ನಗರದಲ್ಲಿ ಸಮಸ್ಯೆ ನಿವಾರಣೆಗೆ ಆಗ್ರಹ
Team Udayavani, Dec 20, 2019, 1:13 PM IST
ಚಿಂತಾಮಣಿ: ನಗರದಲ್ಲಿ ಕುಡಿಯುವ ನೀರು, ಸ್ವತ್ಛತೆ, ಒಳಚರಂಡಿ ವ್ಯವಸ್ಥೆ, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಪ್ರತಿನಿತ್ಯ ತಾಂಡವಾಡುತ್ತಿರುವ ಅನೇಕ ಸಮಸ್ಯೆಗಳನ್ನು ನಿವಾರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಪದಾಧಿಕಾರಿಗಳು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಜಾಥಾ ಆರಂಭಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಬಳಿಕ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪೌರಾಯುಕ್ತ ಹರೀಶ್ಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.
ರಾಜ್ಯ ಉಪಾಧ್ಯಕ್ಷ ಸಿ.ಕೃಷ್ಣೋಜಿರಾವ್ ಮಾತನಾಡಿ, ನಗರದ ಎಲ್ಲಾ ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಸ್ವತ್ಛತೆ, ರಸ್ತೆ, ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಒಳಚರಂಡಿಗಳು ಸ್ವತ್ಛತೆ ಇಲ್ಲದೇ ಸಾಂಕ್ರಾಮಿಕರೋಗಗಳು ಹರಡುವ ಭೀತಿಯಲ್ಲಿ ಜನತೆ ಇದ್ದು, ನಗರಸಭೆಯ ಕಂದಾಯ ಶಾಖೆಯಲ್ಲಿ ಇ-ಸ್ವತ್ತು ಮಾಡಿಕೊಡುವಿಕೆ ಖಾತೆ ಬದಲಾವಣೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದುಅಧಿಕಾರಿಗಳೇ ದಲ್ಲಾಳಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
ಚುನಾವಣಾ ಗುರುತಿನ ಚೀಟಿ ತಿದ್ದುಪಡಿ,ವರ್ಗಾವಣೆ ಇತ್ಯಾದಿಗಳಲ್ಲಿ ಆನ್ಲೈನ್ನಲ್ಲಿ ಆರ್ಜಿ ಸಲ್ಲಿಸಿದ್ದರೂ ಸಹ ಸಕಾಲಕ್ಕೆ ಕೆಲಸ ಮಾಡುತ್ತಿಲ್ಲ, ಸಮರ್ಪಕ ನೀರು ಸರಬರಾಜು ಇಲ್ಲದೇ ಇರುವುದು, ತಿಂಗಳುಗಳೇ ಕಳೆದರೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಫುಟ್ಪಾತ್ ವ್ಯಾಪಾರಸ್ಥರಿಗೆ ವ್ಯವಸ್ಥಿತ ಸ್ಥಳ ಗುರುತಿಸಿಕೊಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸಂಚಾಲಕ ವೆಂಕಟರವಣರೆಡ್ಡಿ, ತಾಲೂಕು ಅಧ್ಯಕ್ಷ ವೆಂಕಟಗಿರಿಕೋಟೆ ಆಸೀಫ್, ಕಾರ್ಯಾಧ್ಯಕ್ಷ ಬೀರೇಗೌಡ, ತಾಲೂಕು ಗೌರವಾಧ್ಯಕ್ಷ ಕಾರ್ತಿಕ್, ಜಿಲ್ಲಾ ಉಪಾಧ್ಯಕ್ಷ ವೆಂಕಟರತ್ನಮ್, ಕೃಷ್ಣ, ಖಾದರ್ವಲ್ಲಿ, ಅರ್ಚನಾ, ಸುವರ್ಣ, ಸರಸ್ವತಿ, ಶೋಭಾ ಮುಖಂಡರಾದ ಪ್ರದೀಪ್, ಕೋನಪಲ್ಲಿ ಕೋದಂಡ, ನಾಗರಾಜ್ ಸೇರಿದಂತೆ ಮತಿತ್ತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!
Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.