ಪೋಡಿ ಮುಕ್ತ ಅಭಿಯಾನಕ್ಕೆ ಸಾಫ್ಟ್ ವೇರ್‌ ಬಲ


Team Udayavani, Jul 5, 2023, 3:24 PM IST

ಪೋಡಿ ಮುಕ್ತ ಅಭಿಯಾನಕ್ಕೆ ಸಾಫ್ಟ್ ವೇರ್‌ ಬಲ

ಚಿಕ್ಕಬಳ್ಳಾಪುರ: ಬಹು ಮಾಲೀಕತ್ವದಲ್ಲಿ ಇರುವ ಪಹಣಿಗಳನ್ನು ಏಕ ಮಾಲೀಕತ್ವಕ್ಕೆ ವರ್ಗಾಯಿಸುವ ಮಹತ್ವಕಾಂಕ್ಷಿ ಪೋಡಿ ಇಂಡೀಕರಣಕ್ಕೆ ರಾಜ್ಯದ ಭೂ ಮಾಪನ ಇಲಾಖೆ ಹೈಟೆಕ್‌ ಸ್ಪರ್ಶ ನೀಡಿದ್ದು, ಪೋಡಿ ಇಂಡೀಕರಣಕ್ಕೆ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿ ಹೊಸ ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದೆ.

ಹೀಗಾಗಿ ಇನ್ನು ಮುಂದೆ ಸರ್ಕಾರಿ ಜಮೀನುಗಳಲ್ಲಿ ಮಂಜೂರಾದ ಜಮೀನುಗಳ ಪೋಡಿ ಇಂಡೀಕರಣಕ್ಕೆ ಭೂ ಮಾಪನ ಇಲಾಖೆಗೆ ಅರ್ಜಿ ಸಲ್ಲಿಸಲು ಸುತ್ತಾಡುವುದರ ಬದಲು ಸಾರ್ವಜನಿಕರು ಆನ್‌ ಲೈನ್‌ ಮೂಲಕವೇ ಅರ್ಜಿ ಸಲ್ಲಿಸಿ ತ್ವರಿತ ಸೇವೆ ಪಡೆಯಬಹುದಾಗಿದೆ.

ಜನಸ್ನೇಹಿ: ಇತ್ತೀಚೆಗೆ ಜಮೀನುಗಳ ಪೋಡಿ ಇಂಡೀಕರಣ ಮಾಡಲು ಭೂಮಿ ತಂತ್ರಾಂಶದಲ್ಲಿ ಅವಕಾಶ ಕೋರಿ ಹಲವಾರು ಪತ್ರಗಳು ಸ್ವೀಕೃತವಾಗಿದ್ದರ ಹಿನ್ನೆಲೆಯಲ್ಲಿ ಭೂ ಮಾಪನ ಇಲಾಖೆ ಎಚ್ಚೆತ್ತುಕೊಂಡು ಸರ್ಕಾರಿ ಜಮೀನಿನಲ್ಲಿ ಮಂಜೂರಾದ ಜಮೀನುಗಳ ಪೋಡಿ ಇಂಡೀಕರಣ ಮಾಡಲು ನೂತನ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಇಲಾಖೆಯನ್ನು ಇನ್ನಷ್ಟು ಜನಸ್ನೇಹಿ ಮಾಡಿ ರೈತರು, ಸಾರ್ವಜನಿಕರು ಅರ್ಜಿ ಸಲ್ಲಿಕೆಗೆ ಆನ್‌ಲೈನ್‌ ಮೂಲಕವೇ ಅವಕಾಶ ಕಲ್ಪಿಸಿ ಭೂ ಮಾಪನ ಇಲಾಖೆ ಆಯುಕ್ತರು ಮಹತ್ವದ ಆದೇಶ ಹೊರಡಿಸಿದಾರೆ.

ಮಾಹಿತಿ ನೀಡಿ: ಸರ್ಕಾರಿ ಜಮೀನಿ ನಲ್ಲಿ ಮಂಜೂರಾದ ಜಮೀನುಗಳಿಗೆ ಸಂಬಂಧಿಸಿದಂತೆ ನಿಯಮಾನಸಾರ ದಾಖಲೆಗಳನ್ನು ಪರಿಶೀಲಿಸಿಕೊಂಡು ಸದರಿ ಕಾರ್ಯ ವಿಧಾನ ಅನುಸರಿಸಿ ಕಾನೂನು ರೀತ್ಯಾ ಪೋಡಿ ಇಂಡೀಕರಣ ಮಾಡುವಂತೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಡಿಡಿಎಲ್‌ಆರ್‌ (ಜಿಲ್ಲಾ ಭೂದಾಖಲೆಗಳ ಇಲಾಖೆ ಉಪನಿರ್ದೇಶಕರು), ಡಿಎಲ್‌ ಆರ್‌, ಉಪ ವಿಭಾಗಾಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳಿಗೆ ಸೂಚಿಸುವಂತೆ ಹಾಗೂ ಸದರಿ ತಂತ್ರಾಂಶದ ಮೂಲಕ ಸಾರ್ವಜನಿಕರು ಅರ್ಜಿ ಸಲ್ಲಿಸಲು ಅವಕಾಶ ಇರುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ, ಜಿಲ್ಲಾಧಿಕಾರಿಗಳಿಗೆ, ರಾಜ್ಯದ ಎಲ್ಲಾ ಜಿಲ್ಲಾ ಭೂಮಿ ಸಮಾಲೋಚಕರಿಗೆ ಸೂಚಿಸಿದ್ದಾರೆ.

ತಂತ್ರಾಂಶ ಕಾರ್ಯನಿರ್ವಹಿಸುವುದು ಹೇಗೆ?: ಅರ್ಜಿದಾರರು ತಮ್ಮ ಮೊಬೈಲ್‌ ನಂಬರ್‌ ದಾಖಲಿಸಿ ಓಟಿಪಿ ಮೂಲಕ ಲಾಗಿನ್‌ ಆಗಬೇಕು, ತಂತ್ರಾಂಶದಲ್ಲಿ ಲಾಗಿನ್‌ ಆದ ನಂತರ ಅರ್ಜಿದಾರ ತನ್ನ ಆಧಾರ್‌ ಇಕೆವೈಸಿ ನೀಡಬೇಕು, ನಂತರ ಮೂಲ ಸರ್ವೆ ನಂಬರ್‌ನ್ನು ಭೂಮಿಯಿಂದ ಆಯ್ಕೆ ಮಾಡಬೇಕು. ಪೋಡಿ ಪಕ್ರಿಯೆಗೆ ಒಳಪಡುವ ಹಕ್ಕುದಾರರನ್ನು ಆಯ್ಕೆ ಮಾಡಬೇಕು. ಈ ಹಂತದಲ್ಲಿ ಆಧಾರ್‌ನಲ್ಲಿರುವ ಹೆಸರು ಹಾಗೂ ಪಹಣಿಯಲ್ಲಿರುವ ಹೆಸರು ಹೊಂದಾಣಿಕೆ ಆಗಬೇಕು, ನಂತರ ಹೊಸ ಸರ್ವೆ ನಂಬರ್‌ ದಾಖಲಿಸಬೇಕು, ಡಿಡಿಎಲ್‌ಆರ್‌ ಆದೇಶ ಸಂಖ್ಯೆ ಮತ್ತು ದಿನಾಂಕ ದಾಖಲಿಸಬೇಕು, ಹೊಸ ಸರ್ವೆ ನಂಬರ್‌ಗೆ ಸಂಬಂಧಿಸಿದ ಟಿಪ್ಪಣಿ ಹಾಗೂ ಪಕ್ಕಾ ಪ್ರತಿಯನ್ನು ಅಪ್‌ಲೋಡ್‌ ಮಾಡಬೇಕು, 2018 ಜನವರಿ 1 ರೊಳಗೆ ಡಿಡಿಎಲ್‌ಆರ್‌ ಹೊರಡಿಸಿರುವ ಆದೇಶಗಳಿಗೆ ಕಡ್ಡಾಯವಾಗಿ ಹೊಸ ಸರ್ವೆ ನಂಬರ್‌ ವಿವರ ಹಾಗೂ ಆಕಾರ ಬಂದ್‌ ಡೇಟಾಬೇಸ್‌ನಲ್ಲಿ ಲಭ್ಯವಿರಬೇಕು. ನಂತರ ಅರ್ಜಿಯನ್ನು ಉಳಿಸಿ ಮುಂದಿನ ಹಂತಕ್ಕೆ ಸಲ್ಲಿಸಬೇಕು, ನಂತರ ಅರ್ಜಿಯ ಮೋಜಿಣಿ ತಂತ್ರಾಂಶದಲ್ಲಿ ತಾಲೂಕು ಅಪರೇಟರ್‌ ಲಾಗಿನ್‌ನಲ್ಲಿ ಲಭ್ಯವಿರುತ್ತದೆ. ತಾಲೂಕು ಅಪರೇಟರ್‌ ಅನುಮೋದನೆ ನಂತರ ಸೂಪರ್‌ವೈಸರ್‌ ಲಾಗಿನ್‌ನಲ್ಲಿ ಲಭ್ಯವಿರುತ್ತದೆ. ಸೂಪರ್‌ ವೈಸರ್‌ ಅನುಮೋದನೆ ಬಳಿಕ ಎಡಿಎಲ್‌ಆರ್‌ ಅನುಮೋದನೆ ಕೊಟ್ಟು ನಂತರ ಡಿಡಿಎಲ್‌ಆರ್‌ ಅನುಮೋದನೆಯೊಂದಿಗೆ ಅರ್ಜಿಯು ಪಹಣಿ ಇಂಡೀಕರಣಕ್ಕಾಗಿ ಭೂಮಿಗೆ ರವಾನೆ ಆಗಲಿದೆ.

ಏಕ ಮಾಲೀಕತ್ವದ ಪಹಣಿ ಇದ್ದರೆ ಅನುಕೂಲ: ಈ ಹಿಂದೆ ಜಿಲ್ಲೆಯಲ್ಲಿ ಪೋಡಿ ಮುಕ್ತ ಅಭಿಯಾನವನ್ನು ಆಂದೋಲನದ ಮಾದರಿಯಲ್ಲಿ ಜಿಲ್ಲಾಡಳಿತ ನಾಲ್ಕೈದು ವರ್ಷಗಳ ಹಿಂದೆ ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಗುಡಿಬಂಡೆಯನ್ನು ರಾಜ್ಯದಲ್ಲಿ ಮೊದಲ ಪೋಡಿ ಮುಕ್ತ ತಾಲೂಕು ಎಂಬ ಘೋಷಣೆ ಕೂಡ ಹೊರ ಬಿದ್ದಿತ್ತು. ಆದರೆ, ಚುನಾವಣೆ ಮತ್ತಿತರ ಕಾರಣಗಳಿಂದ ಜಿಲ್ಲಾಡಳಿತ ಪೋಡಿ ಮುಕ್ತ ಅಭಿಯಾನಕ್ಕೆ ಅಷ್ಟೊಂದು ಕಾಳಜಿ ವಹಿಸಿಲ್ಲ. ಜಿಲ್ಲೆಯಲ್ಲಿ ದಶಕಗಳಿಂದಲೂ ಬಹು ಮಾಲೀಕತ್ವದ ಪಹಣಿಗಳೇ ಅಧಿಕವಾಗಿದ್ದು, ಇದರಿಂದ ಪೋಡಿ ಇಂಡೀಕರಣ ಸಾಧ್ಯವಾಗದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ರೈತರಿಗೆ ಸಾಧ್ಯವಾಗುತ್ತಿಲ್ಲ. ವಿಶೇಷವಾಗಿ ಗಂಗಕಲ್ಯಾಣ ಯೋಜನೆ ಸೇರಿದಂತೆ ಸರ್ಕಾರದ ಸಾಲ, ಸೌಲಭ್ಯಗಳು ರೈತರಿಗೆ ದಕ್ಕುತ್ತಿಲ್ಲ. ಪೋಡಿ ಇಂಡೀಕರಣ ಆಗಿ ರೈತರಿಗೆ ಏಕ ಮಾಲೀಕತ್ವದ ಪಹಣಿ ಇದ್ದರೆ ರೈತರಿಗೆ ಸಾಕಷ್ಟು ನೆರವಾಗಲಿದೆ.

ಅರ್ಜಿ ಸಲ್ಲಿಕೆ ಹೇಗೆ? : ಸಾರ್ವಜನಿಕರು ತಮ್ಮ ಪೋಡಿ ಇಂಡೀಕರಣಕ್ಕೆ ಅರ್ಜಿಯನ್ನು ತಂತ್ರಾಂಶದ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ರೈತರು ಅಥವಾ ಸಾರ್ವಜನಿಕರು https://lamdrecords.karnataka.gov.in/service145/  ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಭೂ ಮಾಪನ ಇಲಾಖೆಯನ್ನು ಇನ್ನಷ್ಟು ಜನಸ್ನೇಹಿಯಾಗಿ ರೂಪಿಸುವ ನಿಟ್ಟಿನಲ್ಲಿ ಪೋಡಿ ಇಂಡೀಕರಣಕ್ಕೆ ಹೊಸ ಸಾಫ್ಟ್ವೇರ್‌ ಸಿದ್ಧಪಡಿಸಲಾಗಿದೆ. ಈ ಹಿಂದೆ ಪೋಡಿ ಆಗಿ ಇಂಡೀಕರಣ ಆಗದೇ ಇದ್ದ ಪಕ್ಷದಲ್ಲಿ ಸಾರ್ವಜನಿಕರಿಗೆ ತ್ವರಿತವಾಗಿ ಸೇವೆ ಸಲ್ಲಿಸಲು ಹೊಸದಾಗಿ ತಂತ್ರಾಂಶವನ್ನು ಅಭಿವೃದ್ದಿಗೊಳಿಸಿದೆ. ಅದರ ಸಾಧಕ ಭಾದಕಗಳ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ. – ಸಂಜಯ್‌, ಉಪನಿರ್ದೇಶಕರು, ಜಿಲ್ಲಾ ಭೂದಾಖಲೆಗಳ ಇಲಾಖೆ (ಡಿಡಿಎಲ್‌ಆರ್‌) ಚಿಕ್ಕಬಳ್ಳಾಪುರ

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.