ಶಿಡ್ಲಘಟ್ಟ: ವೃದ್ಧ ದಂಪತಿಗಳ ಭೀಕರ ಕೊಲೆ


Team Udayavani, Feb 11, 2022, 11:24 AM IST

Untitled-1

ಶಿಡ್ಲಘಟ್ಟ: ನಗರದ ಹೃದಯ ಭಾಗದ ಕಾಮಾಟಿಗರ ಪೇಟೆಯ ವಾಸವಿ ಕಲ್ಯಾಣ ಮಂಟಪದ ಹಿಂಭಾಗದಲ್ಲಿ ವೃದ್ದ ದಂಪತಿಗಳನ್ನು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಶ್ರೀನಿವಾಸ್ ಅಲಿಯಾಸ್ ದೊಂತಿ ಸೀನಪ್ಪ(76), ಪತ್ನಿ ಪದ್ಮಾವತಿ(67) ಕೊಲೆಯಾದ ದುರ್ದೈವಿಗಳು.

ಮನೆಯಲ್ಲಿ ಇಬ್ಬರಷ್ಟೆ ವಾಸಿಸುತ್ತಿದ್ದು ಹಣ ಚಿನ್ನಾಭರಣಗಳಿಗಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಮನೆಯಲ್ಲಿನ ಬೀರು ಕಪಾಟುವನ್ನು ಕಿತ್ತು ಬಟ್ಟೆ ಬರೆಯನ್ನು ಚೆಲ್ಲಾಡಿದ್ದು ಹಣ ಚಿನ್ನಾಭರಗಳನ್ನು ಕದ್ದೊಯ್ದಿದ್ದು ಎಷ್ಟು ಎಂಬುದರ ನಿಖರ ಮಾಹಿತಿ ಇಲ್ಲ, ಹಳೆಯ ಮನೆ ಇದಾಗಿದ್ದು ಮನೆಯ ಮೇಲ್ಚಾವಣಿಯಲ್ಲಿನ ಗವಾಕ್ಷಿ(ಮನೆಯೊಳಗೆ ಬೆಳಕಿಗಾಗಿ ಕಿಂಡಿ) ಮೂಲಕ ಮನೆಯೊಳಗೆ ನುಗ್ಗಿರುವ ದುಷ್ಕರ್ಮಿಗಳು ವೃದ್ಧ ದಂಪತಿಗಳನ್ನು ಅಮಾನುಷವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಪದ್ಮಾವತಿ ಅವರ ತಲೆ ಹಿಡಿದು ಬಾಗಿಲ ವಸಲಿಗೆ ಹಣೆಯನ್ನು ಚಚ್ಚಿದ ರೀತಿಯಲ್ಲಿದ್ದರೆ ಶ್ರೀನಿವಾಸ್ ಅವರ ತಲೆಗೆ ಮಾರಕಾಯುಧದಿಂದ ಹೊಡೆದ ರೀತಿಯಲ್ಲಿ ಇಬ್ಬರ ಹೆಣಗಳೂ ರಕ್ತದ ಮಡುವಿನಲ್ಲಿ ಬಿದ್ದಿದ್ದವು, ಶ್ರೀನಿವಾಸ್ ಅವರ ಮೈ ಮೇಲೆ ಬಟ್ಟೆಗಳು ಇರಲಿಲ್ಲ ಬುಧವಾರ ರಾತ್ರಿ ಸುಮಾರು 10.30ರ ಆಸುಪಾಸಿನಲ್ಲಿ ಶ್ರೀನಿವಾಸ್ ಹಾಗೂ ಪದ್ಮಾವತಿ ದಂಪತಿಗಳು ಮನೆಯಲ್ಲಿ ಮಾತನಾಡಿಕೊಳ್ಳುವ ಸದ್ದು ಅಕ್ಕ ಪಕ್ಕದವರು ಸಹಜವಾಗಿ ಕೇಳಿಸಿಕೊಂಡಿದ್ದಾರೆ ಹಾಗಾಗಿ ನಡು ರಾತ್ರಿಯ ನಂತರ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ ಪೊಲೀಸರು ಮನೆಯೊಳಗೆ ಪ್ರವೇಶ ಮಾಡಿದಾಗ ಶವದ ಮೇಲೆ ಇರುವೆಗಳು ಓಡಾಡುತ್ತಿದ್ದು ಕೊಲೆಯಾಗಿ 8-10 ಗಂಟೆಗಳಿಗೂ ಹೆಚ್ಚು ಸಮಯ ಆಗಿರಬಹುದೆಂದು ಅಂದಾಜಿಸಲಾಗಿದೆ.

ಮನೆ ಕೆಲಸದಾಕೆ ಗುರುವಾರ ಬೆಳಗ್ಗೆ ಬಂದು ಬಾಗಿಲು ಬಡಿದರೂ ಬಾಗಿಲು ತೆಗೆಯದೆ ಇದ್ದಾಗ ಹಿಂಬಾಗಿಲ ಮೂಲಕ ಮನೆಯೊಳಗೆ ತೆರಳಿದಾಗ ಶ್ರೀನಿವಾಸಪ್ಪ ಮನೆಯೊಳಗೆ ಬಿದ್ದಿದ್ದು ಕಂಡು ಭಯಭೀತರಾಗಿ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದಾರೆ ಅಕ್ಕಪಕ್ಕದವರು ಮನೆ ಒಳಗೆ ಹೋಗಿ ನೋಡಿದಾಗ ಶ್ರೀನಿವಾಸ್ ಪದ್ಮಾವತಿ ಸಹ ರಕ್ತದ ಮಡುವಿನಲ್ಲಿ ಬಿದ್ದಿದ್ದು ಕಂಡು ಬಂದಿದ್ದು ಘಟನೆ ಬೆಳಕಿಗೆ ಬಂದಿದೆ.

ಪದ್ಮಾವತಿ ಶ್ರೀನಿವಾಸ್ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಅವರನ್ನು ಮದುವೆ ಮಾಡಿದ್ದಾರೆ ಇಬ್ಬರು ಪುತ್ರಿಯರು ಬೆಂಗಳೂರಲ್ಲಿ ನೆಲೆಸಿದ್ದಾರೆ ಹಾಗಾಗಿ ವೃದ್ದ ದಂಪತಿಗಳಿಬ್ಬರಷ್ಟೆ ಮನೆಯಲ್ಲಿ ವಾಸವಿದ್ದರು. ವಾಸವಿ ರಸ್ತೆಯಲ್ಲಿನ ಜವಳಿ(ಬಟ್ಟೆ) ಅಂಗಡಿಯನ್ನು ನಡೆಸುತ್ತಿದ್ದ ಶ್ರೀನಿವಾಸ್ ಬಟ್ಟೆ ಅಂಗಡಿ ಸೀನಪ್ಪ ಎಂದೆ ಚಿರಪರಿಚಿತರಾಗಿದ್ದರು. ಶಿಡ್ಲಘಟ್ಟ ನಗರದಲ್ಲಿನ ತುಂಬಾ ಹಳೆಯದಾದ ದೊಂತಿಯವರ  ಛತ್ರದ ಮಾಲೀಕರಲ್ಲಿ ಇವರೂ ಒಬ್ಬರಾಗಿದ್ದಾರೆ.

ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾತನಾಡಿ ವೃಧ್ಧ ದಂಪತಿಗಳನ್ನು ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ಈಗಾಗಲೇ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿದೆ ಆರೋಪಿಗಳ ಸುಳಿವು ಲಭಿಸಿದ್ದು ಅವರನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಭಾತ ಸಿಪಿಐ ಪುರುಷೋತ್ತಮ್, ಎಸ್‍ಐ ಸತೀಶ್ ಇನ್ನಿತರರು ಭೇಟಿ ನೀಡಿ ಪರಿಶೀಲಿಸಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಹಿರಿಯ ದಂಪತಿಗಳಿಬ್ಬರ  ಜೋಡಿ ಕೊಲೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದರು, ವೃದ್ದ ದಂಪತಿಗಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆಯಿಂದ ನಾಗರಿಕರು ತೀವ್ರ ಆತಂಕಗೊಂಡಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.