ನನೆಗುದಿಗೆ ಬಿದ್ದ ನಾಲ್ಕು ಪಥ ರಸ್ತೆ ಕಾಮಗಾರಿ


Team Udayavani, Mar 7, 2022, 3:49 PM IST

ನನೆಗುದಿಗೆ ಬಿದ್ದ ನಾಲ್ಕು ಪಥ ರಸ್ತೆ ಕಾಮಗಾರಿ

ಬಾಗೇಪಲ್ಲಿ: ಪಟ್ಟಣದಿಂದ ಚಿಂತಾಮಣಿ ಮಾರ್ಗವಾಗಿ ತಮಿಳುನಾಡಿನ ಹೊಸೂರು ನಗರಕ್ಕೆಸಂಪರ್ಕ ಕಲ್ಪಿಸುವ ನಾಲ್ಕು ಪಥದ ರಸ್ತೆ ಕಾಮಗಾರಿನನೆಗುದಿಗೆ ಬಿದ್ದಿದ್ದು, ಗುಂಡಿ ಬಿದ್ದ ರಸ್ತೆಯಲ್ಲಿ ವಾಹನಸಂಚಾರ ದುಸ್ತರವಾಗಿದೆ. ಕೂಡಲೇ ಸಂಸದ ಬಿ.ಎನ್‌.ಬಚ್ಚೇಗೌಡ, ಸಚಿವ ಡಾ.ಕೆ.ಸುಧಾಕರ್‌ ಮಧ್ಯಪ್ರವೇಶ ಮಾಡಿ, ನಾಲ್ಕು ಪಥದ ರಸ್ತೆ ನಿರ್ಮಾಣ ಕಾರ್ಯ ಶೀಘ್ರಪೂರ್ಣಗೊಳಿಸಲು ತಾಲೂಕಿನ ಮಿಟ್ಟೇಮರಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಈ ಏಕಪಥ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಮುಗª ವಾಹನ ಸವಾರರು ಅಪಘಾತಕ್ಕೆ ಸಿಲುಕುವಂತಾಗಿದೆ. ಆಂಧ್ರ,ಕರ್ನಾಟಕ ಹಾಗೂ ತಮಿಳುನಾಡು ಸಂಪರ್ಕಕೊಂಡಿಯಂತಿರುವ ಈ ರಸ್ತೆ ಅಂತಾರಾಜ್ಯ ರಸ್ತೆಯಾಗಿದೆ. ಈ ಹಿಂದೆ ನಾಲ್ಕು ಪಥ ರಸ್ತೆ ನಿರ್ಮಾಣ ಮಾಡಲು ಟೆಂಡರ್‌ ಕರೆದು ಟೋಲ್‌ ಪ್ಲಾಜಾನಿರ್ಮಾಣ ಮಾಡಲು ಪ್ರಸ್ತಾವನೆಯಲ್ಲಿಉದ್ದೇಶಿಸಲಾಗಿತ್ತು. ಆದರೆ, ಟೆಂಡರ್‌ನಲ್ಲಿಭಾಗವಹಿಸಲು ಯಾವ ಸಂಸ್ಥೆಯೂ ಮುಂದೆ ಬಾರದ ಕಾರಣ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದೆ.

ಅಪಘಾತಗಳಿಗೆ ಕಾರಣ: ಆಂಧ್ರಪ್ರದೇಶದಿಂದಬಾಗೇಪಲ್ಲಿ ಮಾರ್ಗವಾಗಿ ಮಿಟ್ಟೇಮರಿ, ಸಾದಲಿ,ದಿಬ್ಬೂರಹಳ್ಳಿ ಚಿಂತಾಮಣಿ ಮೂಲಕ ತಮಿಳುನಾಡಿನಹೊಸೂರು ತಲುಪುವ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಬಸ್‌, ಟ್ರಕ್‌, ಲಾರಿ, ಕಾರು ಹಾಗೂದ್ವಿಚಕ್ರ, ಇತರೆ ವಾಹನಗಳು ಭಾರೀ ಸಂಖ್ಯೆಯಲ್ಲಿ ಸಂಚಾರ ಮಾಡುತ್ತವೆ. ಏಕಪಥದ ಈ ರಸ್ತೆಯಲ್ಲಿಡಾಂಬರು ಕಿತ್ತು ಹೋಗಿ ಹಳ್ಳ ಮತ್ತು ಗುಂಡಿಗಳು ಬಿದ್ದಿವೆ. ಇದು ಅಪಘಾತಗಳಿಗೆ ಕಾರಣವಾಗಿದೆ.

ಎಚ್ಚರ ತಪ್ಪಿದರೆ ಅಪಾಯ: ಯಲ್ಲಂಪಲ್ಲಿ, ಮಿಟ್ಟೇಮರಿ ಹಾಗೂ ಸಾದಲಿ ಬಳಿ ಕೆರೆಕಟ್ಟೆಗಳ ಮೇಲೆವಾಹನಗಳು ಹಾದು ಹೋಗಬೇಕಾಗಿದ್ದು, ಚಾಲಕರುಎಚ್ಚರ ತಪ್ಪಿದರೆ ಅಪಾಯ ಕಟ್ಟಟ್ಟ ಬುತ್ತಿ, ಈಗಾಗಲೇಹಲವು ಅಪಘಾತಗಳಲ್ಲಿ ವಾಹನ ಸವಾರರುಮೃತಪಟ್ಟಿದ್ದು, ಸಾವಿರಾರು ಸಂಖ್ಯೆಯ ಗಾಯಾಳುಗಳಾಗಿ ಆಸ್ಪತ್ರೆಗಳ ಪಾಲಾಗಿದ್ದಾರೆ.

ವಾಹನ ಸಂಚಾರಕ್ಕೆ ಕಿರಿಕಿರಿ: 20-30 ವರ್ಷಗಳಿಂದಲೂ ಈ ರಸ್ತೆಯನ್ನು ನಾಲ್ಕು ಪಥವಾಗಿ ಮಾಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ.ಆದರೆ, ಜನಪ್ರತಿನಿ ಧಿಗಳ, ಅಧಿ ಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಈ ಯೋಜನೆ ನನೆಗುದಿಗೆ ಬಿದ್ದಿದೆ. ಈ ರಸ್ತೆಯಲ್ಲಿ ನೂರಾರು ಹಳ್ಳಿಗಳ ಜನರು ಕೆಲಸಗಳನಿಮಿತ್ತ, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆತೆರಳಲು ಬಾಗೇಪಲ್ಲಿ ಪಟ್ಟಣಕ್ಕೆ ಬಂದು ಹೋಗುತ್ತಾರೆ. ಕಿರಿದಾದ ರಸ್ತೆಯಿಂದ ವಾಹನಗಳ ಸಂಚಾರಕ್ಕೆ ಕಿರಿಕಿರಿಯಾಗಿದೆ.

ಈ ರಸ್ತೆಗೆ ಟಾರ್‌ ಹಾಕಿ ಹಲವು ದಶಕ ಕಳೆದಿದ್ದು,ಪಿಡಬ್ಲ್ಯೂಡಿ ಅಧಿಕಾರಿಗಳು 8 ವರ್ಷದಿಂದ ಮಾರ್ಚ್‌ತಿಂಗಳಲ್ಲಿ ಮಾತ್ರ ಕಾಟಾಚಾರಕ್ಕೆ ಗುಂಡಿ ಮುಚ್ಚುವ,ತೇಪೆ ಹಾಕುವ ಕಾಮಗಾರಿ ಮಾಡುತ್ತಿದ್ದಾರೆ.ಮಳೆಗಾಲದಲ್ಲಿ ತೇಪೆ ಹಾಕಿರುವ ಟಾರ್‌ ಸಹ ಕಿತ್ತುಹೋಗಿದೆ. ಆದ್ದರಿಂದ ರಾಜ್ಯ ಸರ್ಕಾರ ನಾಲ್ಕು ಪಥದ ರಸ್ತೆ ನಿರ್ಮಾಣ ಮಾಡಿ ವಾಹನ ಸಂಚಾರಕ್ಕೆಆಗುತ್ತಿರುವ ಕಿರಿಕಿರಿ ತಪ್ಪಿಸಬೇಕೆಂದು ಮಿಟ್ಟೇಮರಿ ಗ್ರಾಮಸ್ಥರು ಸಂಸದರು, ಸಚಿವರಲ್ಲಿ ಮನವಿ ಮಾಡಿದ್ದಾರೆ.

ಹಲವು ದಶಕಗಳ ಹಿಂದೆನಿರ್ಮಿಸಿರುವ ಏಕಪಥ ರಸ್ತೆಯನ್ನು ರಾಜ್ಯ ಹೆದ್ದಾರಿ ಆಗಿ ಮೇಲ್ದರ್ಜೇಗೇರಿಸಿ ಆದೇಶ ಮಾಡಿದ್ದರೂ ನಿರ್ಮಾಣ ಕಾರ್ಯ ನಡೆದಿಲ್ಲ. ದಿನೇ ದಿನೆ ಮಿಟ್ಟೇಮರಿ ರಸ್ತೆಯಲ್ಲಿವಾಹನ ಸಂಚಾರ ಹೆಚ್ಚಾಗುತ್ತಿರುವುದರಿಂದಅಪಘಾತಗಳು ನಡೆದು ಅನೇಕ ಜನರು ಬಲಿಯಾಗಿದ್ದಾರೆ. ಸಂಸದರು, ಸಚಿವರು ಇತ್ತಗಮನ ಹರಿಸಿ, ನಾಲ್ಕು ಪಥದ ರಸ್ತೆನಿರ್ಮಾಣಕ್ಕೆ ಆದ್ಯತೆ ನೀಡಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕಾಗಿದೆ. ಎಂ.ಬಿ.ಎಲ್‌.ನರಸಿಂಹಯ್ಯ, ಅಧ್ಯಕ್ಷ, ಮಿಟೇಮರಿ ಗ್ರಾಪಂ.

ಆಂಧ್ರ ಪ್ರದೇಶ, ತಮಿಳುನಾಡು,ಕರ್ನಾಟಕ ಸೇರಿ ಮೂರು ರಾಜ್ಯಗಳ ಸಂಪರ್ಕ ಕೊಂಡಿಯಂತಿರುವ ರಸ್ತೆಯನ್ನುಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ರಸ್ತೆಅಗಲೀಕರಣಕ್ಕೆ ಮುಂದಾಗುತ್ತಿಲ್ಲ, ಮೀತಿಮೀರಿದ ವಾಹನ ಸಂಚಾರದಿಂದ ರಸ್ತೆಸಂಪೂರ್ಣ ಹದಗೆಟ್ಟು ಗುಂಡಿಮಯವಾಗಿದೆ. ಈ ಹಿಂದೆ ನಾಲ್ಕುಪಥದ ರಸ್ತೆ ನಿರ್ಮಾಣ ಮಾಡಬೇಕುಎಂದು ಸರ್ಕಾರ ಪ್ರಸ್ತಾವನೆಯಲ್ಲಿ ಇದ್ದರೂ,ಅಧಿಕಾರಿಗಳ ನಿರ್ಲಕ್ಷ್ಯವೇ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ. ಟೈಲರ್‌ ಬಾಬು, ಮಿಟ್ಟೇಮರಿ ಗ್ರಾಮಸ್ಥ 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.