ಪಿಒಪಿ ಗಣೇಶ ಮಾರಾಟ ವಿರುದ್ಧ ಕಾರ್ಯಚರಣೆ
Team Udayavani, Sep 2, 2019, 3:00 AM IST
ಚಿಕ್ಕಬಳ್ಳಾಪುರ: ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ಕೊಟ್ಟಿರುವ ಜಿಲ್ಲಾಡಳಿತ, ಗಣೇಶ ಚತುರ್ಥಿ ಹಬ್ಬದ ಮುನ್ನ ದಿನವಾದ ಭಾನುವಾರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹಾಗೂ ಸ್ಥಳೀಯ ನಗರಸಭೆ ಅಧಿಕಾರಿಗಳ ತಂಡ ಜಂಟಿ ಕಾರ್ಯಚರಣೆ ನಡೆಸಿ ಪಿಒಪಿ ಗಣೇಶ ಮೂರ್ತಿಗಳ ಮಾರಾಟವಾಗದಂತೆ ಖುದ್ದು ಪರಿಶೀಲಿಸಿ ಖಚಿತಪಡಿಸಿಕೊಂಡರು.
ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಸಹಾಯಕ ಪರಿಸರ ಅಧಿಕಾರಿ ವಿಜಯಾ ಹಾಗೂ ನಗರಸಭೆ ಆಯುಕ್ತ ಉಮಾಕಾಂತ್ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಗಣೇಶ ಮೂರ್ತಿ ವ್ಯಾಪಾರಸ್ಥರಿಗೆ ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು.
ವಿವಿಧೆಡೆ ಪರಿಶೀಲನೆ: ಗಣೇಶ ಮೂರ್ತಿ ಮಾರಾಟ ಮಾಡುತ್ತಿದ್ದ ನಗದ ಬೆಸ್ಕಾಂ ಕಚೇರಿ ಆವರಣ, ಸಂತೆ ಮಾರುಕಟ್ಟೆ ಸಮೀಪ, ಬಿಬಿ ರಸ್ತೆ, ಬಜಾರ್ ರಸ್ತೆ, ಎಂಜಿ ರಸ್ತೆ, ಖಾಸಗಿ ಬಸ್ ನಿಲ್ದಾಣ, ವಾಪಸಂದ್ರ, ಎಪಿಎಂಸಿ ಮಾರುಕಟ್ಟೆ, ಗಂಗಮ್ಮ ಗುಡಿ ರಸ್ತೆ, ಟೌನ್ ಹಾಲ್ ವೃತ್ತಗಳಲ್ಲಿ ಕಾರ್ಯಾಚರಣೆ ನಡೆಸಿ ಪಿಒಪಿ ಗಣೇಶ ಮೂರ್ತಿಗಳು ಮಾರಾಟವಾಗದಂತೆ ನೋಡಿಕೊಂಡರು. ವ್ಯಾಪಾರಸ್ಥರು ದಾಸ್ತಾನು ಮಾಡಲಾಗಿದ್ದ ಗೋಡೌನ್ಗಳಿಗೆ ತೆರಳಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.
ಕರಪತ್ರ ಹಂಚಿ ಅರಿವು: ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಪ್ಲಾಸ್ಟರ್ ಆಫ್ ಫ್ಯಾರೀಸ್ನಿಂದ ಸಿದ್ಧಪಡಿಸಿರುವ ಗಣೇಶ ಮೂರ್ತಿಗಳ ಮಾರಾಟ ಹಾಗೂ ತಯಾರಿಕೆ ನಿಷೇಧಿಸಲಾಗಿದ್ದು, ಪ್ರತಿಯೊಬ್ಬರು ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಬೇಕು. ಜೇಡಿ ಮಣ್ಣಿನಿಂದ ಹಾಗೂ ಬಣ್ಣ ರಹಿತ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಕರಪತ್ರ ಹಂಚಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಸಹಾಯಕ ಪರಿಸರ ಅಧಿಕಾರಿ ವಿಜಯಾ, ಜಿಲ್ಲಾದ್ಯಂತ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಮೂಲಕ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜಿಲ್ಲೆಯಲ್ಲಿ ಎಲ್ಲೂ ಪಿಒಪಿ ಗಣೇಶ ಮಾರಾಟವಾಗಿಲ್ಲ.
ಮುಂದಿನ ವರ್ಷದಿಂದ ಸಂಪೂರ್ಣ ಬಣ್ಣ ರಹಿತ ಗಣೇಶ ಮೂರ್ತಿಗಳ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗುವುದು. ಪ್ರತಿಷ್ಠಾಪನೆ ಆದ ಮೇಲೆಯು ಕೂಡ ಇಲಾಖೆ ಉತ್ಸವ ಮೂರ್ತಿಗಳನ್ನು ತಪಾಸಣೆ ನಡೆಸಿ ಪರೀಕ್ಷೆಗೆ ಒಳಪಡಿಸಲಿದೆ. ಯಾರಾದರೂ ನಿಯಮಾವಳಿಗಳನ್ನು ಮೀರಿ ಪಿಒಪಿ ಗಣೇಶ ಪ್ರತಿಷ್ಠಾಪಿಸಿದ್ದರೆ ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್ ಪರದಾಟ!
Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.