ಉದ್ಘಾಟನೆಗೆ ಸೀಮಿತವಾದ ಮಿನಿ ವಿಧಾನಸೌಧ


Team Udayavani, Mar 7, 2020, 5:08 PM IST

ಉದ್ಘಾಟನೆಗೆ ಸೀಮಿತವಾದ ಮಿನಿ ವಿಧಾನಸೌಧ

ಚಿಕ್ಕಬಳ್ಳಾಪುರ: ಬಹಳಷ್ಟು ಸರ್ಕಾರಿ ಕಟ್ಟಡಗಳಿಗೆ ಕಾಲಕಾಲಕ್ಕೆ ಸರ್ಕಾರದಿಂದ ಅನುದಾನ ಸಿಗದೇ ವರ್ಷಾನುಗಟ್ಟಲೇ ನಿರ್ಮಾಣದ ಕಾಮಗಾರಿ ಕುಂಟುತ್ತಾ ಸಾಗುವುದನ್ನು ನಾವು ನೋಡಿದ್ದೇವೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಜಿಲ್ಲೆಯಲ್ಲಿ ಬರೋಬ್ಬರಿ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಭವ್ಯ ಕಟ್ಟಡ ಕಾಮಗಾರಿ ಮುಗಿದು ಉದ್ಘಾಟನೆ ಆದರೂ ಅದು ಸಾರ್ವಜನಿಕ ಸೇವೆಗೆ ಲಭ್ಯವಾಗದೇ ಅನುಪಯುಕ್ತವಾಗಿದೆ.

ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ಇಡೀ ಜಿಲ್ಲೆಗೆ ಮಾದರಿಯಾಗಿ ಮಾಜಿ ಕೃಷಿ ಸಚಿವ ಹಾಗೂ ಕ್ಷೇತ್ರದ ಹಾಲಿ ಶಾಸಕ ಎನ್‌.ಹೆಚ್‌. ಶಿವಶಂಕರರೆಡ್ಡಿ ರವರ ವಿಶೇಷ ಪ್ರಯತ್ನದಿಂದ ತಾಲೂಕಿನಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳನ್ನು ಒಂದೇ ಸೂರಿನಡಿ ತರಬೇಕೆಂಬ ಮಹತ್ವಕಾಂಕ್ಷೆ ಹೊತ್ತು 15 ಕೋಟಿ ರೂ. ವೆಚ್ಚದಲ್ಲಿ ಕಂದಾಯ ಇಲಾಖೆಯಿಂದ ನಿರ್ಮಿಸಿರುವ ನೂತನ ಮಿನಿ ವಿಧಾನಸೌಧ ಉದ್ಘಾಟನೆಯಾಗಿ 2 ತಿಂಗಳಾದರೂ ಕ್ಷೇತ್ರದ ಜನರ ಪಾಲಿಗೆ ಅದು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನು ವಂತಾಗಿದೆ.

ಉದ್ಘಾಟನೆ ಆದರೂ ಅನುಪಯುಕ್ತ: ಕಳೆದ ಎರಡು ತಿಂಗಳ ಹಿಂದೆ ಅಂದರೆ ಜ.7 ರಂದು ನೂತನ ಮಿನಿ ವಿಧಾನಸೌಧವನ್ನು ಕಂದಾಯ ಸಚಿವ ಆರ್‌.ಅಶೋಕ್‌ ಪಾಲ್ಗೊಂಡು ಉದ್ಘಾಟಿಸಿ ತಾಲೂಕಿಗೆ ಸಮರ್ಪಿಸಿದ್ದರು. ಇದಕ್ಕೆ ಕ್ಷೇತ್ರದ ಶಾಸಕ ಶಿವಶಂಕರರೆಡ್ಡಿ, ಸಂಸದ ಬಚ್ಚೇಗೌಡ ಹಾದಿಯಾಗಿ ಇಡೀ ಜಿಲ್ಲಾಡಳಿತ ಸಾಕ್ಷಿಯಾಗಿತ್ತು. ಆದರೆ ಉದ್ಘಾಟನೆ ಕಾರ್ಯ ಕ್ರಮ ನಡೆದು ಎರಡು ತಿಂಗಳಾದರೂ ನೂತನ ಕಟ್ಟ ಡಕ್ಕೆ ತಾಲೂಕು ಕಚೇರಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಕಟ್ಟಡಗಳು ಇನ್ನೂ ಸ್ಥಳಾಂತರಗೊಳ್ಳದೇ ಹೊಸ ಕಟ್ಟಡ ನೆನಗುದ್ದಿಗೆ ಬಿದ್ದಿರುವುದು ತಾಲೂಕಿನ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಉದ್ಘಾಟನೆ ಕಾರ್ಯಕ್ರಮ ಅದ್ಧೂರಿ: ಮಿನಿ ವಿಧಾನ ಸೌಧದ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ವನ್ನು ಜ.7 ರಂದು ಇಡೀ ಜಿಲ್ಲಾಡಳಿತ ಮುಂದೆ ನಿಂತು ವಿಶೇಷ ಆಸಕ್ತಿ ವಹಿಸಿ ವೈಭವವಾಗಿ ನಡೆಸಿಕೊಟ್ಟಿತು. ಆದರೆ ಕಟ್ಟಡ ಕ್ಷೇತ್ರದ ಜನರಿಗೆ ಬಳಕೆ ಆಗುವ ರೀತಿಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಗೊಳಿಸುವಲ್ಲಿ ಜಿಲ್ಲಾಡಳಿತ ವಿಶೇಷ ಆಸಕ್ತಿ ವಹಿಸದಿರಿವುದು ಏಕೆ ಎಂದು ಕ್ಷೇತ್ರದ ಜನ ಪ್ರಶ್ನಿಸುತ್ತಿದ್ದಾರೆ.

ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮಿನಿ ವಿಧಾನಸೌಧ ಕಟ್ಟಡಗಳು ಸಮರ್ಪಕವಾಗಿ ಇಲ್ಲದೇ ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳು ಇಂದಿಗೂ ಸ್ವಂತ ನೆಲೆ ಇಲ್ಲದೇ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ಸಾರ್ವಜನಿಕರು ಇಲಾಖೆಗಳ ಸೇವೆ ಪಡೆಯಲು ಖಾಸಗಿ ಕಟ್ಟಡಗಳಲ್ಲಿರುವ ಕಚೇರಿಗಳನ್ನು ಹುಡುಕಾಡುವುದರ ಜೊತೆಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸಿಗದೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ.

ಆದರೆ ತಾಲೂಕು ಕಚೇರಿಯಿಂದ ಹಿಡಿದು ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕಬೇಕೆಂಬ ಮಹತ್ವಕಾಂಕ್ಷೆ ಹೊತ್ತು ನಿರ್ಮಿಸಿದ ಮಿನಿ ವಿಧಾನಸೌಧ ಬಳಕೆಯಾಗದೇ ಇರುವುದು ಜಿಲ್ಲೆಯ ಆಡಳಿತ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಅಧಿಕಾರಿಗಳು ಮೌನ ಏಕೆ? :  ಇಡೀ ಜಿಲ್ಲೆಯಲ್ಲಿ ಗೌರಿಬಿದನೂರಲ್ಲಿ ಮಾದರಿ ಮಿನಿ ವಿಧಾನಸೌಧ ಕಟ್ಟಡ ತಲೆ ಎತ್ತಿದೆ. ಸಾರ್ವಜನಿಕ ಸೇವೆಗಾಗಿ ಉದ್ಘಾಟನೆಗೊಂಡು ಎರಡು ತಿಂಗಳಾಗಿದೆ. ಆದರೆ ಅದರ ಸದ್ಬಳಕೆ ಸಮರ್ಪಕವಾಗಿ ಆಗುತ್ತಿದೆಯೆ? ಇಲ್ಲವಾದರೆ ಏಕೆ ವಿಳಂಬ ಆಗುತ್ತಿದೆ? ತಾಲೂಕು ಮಟ್ಟದ ಕಚೇರಿಗಳು ಇನ್ನೂ ಏಕೆ ಅಲ್ಲಿಗೆ ಸ್ಥಳಾಂತರವಾಗಿಲ್ಲ. ಬಾಕಿ ಕಾಮಗಾರಿ ನಡೆಯಲು ಇಷ್ಟೊಂದು ವಿಳಂಬ ಏಕೆ? ಕಣ್ಗಾವಲು ಇಡಬೇಕಿದ್ದ ಜಿಲ್ಲಾಡಳಿತ ಕೂಡ ಈ ಬಗ್ಗೆ ಮೌನ ವಹಿಸಿರುವುದರಿಂದ ಸ್ಥಳಾಂತರ ಪ್ರಕ್ರಿಯೆ ಇನ್ನಷ್ಟು ವಿಳಂಬ ಕಾರಣ ಎನ್ನುವ ಮಾತು ಆ ಭಾಗದ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಹೊಸ ಮಿನಿ ವಿಧಾನಸೌಧಕ್ಕೆ ಎಲ್ಲಾ ಕಚೇರಿಗಳನ್ನು ಸ್ಥಳಾಂತರಗೊಳಿಸುವಂತೆ ಈಗಾಗಲೇ ಸೂಚಿಸಿದ್ದೇನೆ. ಹೊಸ ತಹಶೀಲ್ದಾರ್‌ ಬಂದಿರುವುದರಿಂದ ವಿಳಂಬ ಆಗಿದೆ. ವಾರದಲ್ಲಿ ಎಲ್ಲಾ ಕಚೇರಿಗಳನ್ನು ನೂತನ ಮಿನಿ ವಿಧಾನಸೌಧಕ್ಕೆ ಸ್ಥಳಾಂತರ ಮಾಡುವಂತೆ ತಹಶೀಲ್ದಾರ್‌ಗೆ ಸೂಚಿಸುತ್ತೇನೆ. – ಎನ್‌.ಎಚ್‌.ಶಿವಶಂಕರರೆಡ್ಡಿ, ಶಾಸಕರು

 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.