ಮೂರು ತಿಂಗಳಾದ್ರೂ ಕಳ್ಳರ ಬಂಧನ ಇಲ್ಲ


Team Udayavani, Nov 14, 2021, 2:55 PM IST

ಕಳ್ಳತನ

Representative Image used

ಚೇಳೂರು: ಕಳೆದ ಮೂರು ತಿಂಗಳಿಂದ ಒಂದೇ ರಾತ್ರಿ 5 ಕಡೆ ಕಳ್ಳತನಕ್ಕೆ ಯತ್ನಿಸಿದ ಕಳ್ಳರು, ಮೂರು ಕಡೆ ವಿಫ‌ಲವಾಗಿ ಎರಡು ಮನೆಯಲ್ಲಿ ಕಳವು ಮಾಡಿಕೊಂಡು ಹೋಗಿದ್ದರೂ ಪೊಲೀಸರು ಆರೋಪಿಗಳ ಬಂಧಿಸುವಲ್ಲಿ ವಿಫ‌ಲವಾಗಿದ್ದಾರೆ. ಗ್ರಾಮದ ಶಾಂತಿನಗರ ನಿವಾಸಿ ಟಿ.ಎನ್‌. ಸತ್ಯಪ್ಪನಾಯಕ್‌ ಅವರ ಬೆತೇಲ್‌ ಚರ್ಚ್‌ನ ವಸತಿ ನಿಲಯದ ಬೀಗ ಹೊಡೆದು ಒಳನುಗ್ಗಿದ ಕಳ್ಳರು 5 ಸಾವಿರ ರೂ. ಬೆಲೆ ಬಾಳುವ ಮಕ್ಕಳ ಪುಸ್ತಕಗಳು, ಕಲಿಕಾ ಸಾಮಗ್ರಿಗಳು, 5 ಸಾವಿರ ರೂ.ಗೂ ಹೆಚ್ಚು ಹಣ ಇದ್ದ ಹುಂಡಿ ಕಳವು ಮಾಡಿದ್ದಾರೆ.

ಇದನ್ನೂ ಓದಿ:- ಕೊಚ್ಚಿ ಹೋದ ಗ್ರಾ.ಪಂ. ಸದಸ್ಯ ಇನ್ನೂ ಸಿಕ್ಕಿಲ್ಲ..!

ಇದೇವೇಳೆ ಟೀಚರ್‌ ರಾಮು, ಶಿವಣ್ಣ ಅವರ ಬಾಡಿಗೆ ಮನೆ ಬೀಗ ಹೊಡೆದು ಒಳಗೆ ನುಗ್ಗಿದ ಖದೀಮರು ಬೆಲೆ ಬಾಳುವ ವಸ್ತುಗಳು ಸಿಗದ ಕಾರಣ ವಾಪಸ್‌ ಬಂದು, ಅದೇ ರಸ್ತೆಯಲ್ಲಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಿಲಾನ್‌ ಬಾಷ ಅವರ ಮನೆ ಬೀಗ ಮುರಿದು ಬೀರುವಿನಲ್ಲಿದ್ದ 4.8 ಲಕ್ಷ ರೂ. ನಗದು ದೋಚಿಕೊಂಡು, ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಹೋಗಿದ್ದಾರೆ.

ಕಳವಾಗಿದ್ದು ಎರಡಲ್ಲ, ನಾಲ್ಕು ಲಕ್ಷ ರೂ.: ಮುಖ್ಯ ಶಿಕ್ಷಕ ಜಿಲಾನ್‌ ಬಾಷ ಅವರ ಮನೆ ಕಳವು ಪ್ರಕರಣದಲ್ಲಿ 4,80,000 ರೂ. ದೋಚಿದ್ದರೂ ದೂರಿನಲ್ಲಿ 2,10,000 ರೂ. ತೋರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ಕಳ್ಳರ ಪತ್ತೆಗಾಗಿ ಯಾವುದೇ ಪ್ರಯತ್ನ ನಡೆಸುತ್ತಿಲ್ಲ, ಕಳವಾದ ಮನೆ ದಾರಿಯಲ್ಲಿ ಸಿಸಿ ಕ್ಯಾಮೆರಾ ಇದ್ದರೂ ಅವುಗಳ ತನಿಖೆ ಮಾಡಿಲ್ಲ ಎಂದು ಹಣ ಕಳೆದುಕೊಂಡ ಮಾಲಿಕರು ದೂರಿದ್ದಾರೆ.

ದ್ವಿಚಕ್ರ ವಾಹನ ಕಳವು: ಚೇಳೂರು ಗ್ರಾಮದಲ್ಲಿ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳು ಹೆಚ್ಚುತ್ತಿವೆ. ವಾಹನ ಸವಾರರು, ಮಾಲಿಕರು ಭಯಭೀತರಾಗಿದ್ದಾರೆ. ಗ್ರಾಮದ ಜಿಲಾನಿಬಾಷ ದ್ವಿಚಕ್ರ ವಾಹನ ಸೇರಿ ಸಾಬಾಜಾನ್‌, ಬಾರ್‌ ರಹಮತ್ತುಲ್ಲ, ಮಧುಸೂದನರೆಡ್ಡಿ ಇತರ ವಾಹನಗಳು ಕಳವು ಆಗಿವೆ. ಚೇಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದರೂ ಪತ್ತೆ ಮಾಡುವ ಗೋಜಿಗೆ ಹೋಗಲೇ ಇಲ್ಲ.

ಹೆಸರಿಗೆ ಸಿಪಿಐ ಆಫೀಸ್‌: ರಾಜ್ಯ ಸರ್ಕಾರ ಜನರಿಗೆ ಅನುಕೂಲವಾಗಲಿ ಎಂದು ಎರಡು ಪೊಲೀಸ್‌ ಠಾಣೆಗಳಿಗೆ ಒಂದು ಸರ್ಕಲ್‌ ಇನ್ಸ್‌ಪೆಕ್ಟರ್‌ ಆಫೀಸ್‌ ನೀಡಿದ್ದು, ವೃತ್ತ ನಿರೀಕ್ಷಕರು, ಐವರು ಸಿಬ್ಬಂದಿ, ಕಚೇರಿಗೆ ಪೀಠೊಪಕರಣ ನೀಡಿದೆ. ಅಪರಾಧ ಪ್ರಕರಣ ದಿನೇ ದಿನೆ ಹೆಚ್ಚಾಗುತ್ತಿದ್ದರೂ ಗಮನ ಹರಿಸದೇ ಕೇಸಿಗೂ ನಮಗೂ ಸಂಬಂಧ ಇಲ್ಲ ಎಂಬಂತೆ ಇಲ್ಲಿನ ಪೊಲೀಸರು ವರ್ತಿಸುತ್ತಿರುವುದು ಜನತೆಗೆ ಬೇಸರ ತಂದಿದೆ.

ಪ್ರತಿಭಟನೆಗೆ ಸಜ್ಜು: ಚೇಳೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಸ್ತುಗಳನ್ನು ಕಳೆದುಕೊಂಡ ಮಾಲಿಕರು, ರಾತ್ರಿ ಗಸ್ತು ಹೆಚ್ಚಿಸುವುದರ ಜೊತೆಗೆ ಕಳವು ಪ್ರಕರಣಗಳ ಪತ್ತೆ ಮಾಡಲು ಅನುಭವಿ ಪೊಲೀಸರನ್ನು ನೇಮಿಸಲು ಮೀನ ಮೇಷ ಎಣಿಸಲಾಗುತ್ತಿದೆ ಎಂದು ಕಳವು ಪ್ರಕರಣದ ದೂರುದಾರರು ಆರೋಪಿಸಿದ್ದಾರೆ.

 “ಕಳವು ಪ್ರಕರಣದ ಆರೋಪಿಗಳ ಸೆರೆಗೆ ಅಧಿಕಾರಿಗಳನ್ನು ನೇಮಿಸಿದ್ದೇವೆ. ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಶೀಘ್ರದಲ್ಲೇ ನಾವು ಕಳ್ಳರನ್ನು ಹಿಡಿಯುತ್ತೇವೆ.” – ಜಿ.ಪಿ.ರಾಜು, ಚೇಳೂರು ಸರ್ಕಲ್‌

ಇನ್ಸ್‌ಪೆಕ್ಟರ್‌

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.