Pradeep Eshwar ವಿರುದ್ದ ಅಸಮಾಧಾನ; ಗ್ಯಾರೆಂಟಿ ಯೋಜನೆ ಪ್ರಾಧಿಕಾರಕ್ಕೆ ಮುನಿಯಪ್ಪ ರಾಜೀನಾಮೆ
Team Udayavani, Jul 11, 2024, 2:32 PM IST
ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ ವಿರುದ್ಧ ಅಸಮಾಧಾನಗೊಂಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಮಾಜಿ ಚಿಕ್ಕಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ ನೀಡಿದ್ದಾರೆ.
ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ 5 ಗ್ಯಾರಂಟಿಗಳ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಜಿಲ್ಲಾಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪರನ್ನು ಸರ್ಕಾರ ನೇಮಿಸಿ ಆದೇಶ ಮಾಡಿತ್ತು.
ಜಿಲ್ಲೆಯ ಜಿಲ್ಲಾಧಿಕಾರಿಗಳು ಜಿಲ್ಲಾಮಟ್ಟದ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ವಹಿಸುವಂತೆ ಎಸ್.ಎಂ.ಮುನಿಯಪ್ಪ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರು. ಆದರೆ ಎಸ್ಎಂ ಮುನಿಯಪ್ಪ ಗ್ಯಾರಂಟಿಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷ ಸ್ಥಾನ ವಹಿಸಲು ಶಾಸಕರ ನಡವಳಿಕೆಗಳಿಂದ ಬೇಸೆತ್ತು ಅಧಿಕಾರ ವಹಿಸಿಕೊಂಡಿರಲಿಲ್ಲ. ಇದೀಗ ಜಿಲ್ಲಾಧಿಕಾರಿಗಳಿಗೆ ಖುದ್ದು ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡುವ ಮೂಲಕ ತೀವ್ರ ಕುತೂಹ ಮೂಡಿಸಿದ್ದಾರೆ.
ನನ್ನ ಅನಾರೋಗ್ಯದ ದೃಷ್ಠಿಯಿಂದ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿ ರಾಜೀನಾಮೆ ಪತ್ರದಲ್ಲಿ ಮುನಿಯಪ್ಪ ಉಲ್ಲೇಖಿಸಿದ್ದಾರೆ. ಆದರೆ ಅವರ ಆಪ್ತ ಮೂಲಗಳು ಹೇಳುವ ಪ್ರಕಾರ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ ಈಶ್ವರ್ ಅವರು ಚುನಾವಣೆಯಲ್ಲಿ ಗೆದ್ದ ಬಳಿಕ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಮುಖಂಡರನ್ನು ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅವರು ಪೋನ್ ಮಾಡಿದರೂ ಸ್ಪೀಕರಿಸುವುದಿಲ್ಲ ಎಂದು ಅಸಮಾಧಾನಗೊಂಡು ಗ್ಯಾರೆಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸ್ಥಾನವನ್ನು ನಯವಾಗಿ ನಿರಾಕರಿಸಿದ್ದಾರೆಂದು ತಿಳಿದು ಬಂದಿದೆ. ಆ ಮೂಲಕ ಚಿಕ್ಕಬಳ್ಳಾಪುರ ಶಾಸಕರ ವಿರುದ್ಧ ಮಾಜಿ ಶಾಸಕ ಮುನಿಯಪ್ಪ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್ಗೆ 1.22 ಕೋಟಿ ದಂಡ
Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್!
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.