ಶಿಡ್ಲಘಟ್ಟ ಶೈಕ್ಷಣಿಕ ಕೇಂದ್ರ ಮಾಡಲು ಕ್ರಮ


Team Udayavani, Feb 6, 2020, 3:00 AM IST

shidlgatta

ಶಿಡ್ಲಘಟ್ಟ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ ಮತ್ತು ಹಾಲು ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ ಶಿಡ್ಲಘಟ್ಟ ತಾಲೂಕನ್ನು ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸಲು ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ತಾಲೂಕಿನ ಅಮರಾವತಿ ಗ್ರಾಮದಲ್ಲಿ ಉದ್ದೇಶಿತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ಥಳ ಪರಿಶೀಲಿಸಿ ರೈತರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ದೇವನಹಳ್ಳಿ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಸಮೀಪವಿರುವ ಕೋಲಾರ- ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಧ್ಯೆಪ್ರದೇಶದಲ್ಲಿರುವ ಅಮರಾವತಿಯಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು ಅತಿ ಶೀಘ್ರದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿ ಆರಂಭಿಸಲಾಗುವುದು ಎಂದರು.

ರೈತರ ಸಮಸ್ಯೆಗಳಿಗೆ ಸ್ಪಂದನೆ: ಸ್ಥಳೀಯ ರೈತರಿಗೆ ತೊಂದರೆ ನೀಡಿ ವಿಶ್ವವಿದ್ಯಾಲಯ ಸ್ಥಾಪಿಸುವ ಉದ್ದೇಶ ಸರಕಾರಕ್ಕಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ನಿರೀಕ್ಷೆಯಂತೆ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತದೆ. ಪ್ರಸ್ತುತ ವಿಶ್ವವಿದ್ಯಾಲಯ ನಿರ್ಮಿಸಲು 110 ಎಕರೆ ಜಾಗವನ್ನು ಗುರುತಿಸಿದ್ದು ಇನ್ನೂಳಿದ 60 ಎಕರೆ ಜಮೀನು ಸ್ವಾಧೀನಪಡೆದುಕೊಳ್ಳುವ ಪ್ರಕ್ರಿಯೆಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು. ರೇಷ್ಮೆ ಮತ್ತು ಹೈನುಕಾರಿಕೆಯಲ್ಲಿ ಪ್ರಖ್ಯಾತಿ ಹೊಂದಿರುವ ಶಿಡ್ಲಘಟ್ಟ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿ ಹೊಂದಲಿದೆ ಇದರಿಂದ ಸ್ಥಳೀಯ ರೈತರ ಮಕ್ಕಳು ಉನ್ನತ ಶಿಕ್ಷಣವನ್ನು ಪಡೆದುಕೊಂಡು ಅವರ ಭವಿಷ್ಯವನ್ನು ರೂಪಿಸಿಕೊಳ್ಳಲಿದ್ದಾರೆ ಎಂದರು.

ರೈತರಿಗೆ ಪರಿಹಾರ ನೀಡಿ ಜಮೀನು ಸ್ವಾಧೀನ: ಅಮರಾವತಿ ಗ್ರಾಮದಲ್ಲಿ ರೈತರ ಜಮೀನುಗಳನ್ನು ಬಲವಂತವಾಗಿ ವಶಕ್ಕೆ ಪಡೆದುಕೊಳ್ಳುವುದಿಲ್ಲ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ರೈತರಿಗೆ ಪರಿಹಾರ ನೀಡಿ ಜಮೀನು ಸ್ವಾಧೀನ ಮಾಡಿಕೊಂಡು ವಿಶ್ವವಿದ್ಯಾಲಯ ನಿರ್ಮಿಸುತ್ತೇವೆ. ಈ ಭಾಗದಲ್ಲಿ ರೈತರಿಗೆ ಪಿ.ನಂಬರ್‌ ನೀಡಿ ಅವರು ಈ ಹಿಂದೆ ಸದರಿ ಜಾಗದಲ್ಲಿ ರೈತರಿಗೆ ಪಿ.ನಂಬರ್‌ ನೀಡಿರುವುದು ಸೇರಿದಂತೆ ಇನ್ನಿತರೆ ವಿಚಾರಗಳನ್ನು ಪರಿಶೀಲಿಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ಯಾವುದೇ ವಿವಾದ ಇಲ್ಲದೇ ಸುಸಜ್ಜಿತ ವಿಶ್ವವಿದ್ಯಾಲಯ ನಿರ್ಮಿಸಲು ಸರ್ಕಾರ ಬದ್ಧವಾಗಿದ್ದು ಶಾಸಕರು ಸಲಹೆ ಸೂಚನೆಗಳನ್ನು ಪಡೆದುಕೊಂಡು ಮುಂದಿನ ಕ್ರಮ ಜರುಗಿಸುವುದಾಗಿ ಸ್ಪಷ್ಟಪಡಿಸಿದರು.

ಒತ್ತುವರಿ ತೆರವಿಗೆ ಮನವಿ: ಶಾಸಕ ವಿ.ಮುನಿಯಪ್ಪ ಮಾತನಾಡಿ, ಅಮರಾವತಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಸೂಕ್ತ ವ್ಯವಸ್ಥೆಗಳು ಇಲ್ಲದಿರುವುದರಿಂದ ಸುಂಡ್ರಹಳ್ಳಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಲು ಈಗಾಗಲೇ ಹಿಂದಿನ ಸರ್ಕಾರದಲ್ಲಿ ಪ್ರಯತ್ನ ನಡೆಸಲಾಗಿತ್ತು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 10 ಕಿ.ಮೀ ದೂರದಲ್ಲಿರುವ ಸಕಲ ಸೌಲಭ್ಯಗಳನ್ನು ಹೊಂದಿರುವ ಸುಂಡ್ರಹಳ್ಳಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಿ ರೈತರು ಸೇರಿದಂತೆ ಎಲ್ಲರಿಗೂ ಅನುಕೂಲ ಕಲ್ಪಿಸಬೇಕು ಮತ್ತು ಸುಂಡ್ರಹಳ್ಳಿ ಸುತ್ತಮುತ್ತ ಆಕ್ರಮಿಸಿಕೊಂಡಿರುವ ಸರ್ಕಾರಿ ಜಾಗವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದಕ್ಕೆ ಉಪಮುಖ್ಯಮಂತ್ರಿಗಳು ಸಕಾರತ್ಮಕವಾಗಿ ಸ್ಪಂದಿಸಿ ಒತ್ತುವರಿ ತೆರವುಗೊಳಿಸಲಾಗುವುದೆಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಆರ್‌.ಲತಾ, ಉಪವಿಭಾಗದಲ್ಲಿ ರಘುನಂದನ್‌ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು ನಿರ್ಮಿಸಲು ಮೀಸಲಾಗಿರುವ ಜಾಗ ಮತ್ತು ಸ್ಥಳೀಯ ರೈತರ ಸಮಸ್ಯೆಗಳ ಕುರಿತು ಉಪಮುಖ್ಯಮಂತ್ರಿಗಳಿಗೆ ನಕ್ಷೆಯೊಂದಿಗೆ ವಿವರಗಳನ್ನು ನೀಡಿದರು. ಕೋಲಾರ ಜಿಪಂ ಮಾಜಿ ಅಧ್ಯಕ್ಷ ವಿ.ಸುಬ್ರಹ್ಮಣಿ, ತಹಶೀಲ್ದಾರ್‌ ಎಂ.ದಯಾನಂದ್‌, ಕಾಂಗ್ರೆಸ್‌ ಮುಖಂಡರಾದ ವೈ.ಬಿ. ಮಂಜುನಾಥ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಚೀಮಂಗಲ ಮಂಜುನಾಥ್‌, ಎಚ್‌.ಕ್ರಾಸ್‌ ಮಂಜುನಾಥ್‌, ಸೋಮಣ್ಣ, ಅಂಬರೀಶ್‌,ಹಿರೇಬಲ್ಲ ಕೃಷ್ಣಪ್ಪ ಇದ್ದರು.

ಎಲ್ಲ ರೈತರಿಗೂ ಪರಿಹಾರ ನೀಡಿ: ಈ ವೇಳೆ ಅಲ್ಲಿನ ರೈತರು, ಕ್ಯಾಂಪಸ್‌ ನಿರ್ಮಿಸಲು ಗುರುತಿಸಿರುವ ಜಮೀನಿನಲ್ಲಿ ನಾವು ಉಳುಮೆ ಮಾಡಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದೇವೆ. ಸಾಕಷ್ಟು ರೈತರಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ. ಇನ್ನೂ ಕೆಲವರಿಗೆ ಸಾಗುವಳಿ ಚೀಟಿ ಬರಬೇಕಿದೆ. ಕಿಮ್ಮತ್ತು ಹಣ ಕಟ್ಟಿದ್ದು ಸಾಗುವಳಿ ಚೀಟಿ ವಿತರಿಸುವುದೊಂದು ಮಾತ್ರ ಬಾಕಿ ಇದೆ. ಹಾಗಾಗಿ ಈ ಜಮೀನು ಬಿಟ್ಟರೆ ನಮಗೆ ಬದುಕಲು ದಾರಿಯೇ ಇಲ್ಲ. ಹಾಗಾಗಿ ಸದರಿ ಎಲ್ಲ ಜಮೀನುಗಳ ರೈತರಿಗೂ ಪರಿಹಾರ ಕೊಡಿ. ಇಲ್ಲವೇ ಕ್ಯಾಂಪಸ್‌ನ್ನು ಬೇರೆ ಕಡೆ ನಿರ್ಮಿಸಿ ಎಂದು ಡಿಸಿಎಂಗೆ ಮನವಿ ಮಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.