![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 1, 2021, 5:32 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರಸಿದ್ಧ ನಂದಿಗಿರಿಧಾಮದ ರಸ್ತೆ ದುರಸ್ತಿ ಕಾರ್ಯ ಮುಗಿದಿದ್ದು, ಬುಧವಾರದಿಂದ ಪ್ರವಾಸಿಗರಿಗೆ ಮುಕ್ತ ಪ್ರವೇಶ ಒದಗಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಭೂ ಕುಸಿತದಿಂದ ಶಿಥಿಲಗೊಂಡು ನಂತರ ಮರು ನಿರ್ಮಾಣಗೊಂಡಿರುವ ನಂದಿಗಿರಿಧಾಮದ ರಸ್ತೆ, ಸೇತುವೆಯನ್ನು ಅ ಧಿಕಾರಿಗಳೊಂದಿಗೆ ಖುದ್ದು ಪರಿವೀಕ್ಷಣೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಮಳೆಯಿಂದಾಗಿ ಆಗಸ್ಟ್ ತಿಂಗಳಲ್ಲಿ ರಸ್ತೆ ಕುಸಿದಿತ್ತು.
ಈ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿ ಸಲಾಗಿತ್ತು. ಆದ್ಯತೆ ಮೇಲೆ ಈ ರಸ್ತೆ ದುರಸ್ತಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು. ಬುಧವಾರದಿಂದಲೇ ನಂದಿಗಿರಿಧಾಮವು ಸಾರ್ವಜನಿಕರು, ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾ ಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಗಿರಿಧಾಮದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ, ವಾರಾಂತ್ಯದ ಶನಿವಾರ, ಭಾನುವಾರದಂದು ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.
ಜಿಲ್ಲೆಯ ಅತ್ಯಮೂಲ್ಯವಾದ ಆಸ್ತಿ: ಗಿರಿಧಾಮದ ಹೋಟೆಲ್, ವಸತಿ ಗೃಹಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ವಾರಾಂತ್ಯದ ದಿನಗಳಂದು ಪ್ರವೇಶ ಇರುತ್ತದೆ. ಪ್ರಕೃತಿ ರಮಣೀಯತೆ, ಸಸ್ಯಗಳು, ಜೀವವೈವಿಧ್ಯತೆ ಕಾರಣದಿಂದ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದು ವಿಶಿಷ್ಟವಾಗಿ ಗುರುತಿಸಿಕೊಂಡಿರುವ ನಂದಿಗಿರಿಧಾಮ ಜಿಲ್ಲೆಯ ಅತ್ಯಮೂಲ್ಯವಾದ ಆಸ್ತಿ ಮತ್ತು ಹೆಮ್ಮೆಯಾಗಿದೆ.
ನೈರ್ಮಲ್ಯಕ್ಕೆ ಆದ್ಯತೆ ನೀಡಿ: ಈ ಸುಪ್ರಸಿದ್ಧ ಪ್ರವಾಸಿ ತಾಣದಲ್ಲಿ ಸಾರ್ವಜನಿಕರು, ಪ್ರವಾಸಿಗರು ಸ್ವತ್ಛತೆ ಕಾಪಾಡುವ ಮೂಲಕ ಗಿರಿಧಾಮದ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಜಿಲ್ಲಾಡಳಿತ ಈಗಾಗಲೇ ನಂದಿಗಿರಿಧಾಮದಲ್ಲಿ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಅನ್ನು ನಿಷೇಧಿ ಸಿ ಆದೇಶ ಹೊರಡಿಸಿದೆ. ಗಿರಿಧಾಮಕ್ಕೆ ಬರುವವರೆಲ್ಲರೂ ಈ ಎಲ್ಲಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.
ಕೋವಿಡ್ ಮಾರ್ಗಸೂಚಿ ಪಾಲಿಸಿ: ಅಲ್ಲದೆ, ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲಿಸು ವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಪಾಲಿಸಬೇಕಾಗಿದೆ ಎಂದು ಜಿಲ್ಲಾ ಧಿಕಾರಿ ಆರ್.ಲತಾ ಮನವಿ ಮಾಡಿದ್ದಾರೆ.
ವಾಹನಗಳಿಗೆ ಮಿತಿ: ಗಿರಿಧಾಮಕ್ಕೆ ಬರುವ ವಾಹನಗಳ ಸಂಖ್ಯೆಗೆ ಮಿತಿ ಹೇರಲಾಗಿದೆ. ಗಿರಿಧಾಮದ ವಾಹನ ನಿಲುಗಡೆ ಪ್ರದೇಶದಲ್ಲಿನ ಸ್ಥಳಾವಕಾಶಕ್ಕೆ ಅನುಗುಣವಾಗಿ 350 ನಾಲ್ಕು ಚಕ್ರ, 1500 ದ್ವಿಚಕ್ರ ವಾಹನವನ್ನು ಗಿರಿಧಾಮದ ಕೆಳಭಾಗದಲ್ಲಿರುವ ಮುಖ್ಯ ಪ್ರವೇಶದ್ವಾರದಲ್ಲಿಯೇ ತಪಾಸಣೆ ನಡೆಸಿ, ಪಾಸ್ ಹೊಂದಿರುವವರಿಗೆ ಮಾತ್ರ ಬಿಡಲಾಗುವುದು. ಗಿರಿಧಾಮದ ಪ್ರವೇಶ ಬಯಸುವವರು ಪಾಸ್ಗಳನ್ನು ಹೊಂದುವುದು ಕಡ್ಡಾಯವಾಗಿದೆ. ಪಾಸ್ ವಿತರಿಸಲು ಆನ್ಲೈನ್, ಆಫ್ಲೈನ್ ಎರಡೂ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಮಾರ್ಗಸೂಚಿ ಉಲ್ಲಂಘಿಸಿದ್ರೆ ದಂಡ: ಎಸ್ಪಿ ಜಿ. ಕೆ.ಮಿಥುನ್ಕುಮಾರ್ ಮಾತನಾಡಿ, ಈ ಹಿಂದೆ ನಂದಿಗಿರಿಧಾಮದಲ್ಲಿ ಜಾರಿಯಲ್ಲಿದ್ದ ಪೊಲೀಸ್ ಗಸ್ತನ್ನು ಬುಧವಾರದಿಂದ ಮುಂದುವರಿಸ ಲಾಗುವುದು. ವಾರಾಂತ್ಯ ಸೇರಿ ಎಲ್ಲಾ ದಿನಗಳಲ್ಲಿಯೂ ನಂದಿಗಿರಿಧಾಮದಲ್ಲಿ ಪೊಲೀಸ್ ಬಂದೋಬಸ್ತ್ ಇರಲಿದೆ. ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಿ ಧಿಸಲಾಗುವುದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನೀತಿ ನಿಯಮ ಪಾಲಿಸಿ: ಗಿರಿಧಾಮದ ತಪ್ಪಲಿನ ಪ್ರವೇಶ ದ್ವಾರದಲ್ಲಿಯೂ ಈ ಹಿಂದಿನಂತೆ ವಾಹನಗಳ ತಪಾಸಣೆ ನಡೆಯಲಿದೆ. ಗಿರಿಧಾಮದ ಪ್ರವೇಶಕ್ಕೆ ಸರ್ಕಾರ ನೀಡಿರುವ ಎಲ್ಲಾ ನೀತಿ ನಿಯಮಗಳನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಿದೆ ಎಂದು ತಿಳಿಸಿದರು. ತಹಶೀಲ್ದಾರ್ ಗಣಪತಿಶಾಸ್ತ್ರಿ, ಪಿಡಬ್ಲೂéಡಿ ಕಾರ್ಯಪಾಲಕ ಅಭಿಯಂತರ ತಿಮ್ಮರಾಯಪ್ಪ, ನಂದಿಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್, ವಿವಿಧ ಇಲಾಖೆ ಅ ಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.