Chikkaballapur: ನಿಷೇಧಿತ ಪಟಾಕಿ ಮಾರಿದರೆ ಕ್ರಿಮಿನಲ್‌ ಕೇಸ್‌


Team Udayavani, Nov 4, 2023, 3:28 PM IST

Chikkaballapur: ನಿಷೇಧಿತ ಪಟಾಕಿ ಮಾರಿದರೆ ಕ್ರಿಮಿನಲ್‌ ಕೇಸ್‌

ಚಿಕ್ಕಬಳ್ಳಾಪುರ: ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ನಿಷೇಧಿತ ಯಾವುದೇ ರೀತಿಯ ಪಟಾಕಿಗಳು ಕಂಡು ಬಂದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜತೆಗೆ ಸಂಬಂದಪಟ್ಟ ಮಾಲೀಕರ ಮೇಲೆ ಕ್ರಿಮಿನಲ್‌ ಕೇಸ್‌ ದಾಖೀಸುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದೆ.

ದೀಪಾವಳಿ ಹಬ್ಬಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರೂಪಿಸಿರುವ ಹಲವು ಮಾರ್ಗಸೂಚಿಗಳನ್ನು ಉಲ್ಲೇಖೀಸಿ ರಾಜ್ಯ ಪೌರಾಡಳಿತ ನಿರ್ದೇಶನಾಲಯ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಿದ್ದು ಸುಪ್ರೀಂಕೋರ್ಟ್‌ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿದೆ.

ಸುತ್ತೋಲೆಯಲ್ಲಿ ಏನಿದೆ?: ಯಾವುದೇ ಹಸಿರು ಪಟಾಕಿ ಪ್ಯಾಕೇಟುಗಳನ್ನು ರ್‍ಯಾಂಡಮ್‌ ಆಗಿ ಸಂಗ್ರಹಿಸಿ ನಿಗದಿತ ವಿಧಿವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು, ಮತ್ತು ನಿಗದಿತ ಗುಣಮಾಪನಗಳಿಗೆ ಸರಿ ಹೊಂದಿದ್ದಲ್ಲಿ ಅವುಗಳನ್ನು ಸಹ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ದೀಪಾವಳಿ ಆಚರಣೆ ವೇಳೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವಯೋ ವೃದ್ಧರಿಗೆ ತೊಂದರೆ ಆಗದಂತೆ ಬಳಸಬೇಕು. ಹಸಿರು ಪಟಾಕಿಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು, ಸ್ಥಳೀಯ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ಯಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸಬಾರದು. ಇದನ್ನು ಪೊಲೀಸ್‌ ಇಲಾಖೆ ಅಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವಿಶೇಷವಾಗಿ ಹಸಿರು ಪಟಾಕಿಗಳ ಬಗ್ಗೆ ವ್ಯಾಪಕವಾಗಿ ಸಾರ್ವಜನಿಕ ವಲಯದಲ್ಲಿ ಅರಿವು ಮೂಡಿಸಿ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಬೇಕಾದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ ನಿರ್ದೇಶಿಸಿದೆ.

ನಾಗರಿಕರನ್ನೊಳಗೊಂಡ ಕಾರ್ಯಪಡೆಗಳ ರಚನೆಗೆ ಸೂಚನೆ: ಜಿಲ್ಲಾ ವ್ಯಾಪ್ತಿಯಲ್ಲಿ ದೀಪಾವಳಿ ವೇಳೆ ಪರಿಸರ ಮಾಲಿನ್ಯ ಹಾಗೂ ಶಬ್ದ ಹಾಗೂ ವಾಯು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಆಗ್ನಿಶಾಮಕ ಪಡೆ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳು, ಆರೋಗ್ಯಾಧಿಕಾರಿಗಳು, ತಹಶೀಲ್ದಾರ್‌ರರು, ಜಿಲ್ಲಾ ಪರಿಸರ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು, ಆಸಕ್ತ ನಾಗರಿಕರನ್ನು ಒಳಗೊಂಡಂತೆ ಹಾಗೂ ಸ್ಥಳಿಯ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸಿ ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶಿಲಿಸಬೇಕು. ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೇ ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು, ಹಾಗೂ ಸಂಬಂದಿಸಿದ ವ್ಯಕ್ತಿಗಳ ಮೇಲೆ ಕ್ರಿಮಿನಲ್‌ ಮೊಕªಮೆಯನ್ನು ಹೂಡುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ಸುತ್ತೋಲೆಯಲ್ಲಿ ನಗರ ಸ್ಥಳಿಯ ಸಂಸ್ಥೆಗಳಿಗೆ ಆದೇಶಿಸಿದೆ.

ಕ್ಯೂಆರ್‌ ಕೋಡ್‌ ಇದ್ದರೆ ಮಾತ್ರ ಅದು ಹಸಿರು ಪಟಾಕಿ: ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್‌ ಮೇಲೆ ಹಸಿರು ಪಟಾಕಿಯ ಚಿನ್ನೆಯಿರುತ್ತದೆ. ಹಾಗೂ ಕ್ಯೂಆರ್‌ ಕೋಡ್‌ ಇರುತ್ತದೆ. ಸದರಿ ಚಿಹ್ನೆಯ ಬಗ್ಗೆ ಸಂಬಂದಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು, ಸದರಿ ಚಿಹ್ನೆಯ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ ಮತ್ತು ಅವುಗಳನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.