ಕೋರೇಗಾಂವ್‌ ಯುದ್ಧ ದಲಿತರ ಸ್ವಾಭಿಮಾನದ ಸಂಕೇತ


Team Udayavani, Jan 2, 2020, 3:00 AM IST

korengav

ಚಿಕ್ಕಬಳ್ಳಾಪುರ: ಪೇಶ್ವೆಗಳು ತಮ್ಮದೊಂದಿಗೆ ನಡೆಸಿಕೊಳ್ಳುತ್ತಿದ್ದ ಶೋಷಣೆ, ಗುಲಾಮಗಿರಿಯಿಂದ ಮುಕ್ತಿ ಪಡೆಯಲು ಮಹರ್‌ ಯೋಧರು ಕಡಿಮೆ ಸಂಖ್ಯೆಯಲ್ಲಿದ್ದರೂ ಸುಮಾರು 30 ಸಾವಿರ ಪೇಶ್ವೆಗಳ ಸೈನ್ಯರನ್ನು ಸೋಲಿಸಿ ಕೋರೇಗಾಂವ್‌ ಯುದ್ಧದಲ್ಲಿ ವಿಜಯದ ಪತಾಕೆ ಹಾರಿಸಿದ್ದು, ದಲಿತರ ಸ್ವಾಭಿಮಾನದ ಸಂಕೇತ ಎಂದು ಚಿಂತಕ ಡಾ.ಕೋಡಿರಂಗಪ್ಪ ಅಭಿಪ್ರಾಯಪಟ್ಟರು.

ನಗರದ ಅಂಬೇಡ್ಕರ್‌ ವೃತ್ತದಲ್ಲಿ ಬುಧವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಶೌರ್ಯ ಮೆರೆದು ಮಡಿದ ಮಹಾರ್‌ ಯೋಧರ ಸ್ಮರಣಾರ್ಥ ಆಯೋಜಿಸಲಾಗಿದ್ದ ಕೋರೇಗಾಂವ್‌ ಯುದ್ಧ ವಿಜಯೋತ್ಸವ ಕಾರ್ಯ ಕ್ರಮದಲ್ಲಿ ಮಾತನಾಡಿದರು.

ದಲಿತರಿಗೆ ದೊಡ್ಡ ಪ್ರೇರಣೆ: ಕೋರೇಗಾಂವ್‌ ಯುದ್ಧ ದಲಿತರಿಗೆ ದೊಡ್ಡ ಪ್ರೇರಣೆ ಕಲ್ಪಿಸಿದೆ. ದೇಶದ ಇತಿಹಾದ ದಿಕ್ಕುನ್ನು ಬದಲಿಸಿದೆ. ಆದರೆ ಇಂದು ದ್ವೇಷ, ಅಸೂಯೆ ಬಿತ್ತುವ ಜನ ದೇಶದಲ್ಲಿ ಹೆಚ್ಚಾಗಿದ್ದಾರೆ. ದೇಶದ ಇತಿಹಾಸವನ್ನು ಅರಿತರೆ ಮಾತ್ರ ಒಳ್ಳೆಯ ಸಮಾಜ ನಿರ್ಮಾಣ ಮಾಡಬಹುದು. ಅಂಬೇಡ್ಕರ್‌ ಅಂದು ಇತಿಹಾಸ ಓದಿ ತಿಳಿದುಕೊಂಡ ನಂತರ ಕೋರೇಗಾಂವ್‌ ಯುದ್ಧದ ಅರಿವು ಅದರ ಮಹತ್ವ ಎಲ್ಲರಿಗೂ ತಿಳಿಯಿತು ಎಂದರು.

ಇಂದಿಗೂ ದೇಶದಲ್ಲಿ ಅಸ್ಪೃಶ್ಯತೆ ತಾಂಡವ: ಪ್ರತಿಯೊಬ್ಬರು ಇತಿಹಾಸವನ್ನು ವರ್ತಮಾನದಲ್ಲಿ ನಿಂತು ಭವಿಷ್ಯವನ್ನು ಕಂಡುಕೊಳ್ಳಬೇಕು. ಇಂದಿಗೂ ದೇಶದಲ್ಲಿ ಅಸ್ಪೃಶ್ಯತೆ, ಅಸಮಾನತೆ ದೊಡ್ಡ ಪ್ರಮಾಣದಲ್ಲಿ ಯಾರ ಕಣ್ಣಿಗೂ ಕಾಣದಂತೆ ತಾಂಡವಾಡುತ್ತಿದೆ. ಸ್ವಾತಂತ್ರ ಬಂದ ಬಳಿಕ ಸರ್ಕಾರಗಳು ದಲಿತರಿಗೆ ಸಮಾನ ಶಿಕ್ಷಣ, ಅಸ್ಪೃಶ್ಯತೆ ನಿವಾರಣೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಇವತ್ತು ಭಾರತ ಜಗತ್ತಿನಲ್ಲಿಯೆ ಬಲಿಷ್ಠವಾಗಿರುತ್ತಿತ್ತು. ಎಲ್ಲಿಯವರೆಗೆ ಸಮಾಜದಲ್ಲಿ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೂ ದೇಶ ಉದ್ಧಾರ ಆಗುವುದಿಲ್ಲ ಎಂದರು.

ದಲಿತರಿಗೆ ಒಳ್ಳೆಯ ಶಕ್ತಿ: ಕೋರೇಗಾವಂವ್‌ ಯುದ್ಧದ ವಿಜಯೋತ್ಸವ ನಿಜಕ್ಕೂ ದಲಿತರಿಗೆ ಒಳ್ಳೆಯ ಶಕ್ತಿ, ಸಮರ್ಥ ಇದೆ ಎಂಬುದನ್ನು ತೋರಿಸಿಕೊಟ್ಟಿದೆ. ಅದನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಂಡು ಮುನ್ನಡೆದರೆ ಜೀವನದಲ್ಲಿ ಉನ್ನತ ಸ್ಥಾನ ಪಡೆಯ ಬಹುದು ಎಂದು ತಿಳಿಸಿದರು.

ದಲಿತರ ಪಾಲಿಗೆ ಸ್ವಾಭಿಮಾನದ ಸಂಕೇತ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಧಾ ವೆಂಕಟೇಶ್‌ ಮಾತನಾಡಿ, ಕೋರೇಗಾಂವ್‌ ಯುದ್ಧದ ವಿಜಯೋತ್ಸವ ದಲಿತ ಹಾಗೂ ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಜಾಗೃತಿ ಪ್ರಜ್ಞೆ ಮೂಡಿಸಿವೆ. ಕೋರೇಗಾಂವ್‌ ಯುದ್ಧ ಐತಿಹಾಸಿಕವಾಗಿದೆ.

ಆದರೆ ಇತಿಹಾಸಕಾರರು ಕೋರೇಗಾಂವ್‌ ಯುದ್ಧ ಚರಿತ್ರೆಯನ್ನು ಯಾರಿಗೂ ತಿಳಿಯದಂತೆ ಮುಚ್ಚಿಡುವ ಕುತಂತ್ರ ನಡೆಸಿದ್ದಾರೆ. ಆದರೆ ಅದು ಅಂಬೇಡ್ಕರ್‌ಗೆ ತಿಳಿದ ನಂತರ ಅದರ ಮಹತ್ವ ಇಂದು ಪ್ರತಿಯೊಬ್ಬರಿಗೂ ಅರ್ಥವಾಗಿದೆ. ಗುಲಾಮಗಿರಿ ಮುಕ್ತಿಗಾಗಿ ಹೋರಾಡಿದ ಮಹರ್‌ ಸೈನಿಕರು ಪೇಶ್ವೆಗಳನ್ನು ಸೋಲಿಸಿದ್ದು, ಈ ಯುದ್ಧ ದಲಿತರ ಪಾಲಿಗೆ ಸ್ವಾಭಿಮಾನದ ಸಂಕೇತವಾಗಿದೆ ಎಂದರು.

ವೇದಿಕೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಗಾನ ಅಶ್ವತ್ಥ್, ಹಿರಿಯ ಜಿಲ್ಲಾ ಸಂಚಾಲಕ ನಾಗೇಶ್‌, ಮುಖಂಡರಾದ ರಾಮಚಂದ್ರ, ಸತೀಶ್‌, ವೆಂಕಟೇಶ್‌, ಮುನಿಕೃಷ್ಣ, ಚಿಕ್ಕಪ್ಪಯ್ಯ, ಶ್ರೀನಿವಾಸ್‌, ಶಿವಣ್ಣ, ಮುನಿರಾಜು, ಅಂಜಿ, ಅಂಗಟ್ಟ ರಾಜಪ್ಪ, ಆನಂದ್‌, ಗಂಗಾಧರ್‌ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕದಸಂಸ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕುತಂತ್ರದಿಂದ ಇಂದು ದಲಿತರ ಶಕ್ತಿ, ಸಮರ್ಥ್ಯವನ್ನು ದಮನ ಮಾಡುವ ಕೆಲಸ ಮಾಡಲಾಗುತ್ತಿದೆ. ರಾಜಕೀಯ ಅಧಿಕಾರ ಸಿಕ್ಕರೂ ದಲಿತರಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ. ಪ್ರಬುದ್ಧ ಭಾರತ ನಿರ್ಮಾಣಕ್ಕೆ ಹಾಗೂ ಅಂಬೇಡ್ಕರ್‌, ಬುದ್ಧ, ಬಸವಣ್ಣನ ಅಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು.
-ಡಾ.ಕೋಡಿರಂಗಪ್ಪ, ಚಿಂತಕರು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.