Mla Pradeep Eshwar: ಮೊನ್ನೆ ಬಿಗ್‌ಬಾಸ್‌, ಈಗ ತೆಲಂಗಾಣದಲ್ಲಿ ಪ್ರಚಾರ!


Team Udayavani, Nov 14, 2023, 2:34 PM IST

Mla Pradeep Eshwar: ಮೊನ್ನೆ ಬಿಗ್‌ಬಾಸ್‌, ಈಗ ತೆಲಂಗಾಣದಲ್ಲಿ ಪ್ರಚಾರ!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್‌ ಈಶ್ವರ್‌ ನೆರೆಯ ತೆಲಂಗಾಣ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿರುವುದಕ್ಕೆ ಜೆಡಿಎಸ್‌ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಜೆಡಿಎಸ್‌ ಎಂಬ ಮುಖಪುಟದಲ್ಲಿ ತನ್ನ ಕ್ಷೇತ್ರದ ಹೂ ಬೆಳೆಗಾರರ ಸಮಸ್ಯೆ ಬಗ್ಗೆ ತಲೆ ಕೆಡಿಸಿಕೊಳ್ಳದೇ, ಪಕ್ಕದ ರಾಜ್ಯದ ಜನರ ಕಿವಿಗೆ ಹೂ ಇಡುತ್ತಿರುವ ಬಿಲ್ಡಪ್‌ ಈಶ್ವರ್‌ ಎಂದು ಬರೆದು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಯ ಅವ್ಯವಸ್ಥೆಯ ದೃಶ್ಯಗಳನ್ನು ಟ್ಯಾಗ್‌ ಮಾಡಿದ್ದಾರೆ.

ಜೆಡಿಎಸ್‌ ಮುಖಂಡರ ಆಕ್ರೋಶ: ಇನ್ನೂ ಚಿಕ್ಕಬಳ್ಳಾಪುರದ ಜೆಡಿಎಸ್‌ ಯುವ ಮುಖಂಡ ಅಖೀಲ್‌ರೆಡ್ಡಿ ಎಂಬುವರು ತಮ್ಮ ಫೇಸ್‌ಬುಕ್‌ನಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಹಾಗೂ ಹೂ ಮಾರುಕಟ್ಟೆ ವ್ಯವಸ್ಥೆಯ ದೃಶ್ಯವನ್ನು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. ಸುಮಾರು 31 ಸಾವಿರ ಮಂದಿ ಲೈಕ್‌ ಒತ್ತಿದ್ದು 1,700 ಮಂದಿ ಕಾಮೆಂಟ್‌ ಮಾಡಿದ್ದಾರೆ.

ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ತಾತ್ಕಾಲಿಕ ಜಾಗದಲ್ಲಿ ನಡೆಯುತ್ತಿರುವ ಹೂ ಮಾರುಕಟ್ಟೆಯ ದುಸ್ಥಿತಿ ಬಗ್ಗೆ ಜೆಡಿಎಸ್‌ ಮುಖಂಡರು ತಮ್ಮ ಆಕ್ರೋಶ ವ್ಯಕ್ತಪಡಿಸುವ ಮೂಲಕ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸದೇ, ಪಕ್ಕದ ರಾಜ್ಯದ ಚುನಾವಣೆಯಲ್ಲಿ ಪ್ರಚಾರಕ್ಕೆ ತೆರಳಿರುವ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಕಿಡಿಕಾರಿದ್ದಾರೆ. ತಾನು ರೈತ ಮಗ ಎಂದು ಹೇಳಿಕೊಂಡು ಓಟ್‌ ಹಾಕಿಕೊಂಡು ಗೆದ್ದು ಬಿಟ್ಟಿದೀರಿ, ಚಿಕ್ಕಬಳ್ಳಾಪುರದಲ್ಲಿ ಸರಿಯಾದ ರಸ್ತೆ ಇಲ್ಲ. ಚರಂಡಿ ಇಲ್ಲ. ಮಳೆ ಬಂದರೆ ಓಡಾಟಕ್ಕೆ ಆಗಲ್ಲ. ಇದಕ್ಕೆ ಪರಿಹಾರ ಕಲ್ಪಿಸಿ, ನೀವು ನೋಡಿದರೆ ಚಿಕ್ಕಬಳ್ಳಾಪುರದಲ್ಲಿ ಏನು ಸಮಸ್ಯೆ ಇಲ್ಲ ಅಂತ ಎಲ್ಲೋ ಹೋಗಿ ಚುನಾವಣೆ ಪ್ರಚಾರದಲ್ಲಿ ಇದ್ದೀರಿ. ಇಲ್ಲಿಗೆ ಬಾರಣ್ಣ, ನೀವು ಇಲ್ಲಿ ಬರಲೇಬೇಕಣ್ಣ ಅಂತ ಯುವ ರೈತರಾಗಿರುವ ಅಖೀಲ್‌ರೆಡ್ಡಿ ಶಾಸಕ ಪ್ರದೀಪ್‌ ಈಶ್ವರ್‌ಗೆ ಕೋರಿದ್ದಾರೆ.

ಕೆಸರು ಗದ್ದೆಯಾದ ಹೂ ಮಾರುಕಟ್ಟೆ!: ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ನಗರದ ಹೊರ ವಲಯದ ಸಿವಿವಿ ಕ್ಯಾಂಪಸ್‌ ಬಳಿ ಇರುವ ತಾತ್ಕಲಿಕ ಹೂ ಮಾರುಕಟ್ಟೆ ಸಂಪೂರ್ಣ ಕೆಸರು ಗೆದ್ದೆಯಾಗಿದ್ದು, ವಾಹನಗಳ ಹಾಗೂ ರೈತರ ಓಡಾಟಕ್ಕೆ ತೀವ್ರ ಸಮಸ್ಯೆ ಆಗಿದೆ. ಹೂ ಮಾರುಕಟ್ಟೆಯ ಅವ್ಯವಸ್ಥೆಯನ್ನು ವಿಡಿಯೋ ಮಾಡಿ ಶಾಸಕ ಪ್ರದೀಪ್‌ ಈಶ್ವರ್‌ಗೆ ಟ್ಯಾಗ್‌ ಮಾಡಿರುವ ನೆಟ್ಟಿಗರು ಮೊದಲು ಚಿಕ್ಕಬಳ್ಳಾಪುರ ಬಾ ಅಂತ ಕರೆಯುತ್ತಿದ್ದು, ಈ ವಿಡಿಯೋ ತುಣಕುಗಳು ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗುತ್ತಿವೆ.

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.