ಸಚಿವ ಸುಧಾಕರ್‌ ತಂದೆಗೆ ಸೋಂಕು


Team Udayavani, Jun 23, 2020, 6:19 AM IST

sachiva-sudhkar

ಚಿಕ್ಕಬಳ್ಳಾಪುರ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರ ತಂದೆ ಪಿ.ಎನ್‌.ಕೇಶವರೆಡ್ಡಿಗೆ ಕೋವಿಡ್‌-19 ಸೋಂಕು ದೃಢಪಟ್ಟಿದೆ. ಇದನ್ನು ಸ್ವತಃ ಡಾ.ಕೆ.ಸುಧಾಕರ್‌ ಟ್ವೀಟ್‌ ಮೂಲಕ  ಖಚಿತಪಡಿಸಿದ್ದಾರೆ. ಹಲವು ದಿನಗಳಿಂದ ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಕೇಶವರೆಡ್ಡಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸೋಮವಾರ ಕೋವಿಡ್‌-19 ಟೆಸ್ಟ್‌ಗೆ ಒಳಗಾಗಿದ್ದು, ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. ಹಲವು ದಿನಗಳ ಹಿಂದೆ ಸಚಿವ ಸುಧಾಕರ್‌ ನಿವಾಸದಲ್ಲಿ ಕೆಲಸ ಮಾಡುವ ಅಡುಗೆ ಸಿಬ್ಬಂದಿಯೊಬ್ಬರಿಗೆ ಕೋವಿಡ್‌ -19 ದೃಢಪಟ್ಟ ಹಿನ್ನೆಲೆಯಲ್ಲಿ ಕೇಶವರೆಡ್ಡಿ ಸೇರಿದಂತೆ ಸುಧಾಕರ್‌ ಪತ್ನಿ ಹಾಗೂ ಮಕ್ಕಳನ್ನು ಕೋವಿಡ್‌-19 ಪರೀಕ್ಷೆಗಾಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ಸೋಮವಾರ ದಾಖಲು ಮಾಡಲಾಗಿತ್ತು.

ಕುಟುಂಬಸ್ಥರ ವರದಿ ಬಾಕಿ: ಮಧ್ಯಾಹ್ನ ತಂದೆಯ ಆರೋಗ್ಯದ ಬಗ್ಗೆ ಟ್ವಿಟ್‌ ಮಾಡಿದ್ದ ಡಾ.ಕೆ.ಸುಧಾಕರ್‌, ಕೆಮ್ಮು, ಜ್ವರದಿಂದ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ 82 ವರ್ಷದ ನನ್ನ ತಂದೆಯವರು ಆಸ್ಪತ್ರೆಗೆ  ದಾಖಲಾಗಿದ್ದು, ಕೋವಿಡ್‌ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಗಾಗಿ ಕಾಯುತ್ತಿದ್ದೇವೆ ಎಂದು ಟ್ವೀಟ್‌ ಮಾಡಿದ್ದರು. ಸಂಜೆ 06.22ಕ್ಕೆ ಮತ್ತೆ ಟ್ವೀಟ್‌ ಮಾಡಿ ತಂದೆಯವರ ಕೋವಿಡ್‌ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು.

ಮೂಲತಃ ಶಿಕ್ಷಕರು: 82 ವರ್ಷದ ಪಿ.ಎನ್‌.ಕೇಶವರೆಡ್ಡಿ, ಚಿಕ್ಕಬಳ್ಳಾಪುರ ತಾ.ಪೆರೇಸಂದ್ರ ಗ್ರಾಮದವರು. ಜಿಪಂ ಅಧ್ಯಕ್ಷರಾಗಿ  ಕಾರ್ಯನಿರ್ವಹಿಸಿರುವ ಅವರು, ಮೂಲತಃ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದರು. ನಿವೃತ್ತಿ ಬಳಿಕ ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. 2015 ಸಾಲಿನಲ್ಲಿ ನಡೆದ ಜಿಪಂ ಚುನಾವಣೆಯಲ್ಲಿ ಮಂಡಿಕಲ್‌ ಜಿಪಂ  ಸದಸ್ಯರಾಗಿ ಆಯ್ಕೆಗೊಂಡು ಕಾಂಗ್ರೆಸ್‌ ನಿಂದ ಜಿಪಂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಎರಡೂವರೆ ವರ್ಷದ ಬಳಿಕ ಸ್ವಪಕ್ಷೀಯ ಸದಸ್ಯರ ಬಂಡಾಯಕ್ಕೆ ಮಣಿದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಜಿಪಂ ಸದಸ್ಯರಾಗಿ  ಮುಂದುವರೆ ದಿ ದ್ದಾರೆ. ವಾರದ ಹಿಂದೆ ಸ್ವಗ್ರಾಮ ಪೆರೇಸಂದ್ರಕ್ಕೆ ಆಗಮಿಸಿದ್ದ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಬೆಂಗಳೂರಿನ ನಿವಾಸಕ್ಕೆ ವಾಪಸ್ಸು ಆಗಿದ್ದರು.

ಟಾಪ್ ನ್ಯೂಸ್

7-udupi

Request: ಕರಕುಶಲ ಕರ್ಮಿಗಳಿಗೆ ಸಕಾಲದಲ್ಲಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸೂಚಿಸಿ

Zammer-yathnal

Meeting: ಸಚಿವ ಜಮೀರ್‌ ಭೇಟಿಯಾದ ಶಾಸಕ ಯತ್ನಾಳ್‌! ಹಿಂದಿನ ಉದ್ದೇಶವೇನು ಗೊತ್ತಾ?

ವಂಚನೆಗೀಡಾಗಿ ಪಾಕ್‌ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ

ವಂಚನೆಗೀಡಾಗಿ ಪಾಕ್‌ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ

PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು

PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು

Coimbatore ಸರಣಿ ಸ್ಫೋಟದ ರೂವಾರಿ ಎಸ್‌.ಎ.ಬಾಷಾ ಸಾವು

Coimbatore ಸರಣಿ ಸ್ಫೋಟದ ರೂವಾರಿ ಎಸ್‌.ಎ.ಬಾಷಾ ಸಾವು

ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?

Supreme Court: ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?

Bgv-KCV

Belagavi: ಕಾಂಗ್ರೆಸ್‌ ಅಧಿವೇಶನದಿಂದ ಪಕ್ಷದ ಹೋರಾಟಕ್ಕೆ ಹೊಸ ತಿರುವು: ಕೆ.ಸಿ ವೇಣುಗೋಪಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

4

Udupi: ಹಾವು ಕಡಿದು ಕೃಷಿಕ ಸಾವು

10-uv-fusion

Grandmother’s Story: ಅಜ್ಜಿ ಹೇಳುತ್ತಿದ್ದ ಕತೆಯಲ್ಲಿದ್ದ ಸಂತೋಷ

9-uv-fusion

UV Fusion: ಆದದ್ದೆಲ್ಲ ಒಳ್ಳೆಯದಕ್ಕೆ ಆಗಿದೆ

2

Mangaluru: ಮಹಿಳೆ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.