ಸಂಕಷ್ಟದಲ್ಲೂ ಕ್ಷೇತ್ರ ಮರೆತ ಸಂಸದ ಬಚ್ಚೇಗೌಡ

ಮಗನ ಕ್ಷೇತ್ರಕ್ಕೆ ಸೀಮಿತ ಕಾರ್ಯಚಟುವಟಿಕೆ; ಏ.3 ರಂದು ಭೇಟಿ ನೀಡಿದ್ದೇ ಕೊನೆ

Team Udayavani, Apr 27, 2020, 4:25 PM IST

ಸಂಕಷ್ಟದಲ್ಲೂ ಕ್ಷೇತ್ರ ಮರೆತ ಸಂಸದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ಹಿನ್ನೆಲೆ ಲಾಕ್‌ಡೌನ್‌ ಇರುವುದರಿಂದ ಜನತೆ ಸಂಕಷ್ಟ ದಲ್ಲಿದ್ದಾರೆ. ಬರದಿಂದ ಕಂಗಲಾಗಿರುವ ಜನತೆಗೆ ನೀರಿನ ದಾಹ ನೀಗುತ್ತಿಲ್ಲ. ರೈತರು ಬೆಳೆದ ಬೆಳೆಗೆ ಮಾರುಕಟ್ಟೆ ಜೊತೆಗೆ ಬೆಲೆ ಕೊಡ ಸಿಗುತ್ತಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿಯೂ ಸಂಸದ ಬಿ.ಎನ್‌.ಬಚ್ಚೇಗೌಡ ಕ್ಷೇತ್ರದ ಕಡೆಗೆ ತಲೆಹಾಕದಿರುವುದು ಚರ್ಚೆಗೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ ಖಾತೆ ಬಿ.ಎನ್‌.ಬಚ್ಚೇಗೌಡರಿಗೆ ಇದ್ದರೂ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಅವರ ಮೇಲಿನ ಜನರ
ನಿರೀಕ್ಷೆಗಳು ಈಗ ಹುಸಿಯಾಗಿದ್ದು, ಅವರ ಕಾರ್ಯವೈಖರಿ ಬಗ್ಗೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಬೇಸರ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಗೌರಿಬಿದನೂರು, ಚಿಕ್ಕಬಳ್ಳಾಪುರ
ತಾಲೂಕುಗಳಲ್ಲಿ ಕೋವಿಡ್ ಸೋಂಕಿತರು ಕಾಣಿಸಿಕೊಂಡು ಜನರು ತಲ್ಲಣಗೊಂಡಿದ್ದಾರೆ. ಮತ್ತೂಂದೆಡೆ ಲಾಕ್‌ಡೌನ್‌ನಿಂದಾಗಿ ಜನ ಸಾಮಾನ್ಯರು, ವಲಸಿಗರು, ಕಾರ್ಮಿಕರು, ಬಡವರು, ಮಧ್ಯಮ ವರ್ಗದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕ್ಷೇತ್ರದ ಸಂಸದರಾಗಿ ಜನರ ಸಂಕಷ್ಟಗಳಿಗೆ ಧ್ವನಿಯಾಗಿ ಜಿಲ್ಲಾಡಳಿತಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ಕ್ಷೇತ್ರದ ಜನರ ಆಶೋತ್ತರಗಳಿಗೆ ಆಸರೆಯಾಗಬೇಕಿದ್ದ ಸಂಸದರು ಈಗ ತಮ್ಮ ಪುತ್ರ ಶಾಸಕರಾಗಿರುವ ಹೊಸಕೋಟೆಗೆ ಸೀಮಿತವಾಗಿರುವುದು ಟೀಕೆಗೆ ಗುರಿಯಾಗಿದೆ.

ಲಾಕ್‌ಡೌನ್‌ ಘೋಷಣೆಯಾಗಿ ತಿಂಗಳು ಕಳೆದರೂ ಸಂಸದ ಬಿ.ಎನ್‌.ಬಚ್ಚೇಗೌಡ, ಇದುವರೆಗೂ ಅಧಿಕಾರಿಗಳ ಸಭೆ ಕರೆದು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿಲ್ಲ. ಒಮ್ಮೆ ಮಾತ್ರ ಉಸ್ತುವಾರಿ ಸಚಿವರಾಗಿದ್ದ ಉಪ ಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ ಕರೆದಿದ್ದ ಸಭೆಯಲ್ಲಿ ಭಾಗವಹಿಸಿ ಹೋಗಿರುವುದು ಬಿಟ್ಟರೆ ಇದುವರೆಗೂ ಕ್ಷೇತ್ರಕ್ಕೆ ಕಾಲಿಟ್ಟಿಲ್ಲ.

ಸಂಸದರ ಕಚೇರಿ ಭಣ ಭಣ: ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಾರ್ಯಾಲಯ ಇದ್ದರೂ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಸಂಸದರು ಹೊಸಕೋಟೆ ಕ್ಷೇತ್ರದಲ್ಲಿ ಬೀಡುಬಿಟ್ಟು ಅಲ್ಲಿನ ಶಾಸಕರಾಗಿರುವ ತಮ್ಮ ಪುತ್ರ ಶರತ್‌ ಬಚ್ಚೇಗೌಡ ಜೊತೆ ಕಾಣಿಸಿಕೊಳ್ಳುತ್ತಿರುವುದು ಬಿಟ್ಟರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕ್ಷೇತ್ರಗಳಲ್ಲಿ ತಲೆ ಹಾಕುತ್ತಿಲ್ಲ ಎನ್ನುವ ಆರೋಪ ಕ್ಷೇತ್ರದ ಮತದಾರರಿಂದ ಕೇಳಿ ಬರುತ್ತಿದೆ.

ಸಂಸದರಿಗೆ ಕ್ಷೇತ್ರದ ಜನರ ಬಗ್ಗೆ ಕಾಳಜಿ ಇಲ್ಲ. ಕೋವಿಡ್ ಸೋಂಕು ಸಂಕಷ್ಟದಿಂದ ಜನ ಸಾಮಾನ್ಯರು, ಕೂಲಿ ಕಾರ್ಮಿಕರು, ರೈತರು ಪರಿತಪಿಸುವಂತಾಗಿದೆ. ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಕುಡಿಯುವ ನೀರು, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು.
● ಎಂ.ಪಿ.ಮುನಿವೆಂಕಟಪ್ಪ, ಕೃಷಿ ಕೂಲಿಕಾರರ ಸಂಘದ ರಾಜ್ಯ ಮುಖಂಡರು

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.