ಬೆಳ್ಳಿ ಮೋಡಗಳ ಜತೆ ಮಿಂದೇಳುವ ಪ್ರವಾಸಿಗರು


Team Udayavani, Jul 24, 2023, 1:56 PM IST

TDY-12

ಚಿಕ್ಕಬಳ್ಳಾಪುರ: ಚುಮು ಚುಮು ಚಳಿ, ಹಸಿರು ಕಾನನದ ಮಧ್ಯೆ ಅಪ್ಪಳಿಸುವ ತಂಪಾದ ಗಾಳಿ, ಮೋಡ ಕವಿದ ವಾತಾವರಣಕ್ಕೆ ಆಗಾಗ ಕಾಣದಂತೆ ಮಾಯವಾಗುವ ನಂದಿಗಿರಿ, ಬೆಳ್ಳಿ ಮೋಡಗಳ ನಡುವೆ ಪ್ರೇಮಿಗಳ ಕಲರವ, ಅಲ್ಲೆಲ್ಲೋ ಕೂಗುವ ಪಕ್ಷಿಗಳ ನಿನಾದ…ವಾವ್‌!. – ಜಿಲ್ಲೆಯ ನಂದಿಗಿರಿಧಾಮ ದಲ್ಲಿ ವಾರಾಂತ್ಯದ ಭಾನುವಾರ ಕಂಡು ಬಂದ ದೃಶ್ಯಗಳಿವು.

ಪ್ರಾಕೃತಿಕ ಸೊಬಗು: ಕಳೆದ 2-3 ದಿನದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಪಾರ ಸಸ್ಯ ಸಂಕುಲ ವನ್ನು ತನ್ನ ಮಡಲಿನಲ್ಲಿ ಇಟ್ಟುಕೊಂಡು ಕಂಗೊಳಿಸುತ್ತಿ ರುವ ನಂದಿಗಿರಿಧಾಮದ ಪ್ರಾಕೃತಿಕ ಸೊಬಗು ಸವಿಯಲು ಪ್ರವಾಸಿಗರು ಹಾತೊರೆಯುತ್ತಿ ದ್ದಾರೆ. ಸಮುದ್ರ ಮಟ್ಟದಿಂದ ಬರೋಬ್ಬರಿ 4,800ಕ್ಕೂ ಅಧಿಕ ಅಡಿಗಳಷ್ಟು ಎತ್ತರ ಇರುವ ನಂದಿಗಿರಿ ತಂಪಾದ ಗಾಳಿ, ಪ್ರಶಾಂತವಾದ ವಾತಾವರಣಕ್ಕೆ ಹೇಳಿ ಮಾಡಿಸಿದ ಸ್ಥಳ. ಒಂದು ರೀತಿಯಲ್ಲಿ ಪ್ರವಾಸಿಗರ, ಪ್ರೇಮಿಗಳ ಪಾಲಿಗೆ ಸ್ವರ್ಗವಿದ್ದಂತೆ. ಮಳೆಗಾಲ ಶುರುವಾಗುತ್ತಿದ್ದಂತೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಜಾಗತಿಕವಾಗಿ ವಿಶ್ವ ವಿಖ್ಯಾತ ನಂದಿಗಿರಿಧಾಮ ಅನೇಕ ಐತಿಹಾಸಿಕ ಸ್ಥಳಗಳ ಜತೆಗೆ ಅಪಾರ ಸಸ್ಯ ಕಾಶಿಯನ್ನೂ ಹೊಂದಿದೆ. ಬಡವರ ಪಾಲಿನ ಊಟಿಯೆಂದೇ ಪ್ರಸಿದ್ಧಿ ಪಡೆದ ನಂದಿಗಿರಿಧಾಮ ಮಳೆಗಾಲದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತದೆ.

ರಾಜ್ಯದ ವಿವಿಧೆಡೆಯಿಂದ ಆಗಮನ: ರಾಜ್ಯಧಾನಿ ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ನಂದಿಗಿರಿಧಾಮ ವೀಕ್ಷಣೆಗೆ ಬರುತ್ತಿದ್ದಾರೆ. ಇತ್ತೀಚೆಗೆ ಅಷ್ಟೇ ನಂದಿಗಿರಿಧಾಮವನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸಂಪೂರ್ಣವಾಗಿ ನವೀಕರಿಸಿದ ಬಳಿಕ ಹೊಸ ರೂಪ ಪಡೆದ ನಂದಗಿರಿಧಾಮಕ್ಕೆ ಪ್ರವಾಸಿಗರ ಆಗಮನ ಹೆಚ್ಚಾಗಿದೆ. ಅದರಲ್ಲೂ ಮಳೆ ಸುರಿಯುವ ವೇಳೆ ಬೆಳ್ಳಂ ಬೆಳಗ್ಗೆ ಪ್ರವಾಸಿಗರು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಬೈಕ್‌, ಕಾರುಗಳಲ್ಲಿ ಆಗಮಿಸುತ್ತಿದ್ದಾರೆ.

ಎಲ್ಲವೂ ಅಂದ, ಚೆಂದ: ನಂದಿಗಿರಿಧಾಮದಲ್ಲಿರುವ ಟಿಪ್ಪು ಡ್ರಾಪ್‌ನಿಂದ ಹಿಡಿದು ಐತಿಹಾಸಿಕ ಕಲ್ಯಾಣಿ, ನೆಹರು ನಿಲಯ, ಗಾಂಧಿ ನಿಲಯ, ಯೋಗನರಸಿಂಹ ಸ್ವಾಮಿ ದೇವಾಲಯ ವೀಕ್ಷಣೆ ಜತೆಗೆ ಗಿರಿಧಾಮದ ಮೇಲಿಂದ ಸುತ್ತಲೂ ಕಾಣುವ ಪಂಚಗಿರಿ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಗಿರಿಧಾಮ ಹಸಿರು ಕಾನನ ಮಧ್ಯೆ ತಮ್ಮ ಲೋಕದಲ್ಲಿ ವಿರಮಿಸಿ ನಂದಿ ಭೇಟಿಯನ್ನು ಅವಿಸ್ಮರಣೀಯವಾಗಿಸಿಕೊಳ್ಳುತ್ತಿದ್ದಾರೆ.

ಆನ್‌ಲೈನ್‌ ಬುಕ್ಕಿಂಗ್‌: ನಂದಿಗಿರಿಧಾಮ ಪ್ರವೇಶ ಸುಗಮಗೊಳಿಸಿರುವ ಪ್ರವಾಸೋದ್ಯಮ ಇಲಾಖೆ, ಪ್ರವಾಸಿಗರ ಅನುಕೂಲಕ್ಕಾಗಿ ಪ್ರವೇಶ ಪಡೆ ಯುವುದಕ್ಕೆ ಆನ್‌ಲೈನ್‌ ಬುಕ್ಕಿಂಗ್‌ ವ್ಯವಸ್ಥೆ ಮಾಡಿದೆ. ಬೆಳಗ್ಗೆ 5ಕ್ಕೆ ನಂದಗಿರಿಧಾಮ ಪ್ರವೇಶ ದ್ವಾರ ಪ್ರವಾಸಿಗರಿಗೆ ಮುಕ್ತವಾಗಲಿದ್ದು ಅದಕ್ಕೂ ಮುಂಚೆಯೇ ಪ್ರವಾಸಿಗರು ನಂದಿ ವೀಕ್ಷಣೆಗೆ ಬರುತ್ತಿದ್ದಾರೆ. ಇನ್ನೂ ಪ್ರವಾಸಿಗರ ದಟ್ಟಣೆ ಪರಿಣಾಮ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಟ್ರಾಫಿಕ್‌ ಕಿರಿಕಿರಿ ಉಂಟಾಗುತ್ತಿದೆ.

ನಿನ್ನೆ 18,567 ಮಂದಿ, 3 ಸಾವಿರ ಬೈಕ್‌, 1,200 ಕಾರು: ಭಾನುವಾರ ಒಂದೇ ದಿನ ನಂದಿಗಿರಿಗೆ ಬರೋಬ್ಬರಿ 18,567 ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಸಾಮಾನ್ಯವಾಗಿ ವಾರಾಂತ್ಯದಲ್ಲಿ 10 ರಿಂದ 12 ಸಾವಿರ ಮಂದಿ ಆಗಮಿಸುತ್ತಾರೆ. ಆದರೆ, ಮಳೆಗಾಲ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನಿನ್ನೆ ಒಂದೇ ದಿನ ನಂದಿಗಿರಿಧಾಮಕ್ಕೆ ಒಟ್ಟು 3 ಸಾವಿರ ಬೈಕ್‌, 1,200 ಕಾರು ಬಂದಿದ್ದವೆಂದು ನಂದಿಗಿರಿಧಾಮದ ವಿಶೇಷ ಅಧಿಕಾರಿ ಮಂಜುನಾಥ “ಉದಯವಾಣಿ’ಗೆ ತಿಳಿಸಿದರು.

ಮಳೆಗಾಲದಲ್ಲಿ ಹರಿದು ಬರುವ ಆದಾಯ: ಮಳೆಗಾಲದಲ್ಲಿ ಸಹಜವಾಗಿಯೇ ನಂದಿಗಿರಿಧಾಮಕ್ಕೆ ರಾಜ್ಯದ ವಿವಿಧೆಡೆಯಿಂದ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೀಗಾಗಿ ಪ್ರವಾಸೋದ್ಯಮ ಇಲಾಖೆಗೆ ಆದಾಯವೂ ಹೆಚ್ಚಾಗಿ ಬರಲಿದೆ. ದಿನನಿತ್ಯ ನೂರಾರು ಬೈಕ್‌, ಕಾರುಗಳಲ್ಲಿ ಪ್ರವಾಸಿಗರು ಬರುವುದರಿಂದ ಪಾರ್ಕಿಂಗ್‌ ಶುಲ್ಕದಿಂದ ಲಕ್ಷಾಂತರ ರೂ., ಆದಾಯ ಸಂಗ್ರಹವಾಗುತ್ತಿದೆ. ಹಾಗೆಯೇ ಪ್ರವಾಸಿಗರ ಪ್ರವೇಶಕ್ಕೂ ತಲಾ 20 ರೂ, ಶುಲ್ಕ ಇದ್ದರೆ ಕಾರು, ಬೈಕ್‌ಗೆ ದಿನಕ್ಕೆ 60 ರೂ, ಪಾರ್ಕಿಂಗ್‌ ಶುಲ್ಕ ಸಂಗ್ರಹವಾಗುತ್ತಿದೆ.

ವಾರಾಂತ್ಯದಲ್ಲಿ ಪ್ರವಾಸಿಗರ ಪ್ರವಾಹ:‌ ಪ್ರತಿ ವಾರಾಂತ್ಯದಲ್ಲಿ ಪ್ರವಾಸಿಗರ ದಂಡು ನಂದಿಗಿರಿಧಾಮಕ್ಕೆ ಹರಿದು ಬರುತ್ತದೆ. ವಿಶೇಷ ವಾಗಿ ಐಟಿ, ಬಿಟಿ ಉದ್ಯೋಗಿಗಳು, ಶಾಲಾ, ಕಾಲೇಜು ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಕನಿಷ್ಠ 10 ರಿಂದ 15 ಸಾವಿರ ಮಂದಿ ಪ್ರವಾಸಿಗರು ನಂದಿಗಿರಿ ಧಾಮಕ್ಕೆ ವಾರಾಂತ್ಯದಲ್ಲಿ ಭೇಟಿ ನೀಡಿ ಗಿರಿ ಧಾಮದ ಸೌಂದರ್ಯ ಆಸ್ವಾಧಿಸಿ ಹೋಗುತ್ತಾರೆ.

ವ್ಯೂ ಪಾಯಿಂಟ್‌ಗಳಲ್ಲಿ ಕಿಕ್ಕಿರಿದ ಪ್ರವಾಸಿಗರು: ನಂದಿಗಿರಿಧಾಮ ಸೌಂದರ್ಯ ಸವಿಯಲು ಗಿರಿಧಾಮದಲ್ಲಿನ ವ್ಯೂ ಪಾಯಿಂಟ್‌ಗಳಿಗೆ ಪ್ರವಾಸಿಗರು ಕಿಕ್ಕಿರಿದು ಸೇರುತ್ತಿದ್ದಾರೆ. ಬೆಳಗ್ಗೆ ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದವರೆಗೂ ಈ ವ್ಯೂ ಪಾಯಿಂಟ್‌ ಗಳಲ್ಲಿ ತುಂಬಿರುತ್ತಾರೆ. ಈ ವೇಳೆ ಪ್ರವಾಸಿಗರು ಬೆಟ್ಟದ ಸೌಂದರ್ಯದ ಜತೆಗೆ ತಮ್ಮ ಮೊಬೈಲ್‌ ಗಳಲ್ಲಿ ಸೆಲ್ಫಿ ತೆಗೆದುಕೊಂಡು ಆನಂದಿಸುತ್ತಿದ್ದಾರೆ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.