ಆಸ್ತಿ ತೆರಿಗೆ ಪಾವತಿಸದಿದ್ದರೆ ಕ್ರಮ


Team Udayavani, Apr 4, 2019, 3:00 AM IST

asti

ಚಿಂತಾಮಣಿ: ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವವರು ಒಂದು ವಾರ ಅಥವಾ 10 ದಿನಗಳೊಳಗೆ ಆಸ್ತಿ, ನೀರು ಮತ್ತು ಒಳಚರಂಡಿ ಅಳವಡಿಕೆ ತೆರಿಗೆ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಹರೀಶ್‌ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಆದೇಶದ ಮೇರೆಗೆ ನಗರದಲ್ಲಿ ಏ.1 ರಿಂದ 30 ರ ತನಕ 30 ದಿನಗಳ ಕಾಲ ಹಮ್ಮಿಕೊಂಡಿರುವ ಆಸ್ತಿ ತೆರಿಗೆ ವಸೂಲಾತಿ ಆಂದೋಲನಕ್ಕೆ ನಗರದ ಸಾರಿಗೆ ಘಟಕದ ಬಳಿ ಚಾಲನೆ ನೀಡಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರು ಈ ಕೂಡಲೇ ತೆರಿಗೆ ಪಾವತಿಸಬೇಕು ಎಂದು ತಾಕೀತು ಮಾಡಿದ್ದಾರೆ.

ತೆರಿಗೆ ವಸೂಲಿಗೆ ರಾಜಿಯಿಲ್ಲ: ನಗರಸಭೆಯ ಆದಾಯದ ಮೂಲವಾಗಿರುವ ತೆರಿಗೆ ಹಣ ನಿವೇಶನ, ನೀರು, ವಾಣಿಜ್ಯ ಸಂಕೀರ್ಣಗಳು ಸೇರಿದಂತೆ ವಿವಿಧ ರೀತಿಯ ಎಲ್ಲಾ ತೆರಿಗೆಗಳನ್ನು ವಸೂಲಿ ಮಾಡಲಾಗುವುದು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದರು.

ಪರವಾನಗಿ ರದ್ದು ಎಚ್ಚರಿಕೆ: ನಗರದ ಹಲವು ಅಂಗಡಿ, ಖಾಸಗಿ ಆಸ್ಪತ್ರೆ, ಶಾಲಾ ಕಟ್ಟಡಗಳು, ಹೋಟೆಲ್‌ ಸೇರಿದಂತೆ ಕಲ್ಯಾಣ ಮಂಟಪಗಳ ಮಾಲೀಕರು ವರ್ಷಗಳಿಂದ ಸಾವಿರಾರು ರೂ. ತೆರಿಗೆ ಬಾಕಿ ಹೊಂದಿದ್ದು, 30 ದಿನಗಳೊಳಗೆ ತೆರಿಗೆ ಪಾವತಿಸದಿದ್ದರೆ ಪರವಾನಗಿ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದರು.

ತೆರಿಗೆ ವಸೂಲಾತಿಗಾಗಿಯೇ ಕಂದಾಯ ಸಪ್ತಾಹ ನಡೆಸುತ್ತಿದ್ದು, ಆಸ್ತಿ ತೆರಿಗೆ ಪಾವತಿಸದ ಆಸ್ತಿ ಮಾಲೀಕರ ವಿರುದ್ಧ ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಕಾಲಂ 142(3) ಹಾಗೂ 150 ರಂತೆ ಹಾಗೂ ನೀರಿನ ತೆರಿಗೆ ಪಾವತಿಸದಿದ್ದರೆ ಕರ್ನಾಟಕ ಪೌರಸಭೆಗಳ ಅಧಿನಿಯಮ ಮತ್ತು ಬಜೆಟ್‌ ನಿಯಮಗಳು 2006 ರ ಕಾಲಂ 59 ಮತ್ತು 60 ರಂತೆ ವಸೂಲಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಯಾವುದೇ ಮುನ್ಸೂಚನೆ ಇಲ್ಲದೆ ನೀರಿನ ಸಂಪರ್ಕ ಸ್ಥಗಿತಗೊಳಿಸಲಾಗುವುದು ಮತ್ತು ಒಳಚರಂಡಿ ಸಂಪರ್ಕ ಹೊಂದಿರುವವರು ತೆರಿಗೆ ಪಾವತಿಸದಿದ್ದಲ್ಲಿ ಯುಜಿಡಿ ಸಂಪರ್ಕ ಸ್ಥಗಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಂದಾಯ ಅಧಿಕಾರಿ ಸಿ.ಕೆ.ಬಾಬು, ಸಿಬ್ಬಂದಿ ಗಿರೀಶ್‌, ಕರವಸೂಲಿಗಾರರಾದ ನರಸಿಂಹರೆಡ್ಡಿ, ಲಕ್ಷಿಕಾಂತರಾಜು, ಸೇರಿದಂತೆ ಇತರೆ ಸಿಬ್ಬಂದಿ ವರ್ಗದವರು ಇದ್ದರು.

5 ಹಂತಗಳಲ್ಲಿ ಆಂದೋಲನ: ಆಸ್ತಿ ತೆರಿಗೆ ವಸೂಲಾತಿ ಆಂದೋಲನವನ್ನು ಐದು ಹಂತಗಳಲ್ಲಿ ನಡೆಸುತ್ತಿದ್ದು ಮೊದಲನೇ ಹಂತ‌ ಏ.1 ರಿಂದ 5 ರವರೆಗೆ ವಾರ್ಡ್‌ ನಂ. 5,6,7, ಗಳಿಗೆ ಸಂಬಂಧಿಸಿದಂತೆ ನಗರದ ಸಾರಿಗೆ ಘಟಕದ ಮುಂಭಾಗ ಗಣಪತಿ ದೇವಾಲಯದ ಬಳಿ ನಡೆಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಎರಡನೇ ಹಂತವಾಗಿ ಏ.8 ರಿಂದ 12 ರ ವರೆಗೂ ವಾರ್ಡ್‌ ನಂ. 9,10,11, 12,13,14 ವಾರ್ಡ್‌ಗಳಿಗೆ ಸಂಬಂಧಪಟ್ಟಂತೆ ನಗರದ ಬ್ರಹ್ಮಚೈತನ್ಯ ಶ್ರೀರಾಮ ಕಲ್ಯಾಣ ಮಂದಿರ ಎನ್‌.ಆರ್‌ ಬಡಾವಣೆ. ಮೂರನೇ ಹಂತ ಏ.15 ರಿಂದ 20 ವರೆಗೆ ವಾರ್ಡ್‌ ನಂ 15, 16, 17, 18,19, 20ರಲ್ಲಿ ಎಂಜಿ ರಸ್ತೆಯ ಕೆ.ಎಸ್‌.ಸುಬ್ಬರಾಯಪ್ಪ ಹಾರ್ಡ್‌ವೇರ್‌ ಸ್ಟೋರ್ ಪಕ್ಕ ಮತ್ತು ನಾಲ್ಕನೇ ಹಂತ ಏ.22 ರಿಂದ 25ರ ವರೆಗೆ ವಾರ್ಡ್‌ ನಂ. 21,22,23,24, 29, 30 ಗಳಿಗೆ ಸಂಬಂಧಪಟ್ಟಂತೆ ಆಜಾದ್‌ ಚೌಡಕದ ಹರಿಹರೇಶ್ವರ ದೇವಾಲಯದ ಬಳಿ ನಡೆಯಲಿದೆ.

ಕೊನೆಯ ಹಂತ ಏ.26 ರಿಂದ 30ರ ವರೆಗೆ ವಾರ್ಡ್‌ ನಂ 1,2,3,4,25,26,27,28 ಗಳಿಗೆ ಸಂಬಂಧಿಸಿದಂತೆ ವಾಲ್ಮೀಕಿ ವೃತ್ತದ ಸಂಕಷ್ಟಹರ ಗಣಪತಿ ದೇವಾಲಯದ ಬಳಿ ಆಸ್ತಿ ತೆರಿಗೆ ವಸೂಲಾತಿ ಆಂದೋಲನ ನಡೆಯಲಿದ್ದು, ಸಾರ್ವಜನಿಕರು ಆಸ್ತಿ, ನೀರು ಮತ್ತು ಒಳಚರಂಡಿ ಸೇರಿದಂತೆ ಮತ್ತಿತರ ತೆರಿಗೆಗಳನ್ನು ಪಾವತಿಸಬೇಕೆಂದು ಕೋರಿದ್ದಾರೆ. ಏ.1 ರಿಂದ 30 ರೊಳಗೆ ಆಸ್ತಿ ತೆರಿಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೊತ್ತಕ್ಕೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.