Thieves: ಕೊನೆಗೂ ಪೊಲೀಸರ ಬಲೆಗೆಬಿದ್ದ ದಾಳಿಂಬೆ ಹಣ್ಣು ಕಳ್ಳರು
Team Udayavani, Sep 21, 2023, 12:43 PM IST
ಚಿಕ್ಕಬಳ್ಳಾಪುರ: ರೈತರ ತೋಟಗಳಿಗೆ ರಾತ್ರೋರಾತ್ರಿ ನುಗ್ಗಿ ಬೆಲೆ ಬಾಳುವ ಲಕ್ಷಾಂತರ ರೂ. ಮೌಲ್ಯದ ದಾಳಿಂಬೆ ಹಣ್ಣುಗಳನ್ನು ಕದ್ದು ಸಿನಿಮೀಯ ರೀತಿಯಲ್ಲಿ ಪರಾರಿಯಾಗುತ್ತಿದ್ದ ಕಳ್ಳರನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ತಾಲೂಕಿನ ಕುರ್ಲಹಳ್ಳಿ ಗ್ರಾಮದ ನಿವಾಸಿಗಳಾದ ಕೆ.ಬಿ.ರಾಜು (23) ಹಾಗೂ ದೊಡ್ಡೆಗಾನಹಳ್ಳಿ ಗ್ರಾಮದ ನಿವಾಸಿ ಕೆ.ಶ್ರೀಕಾಂತ್ (18) ಎಂದು ಗುರುತಿಸ ಲಾಗಿದೆ.
ಆರೋಪಿಗಳು ಇತ್ತೀಚೆಗೆ ತಾಲೂಕಿನ ಅಜ್ಜವಾರ ಹಾಗೂ ಸಾದೇನಹಳ್ಳಿ ಗ್ರಾಮದಲ್ಲಿರುವ ದಾಳಿಂಬೆ ತೋಟಗಳಿಗೆ ರಾತ್ರೋರಾತ್ರಿ ನುಗ್ಗಿ, ಸುಮಾರು 4 ಟನ್ನಷ್ಟು ದಾಳಿಂಬೆ ಹಣ್ಣುಗಳನ್ನು ಕಳವು ಮಾಡಿದ್ದರು. ನಂತರ ಅವುಗಳನ್ನು ಚಿಕ್ಕಬಳ್ಳಾಪುರಕ್ಕೆ ತಂದು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ವಿಚಾರಣೆ ವೇಳೆ ಆರೋಪಿ ಗಳು ಬಾಯಿ ಬಿಟ್ಟಿದ್ದಾರೆ.
ತಾಲೂಕಿನಲ್ಲಿ ಇತ್ತೀಚೆಗೆ ದಾಳಿಂಬೆ ಹಣ್ಣುಗಳ ಕಳವು ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್ .ನಾಗೇಶ್ ಮಾರ್ಗದರ್ಶನದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಖರೀದಿದಾರರೂ ಅಂದರ್: ರೈತರ ತೋಟಗಳಲ್ಲಿ ದಾಳಿಂಬೆ ಹಣ್ಣುಗಳನ್ನು ಕದ್ದು ತರುತ್ತಿದ್ದ ರಾಜು ಹಾಗೂ ಶ್ರೀಕಾಂತ್ ಬಳಿ ಹಣ್ಣು ಖರೀದಿ ಮಾಡುತ್ತಿದ್ದ ಚಿಕ್ಕಬಳ್ಳಾಪುರ ನಗರದ ಹಣ್ಣು ವ್ಯಾಪಾರಿಗಳಾದ ಸೈಯದ್ ಮನ್ಸೂರ್ ಹಾಗೂ ಅಗಲಗುರ್ಕಿ ಗ್ರಾಮದ ಹಣ್ಣಿನ ವ್ಯಾಪಾರಿ ಎಸ್ .ನಂಜುಂಡ ಅವರನ್ನೂ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.