Tomato Price: ಮತ್ತೆ ಏರಿಕೆ ಕಂಡ ಟೊಮೆಟೋ ದರ!


Team Udayavani, Nov 9, 2023, 1:23 PM IST

tdy-12

ಚಿಕ್ಕಬಳ್ಳಾಪುರ: ಹಲವು ತಿಂಗಳ ಹಿಂದೆ ಟೊಮೆಟೋ 15 ಕೆಜಿ ಬಾಕ್ಸ್‌ ದಾಖಲೆಯ 2,000 ರೂ.ಗಡಿ ದಾಟಿ ಗ್ರಾಹಕರನ್ನು ತೀವ್ರ ಕಂಗಾಲಾಗಿಸಿ ಮತ್ತೆ ಪಾತಾಳಕ್ಕೆ ಕುಸಿದಿದ್ದ ಟೊಮೆಟೋ ದರ ಇದೀಗ ಮತ್ತೆ ಮಾರುಕಟ್ಟೆಯಲ್ಲಿ ದಿಢೀರ್‌ ಏರಿಕೆ ಕಂಡಿದೆ.

ಕೆಲ ದಿನಗಳ ಹಿಂದೆಯಷ್ಟೇ 15 ಕೆ.ಜಿ. ಬಾಕ್ಸ್‌ ಕೇವಲ 100, 150 ರೂಗೆ ಮಾರಾಟಗೊಂಡಿತ್ತು. ಈಗ ಎರಡು, ಮೂರು ದಿನಗಳಿಂದ ಮಾರುಕಟ್ಟೆಯಲ್ಲಿ ದರ ನಾಗಲೋಟದಲ್ಲಿ ಸಾಗಿದ್ದು 15 ಕೆ.ಜಿ. ಬಾಕ್ಸ್‌ 500 ರೂ.ಗಡಿ ದಾಟಿದ್ದು ಇನ್ನಷ್ಟು ಬೆಲೆ ಏರಿಕೆ ಆಗುವ ಸಾಧ್ಯತೆ ದಟ್ಟವಾಗಿದೆ.

15 ಕೆ.ಜಿ ಬಾಕ್ಸ್‌ ಟೊಮೆಟೋ ರೂ.450-500 : ಸದ್ಯ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೋ 15 ಕೆಜಿ ಬಾಕ್ಸ್‌ 400, 450 ರಿಂದ 500ರೂ. ವರೆಗೂ ಮಾರಾಟಗೊಂಡರೆ ಜಿಲ್ಲೆಯಲ್ಲಿ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆ ಹೊಂದಿರುವ ಚಿಂತಾಮಣಿಯಲ್ಲಿ ಬಾಕ್ಸ್‌ 500 ರೂ ವರೆಗೂ ಮಾರಾಟಗೊಂಡಿದೆ. ಟೊಮೆಟೋ ದರ ದಿಢೀರ್‌ ಏರಿಕೆಯಿಂದ ಒಂದು ಕಡೆ ಟೊಮೆಟೋ ಬೆಳೆಗಾರರಲ್ಲಿ ಸಂತಸ ಮೂಡಿದರೆ ಗ್ರಾಹಕರನ್ನು ತೀವ್ರ ಚಿಂತೆಗೀಡು ಮಾಡಿದೆ.

ಎರಡು, ತಿಂಗಳ ಹಿಂದೆ ಟೊಮೆಟೋ ದರ ವಿಪರೀತ ಏರಿಕೆಗೊಂಡು ದೇಶಾದ್ಯಾಂತ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಟೊಮೆಟೋಗೆ ಪರ್ಯಾಯವಾಗಿ ಹುಣಸೆ, ನಿಂಬೆ ಹಣ್ಣುಗಳನ್ನು ಬಳಸುವಂತಾಗಿತ್ತು. ಅಷ್ಟರ ಮಟ್ಟಿಗೆ ಟೊಮೆಟೋ ದರ ಗಗನಕ್ಕೇರಿತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ ಕೂಡ ಕೆಜಿ ಟೊಮೆಟೋ 200 ರೂ.ಗಡಿ ದಾಟಿತ್ತು. ಬಳಿಕ ಪಾತಾಳಕ್ಕೆ ಕುಸಿದಿದ್ದ ಟೊಮೆಟೋ ದರ ಇದೀಗ ಮತ್ತೆ ಮಾರುಕಟ್ಟೆಯಲ್ಲಿ ಪುಟಿದೇಳುತ್ತಿದ್ದು ದರ ಸಮರ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎನ್ನುವ ಆತಂಕ ಗ್ರಾಹಕರಲ್ಲಿ ಮೂಡಿಸಿದೆ.

ಒಟ್ಟಿನಲ್ಲಿ ದೀಪಾವಳಿ ಸಂಭ್ರಮದಲ್ಲಿರುವ ಗ್ರಾಹಕರಿಗೆ ಟೊಮೆಟೋ, ಈರುಳ್ಳಿ ಬೆಲೆ ಏರಿಕೆ ಚಿಂತೆ ಬಹುವಾಗಿ ಕಾಡುತ್ತಿದ್ದರೆ ಬರದಿಂದ ಕಂಗೆಟ್ಟಿರುವ ರೈತರಿಗೆ ಟೊಮೆಟೋ ದರ ದಿಢೀರ್‌ನೆ ಹೆಚ್ಚಳ ಕಂಡಿರುವುದರಿಂದ ಸಹಜವಾಗಿಯೆ ರೈತರಿಗೆ ದೀಪಾವಳಿ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ಟೊಮೆಟೋ ಕೆಜಿ 40,50 ರೂ.: ಮಾರುಕಟ್ಟೆಯಲ್ಲಿ 15 ಕೆಜಿ ಟೊಮೇಟೋ ಬಾಕ್ಸ್‌ 500 ರೂ. ಗಡಿ ತಲುಪಿರುವ ಬೆನ್ನಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಟೊಮೇಟೋ ದರ ಗ್ರಾಹಕರ ಕೈ ಕಚ್ಚುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೋ 40-50 ರೂಗೆ ಮಾರಾಟವಾಗುತ್ತಿದೆ. ತೀವ್ರ ಬರದ ಪರಿಣಾಮ ಟೊಮೆಟೋ ಅವಕ ಮಾರುಕಟ್ಟೆ ಕಡಿಮೆ ಬರುತ್ತಿದ್ದು ಮತ್ತೂಂದು ಕಡೆ ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದಾಗಿಯೆ ಟೊಮೆಟೋ ಬೆಳೆ ಸಾಕಷ್ಟು ಹಾನಿಯಾಗಿ ಅನೇಕ ರೋಗಗಳಿಗೆ ತೋಟಗಳು ತುತ್ತಾಗಿರುವ ಪರಿಣಾಮ ಟೊಮೆಟೋ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಕೆ.ಜಿ. ಈರುಳ್ಳಿ 110 ರೂ.ಗೆ ಮಾರಾಟ!: ಒಂದೂವರೆ ತಿಂಗಳ ಹಿಂದೆ 3 ಕೆಜಿ ಈರುಳ್ಳಿ 100 ರೂ.ಗೆ ಸಿಗುತ್ತಿತ್ತು. ಆದರೆ ಈಗ ಕೆಜಿ ಈರುಳ್ಳಿ 110 ರೂ. ಗಡಿ ತಲುಪಿದ್ದು ದೀಪಾವಳಿ ಸಂಭ್ರಮದಲ್ಲಿರುವ ಗ್ರಾಹಕರಿಗೆ ಈರುಳ್ಳಿ ಬೆಲೆ ಕಣ್ಣೀರು ತರಿಸುತ್ತಿದೆ. ತಿಂಗಳಿಂದ ಈರುಳ್ಳಿ ಬೆಲೆ ಮಾರುಕಟ್ಟೆಯಲ್ಲಿ ಏರುತ್ತಲೇ ಇದ್ದು ಕಡಿಮೆ ಆಗುವ ಸಾಧ್ಯತೆಗಳು ಇಲ್ಲವೇ ಇಲ್ಲ. ಏಕೆಂದರೆ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ಈರುಳ್ಳಿ ಪೂರೈಕೆ ಆಗುತ್ತಿಲ್ಲ. ಚಿಲ್ಲರೆ ವ್ಯಾಪಾರಿಗಳಿಗೂ ಕೂಡ ಈರುಳ್ಳಿ ಮಾರುಕಟ್ಟೆಯಲ್ಲಿ ಸಿಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಸದ್ಯ ಈರುಳ್ಳಿ ಕೆಜಿ 100 ರೂಗೆ ಮಾರಾಟ ಆಗುತ್ತಿದ್ದು ಈರುಳ್ಳಿ ಪೂರೈಕೆ ಆಗದಿದ್ದರೆ ಬೆಲೆ ಇನ್ನಷ್ಟು ಹೆಚ್ಚಳ ಆಗುವ ಆತಂಕ ಗ್ರಾಹಕರಲ್ಲಿ ಮನೆ ಮಾಡಿದೆ.

ಎರಡು ದಿನಗಳಿಂದ ಟೊಮೆಟೋ ದರ ಏರಿಕೆಗೊಂಡಿದೆ. 15 ಕೆಜಿ ಟೊಮೆಟೋ ಬಾಕ್ಸ್‌ ಎರಡು ಮೂರು ದಿನಗಳ ಹಿಂದೆ ಕೇವಲ 150, ಗುಣಮಟ್ಟದ ಟೊಮೆಟೋ 200 ರೂ ವರೆಗೂ ಮಾರಾಟ ಆಗುತ್ತಿತ್ತು. ಈಗ 15 ಕೆಜಿ ಟೊಮೆಟೋ ಬಾಕ್ಸ್‌ 500ರೂ.ವರೆಗೂ ಮಾರಾಟ ಆಗುತ್ತಿದೆ. ಟೊಮೆಟೋ ದರ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಮಂಜುನಾಥ, ಎಪಿಎಂಸಿ ವರ್ತಕ, ಚಿಕ್ಕಬಳ್ಳಾಪುರ

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.