಸರಕಾರ ಘೋಷಿಸಿರುವ ಈ ಲಾಕ್ ಡೌನ್ ಮೇ 3ರವರೆಗೆ ಯಥಾ ಸ್ಥಿತಿಯಲ್ಲೇ ಮುಂದುವರಿಯುತ್ತದೆ ಆ ಬಳಿಕ ಪರಿಸ್ಥಿತಿಯನ್ನು ಅವಲೋಕಿಸಿ ಸರಕಾರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ನುಡಿದರು.
ಆದರೆ ಈ ಲಾಕ್ ಡೌನ್ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳ ಮೇಲಿನ ನಿರ್ಬಂಧಗಳನ್ನು ಸಂಪೂರ್ಣ ಸಡಿಲಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ನಗರದಲ್ಲಿ ಕೋವಿಡ್-19 ಪ್ರಯುಕ್ತ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿ ನಗರದ 17 ನೇ ವಾರ್ಡ್, 13 ನೇ ವಾರ್ಡ್ ಹಾಗೂ 05 ನೇ ವಾರ್ಡ್ ಗಳಿಗೆ ಭೇಟಿ ನೀಡಿ ತಮ್ಮ ನೇತೃತ್ವದ ಶ್ರೀ ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿದರು
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿ಼ಯಾ ತರನ್ನಮ್, ಎಸ್.ಪಿ. ಮಿಥುನ್ ಕುಮಾರ್, ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.