ಜಿಲ್ಲೆಯಲ್ಲಿ 10 ಸಾವಿರ ಗಡಿ ದಾಟಿದ ಸ್ವ್ಯಾಬ್‌‌ ಟೆಸ್ಟ್‌!


Team Udayavani, May 31, 2020, 7:52 AM IST

swyab teast

ಚಿಕ್ಕಬಳ್ಳಾಪುರ: ಆಂಧ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಪತ್ತೆಗಾಗಿ ಜಿಲ್ಲೆಯಲ್ಲಿ ಇದುವರೆಗೂ ಬರೋ ಬ್ಬರಿ 10 ಸಾವಿರಕ್ಕೂ ಅಧಿಕ ಮಂದಿಗೆ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ  ಒಳಪಡಿಸಲಾಗಿದ್ದು, ಆ ಪೈಕಿ ಇದುವರೆಗೂ 136 ಪ್ರಕರಣ ಗಳಷ್ಟೇ ಕೋವಿಡ್‌ 19 ಪಾಸಿಟಿವ್‌ ಬಂದಿವೆ.

ಕೋವಿಡ್‌ 19 ಆರ್ಭಟ ಆರಂಭಗೊಂಡ ದಿನದಿಂದ ಜಿಲ್ಲೆ ಯಲ್ಲಿ ಇದುವರೆಗೂ ಒಟ್ಟು 10,124 ಮಂದಿಗೆ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆ ಸಂಗ್ರಹಿಸಲಾಗಿದ್ದು, ಆ ಪೈಕಿ 9,319 ಮಂದಿಗೆ ಕೋವಿಡ್‌ 19 ನೆಗೆಟಿವ್‌ ಬಂದಿದ್ದರೆ ಉಳಿದ 136 ಮಂದಿಗೆ ಪಾಸಿಟಿವ್‌ ಬಂದಿದ್ದು, ಕೇವಲ 3 ಮಂದಿ ಕೋವಿಡ್‌ 19 ಸೋಂಕಿಗೆ ಬಲಿಯಾಗಿದ್ದಾರೆ.

ಮಹಾ ವಲಸೆ ಕಂಟಕ: ಜಿಲ್ಲೆಯಲ್ಲಿ ಕಳೆದ ಮಾ.21 ರಂದು ಆರಂಭಗೊಂಡ ಸೋಂಕಿತರ ಪತ್ತೆ ಕಾರ್ಯ ಜಿಲ್ಲೆಯಲ್ಲಿ ಮುಂದುವರಿ ದಿದ್ದು, ವಿಶೇಷವಾಗಿ ಮಹಾ ರಾಷ್ಟ್ರದ ಮುಂಬೈನಿಂದ ಜಿಲ್ಲೆಗೆ ಆಗಮಿಸಿ ರುವ ವಲಸೆ ಕಾರ್ಮಿಕರಲ್ಲಿ  ಸುಮಾರು 105 ಮಂದಿಗೆ ಪಾಸಿಟಿವ್‌ ಬಂದಿರುವುದು ಜಿಲ್ಲೆ ಯಲ್ಲಿ ಸೋಂಕು ಆರ್ಭಟಕ್ಕೆ ಕಾರಣವಾಗಿದೆ.

ಹಳ್ಳಿಗಳಿಗೂ ವಿಸ್ತರಣೆ: ಆರಂಭದಲ್ಲಿ ಕೇವಲ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರಕ್ಕೆ  ಸೀಮಿತವಾಗಿದ್ದ ಸೋಂಕು ಈಗ ಚಿಂತಾಮಣಿ ಹಾಗೂ ಬಾಗೇಪಲ್ಲಿ ತಾಲೂಕುಗಳನ್ನು ಪ್ರವೇ ಶಿಸಿದ್ದು, ವಿಶೇಷವಾಗಿ ನಗರಗಳಿಗೆ ಸೀಮಿತ ವಾಗಿದ್ದ ಕೋವಿಡ್‌ 19 ಹಳ್ಳಿಗೂ ವಿಸ್ತರಿಸಿಕೊಂಡಿ  ರುವುದು ಜಿಲ್ಲೆಯ ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟು ಮಾಡಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಲ್ಲಕದಿರೇನಹಳ್ಳಿ ಗ್ರಾಮದ 50 ವರ್ಷದ ವ್ಯಕ್ತಿ ಅಪ ಘಾತ ದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದಾಗ ಕೋವಿಡ್‌ 19 ಪಾಸೀಟಿವ್‌ ಬಂದಿದ್ದು ಆರೋಗ್ಯ ಇಲಾಖೆಯನ್ನು ಚಿಂತೆಗೀಡು ಮಾಡಿದೆ. 669 ಮಂದಿ  ವರದಿ ಬಾಕಿ: ಜಿಲ್ಲೆಯಲ್ಲಿ ಇದುವರೆಗೂ 10 ಸಾವಿರಕ್ಕೂ ಅಧಿಕ ಮಂದಿಗೆ ಕೋವಿಡ್‌ 19 ಪರೀಕ್ಷೆಗೆ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷಿಸಿದ್ದು, ಇನ್ನೂ 669 ಮಂದಿಯ ವರದಿ ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ  ಡಾ.ಯೋಗೇಶ್‌ ಗೌಡ ತಿಳಿಸಿದ್ದಾರೆ.

ಸೋಂಕಿತ ಪೇದೆ ಊಟಕ್ಕೆ ಮೆಸ್‌ಗೆ ಹೋಗುತ್ತಿದ್ದ: ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿರುವ ವೈಯರ್‌ಲೆಸ್‌ ವಿಭಾಗದದಲ್ಲಿ ಕಾರ್ಯನಿರ್ವಹಿಸುತ್ತಿದ್ದ 32 ರ್ವದ ಪೊಲೀಸ್‌ ಪೇದೆಗೆ ಕಳೆದ ಶುಕ್ರವಾರ ಸೋಂಕು  ದೃಢಪಟ್ಟಿರುವುದು ಪೊಲೀಸ್‌ ಇಲಾಖೆಯನ್ನು ಬೆಚ್ಚಿಬೀಸಿದೆ.

ಜೊತೆಗೆ ಸೋಂಕಿತ ಪೇದೆ ಬರೋಬ್ಬರಿ 12 ದಿನ ರಜೆ ಹಾಕಿ ತುಮಕೂರಿನಲ್ಲಿ ನೆಲೆಸಿದ್ದರು. ಜೊತೆಗೆ ಕೆಲಸದ ಅವಧಿಯಲ್ಲಿ ನಗರದ ಗ್ರಾಮಾಂತರ ಠಾಣೆ ಎದುರಿನ  ಮೆಸ್‌ವೊಂದಕ್ಕೆ ನಿತ್ಯ ಊಟಕ್ಕೆ ತೆರಳುತ್ತಿದ್ದು, ಈಗ ಎಲ್ಲರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.