Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ


Team Udayavani, Sep 27, 2024, 4:15 PM IST

0421472757

ಚಿಕ್ಕಬಳ್ಳಾಪುರ: ತನ್ನ ಪ್ರಾಕೃತಿಕ ಸೌಂದರ್ಯದ ಮೂಲಕ ದೇಶ, ವಿದೇಶಿಗರ ಗಮನ ಸೆಳೆದಿರುವ ಜಿಲ್ಲೆಯ ಮುಕುಟ ಮಣಿ ವಿಶ್ವ ವಿಖ್ಯಾತ ನಂದಿಗಿರಿ ಧಾಮಕ್ಕೆ ಪ್ರವಾಸಿಗರ ಭೇಟಿ ವರ್ಷದಿಂದ ವರ್ಷಕ್ಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಕಂಡಿದೆ.

ಹೌದು, ಜಿಲ್ಲೆಯ ಹಿರಿಮೆ, ಗರಿಮೆಯನ್ನು ಹೆಚ್ಚಿಸಿ ಗಮನ ಸೆಳೆದಿರುವ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಬಡವರ ಪಾಲಿನ ಊಟಿ, ಸುಮಾರು ಸಮುದ್ರ ಮಟ್ಟದಿಂದ ಬರೋಬ್ಬರಿ 4200 ಅಡಿಯಷ್ಟು ಎತ್ತರದಲ್ಲಿರುವ ಗಿರಿಧಾಮದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಗಾಂಧೀಜಿ ರವರ ವಿಶ್ರಾಂತಿಗೆ ಪ್ರಾಶಸ್ತ್ಯವಾಗಿತ್ತು ಎನ್ನುವುದು ವಿಶೇಷ.

ಹಲವು ವರ್ಷಗಳಿಂದ ಈಚೆಗೆ ನಂದಿಗಿರಿಧಾಮ ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುವ ಮೂಲಕ ಪ್ರತಿ ವಾರಾಂತ್ಯದಲ್ಲಿ ಗಿರಿಧಾಮ ವೀಕ್ಷಣೆಗೆ ವಿದೇಶಿಗರು ಸೇರಿದಂತೆ ಪ್ರವಾಸಿಗರು ಪ್ರವಾಹ ದಂತೆ ಹರಿದು ಬರುತ್ತಿದ್ದಾರೆ. ಕಳೆದ 2023 ರಲ್ಲಿ ನಂದಿಗಿರಿಧಾಮಕ್ಕೆ 14,62,755 ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ.

ಈ ವರ್ಷ ಜನವರಿಂದ ಜೂನ್‌ವರೆಗೂ ಒಟ್ಟು 11,49,682 ಮಂದಿ ಭೇಟಿ ನೀಡಿದ್ದು, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ನೀಡಿರುವ ಪ್ರಕಾರ ಈ ವರ್ಷಾಂತ್ಯಕ್ಕೆ ನಂದಿಗರಿಧಾಮಕ್ಕೆ ಪ್ರವಾಸಿಗರ ಭೇಟಿ 23 ಲಕ್ಷದಷ್ಟು ದಾಟುವ ಸಾಧ್ಯತೆ ಇದೆ ಎನ್ನುತ್ತಾರೆ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಯಶವಂತ್‌ ಕುಮಾರ್‌. 2023 ರಲ್ಲಿ ಒಟ್ಟು 3027 ಮಂದಿ ವಿದೇಶಿಗರು ನಂದಿಗಿರಿಧಾಮಕ್ಕೆ ಆಗಮಿಸಿದ್ದರು. ಈ ವರ್ಷ ಜೂನ್‌ ವರೆಗೂ 3015 ಮಂದಿ ವಿದೇಶಿಗರು ನಂದಿಬೆಟ್ಟಕ್ಕೆ ಆಗಮಿಸಿದ್ದಾರೆ.

ಇನ್ನೂ ನಂದಿಬೆಟ್ಟಕ್ಕೆ ಮಳೆಗಾಲದಲ್ಲಿ ಹೆಚ್ಚು ಪ್ರವಾಸಿಗರು ಹಾಗೂ ವಿದೇಶಿಗರು ಆಗಮಿಸುತ್ತಾರೆ. ನಂದಿಬೆಟ್ಟದಲ್ಲಿ ಸೆಪ್ಪೆಂಬರ್‌ನಿಂದ ಡಿಸೆಂಬರ್‌ ವರೆಗೂ ಹೆಚ್ಚು ಪ್ರವಾಸಿಗರು ಬರುತ್ತಾರೆ. ಕಾರಣ ಈ ಅವಧಿಯಲ್ಲಿ ನಂದಿಯಲ್ಲಿ ಹವಮಾನ ಭಿನ್ನವಾಗಿರುತ್ತದೆ. ಅದರಲ್ಲೂ ಬೆಳ್ಳಿ ಮೋಡಗಳು ಕಲರವ ಹೆಚ್ಚಿರುತ್ತದೆ. ಕಣ್ಣಂಚಿನಲ್ಲಿ ಫಾಗ್‌ ಚಲಿಸುವುದರಿಂದ ಸುರ್ಯೋದಯ ವೀಕ್ಷಣೆ ನೋಡುವುದೇ ಇಲ್ಲಿ ಒಂದು ಅದ್ಬುತ ಎನ್ನಬಹುದು.

ಜಿಲ್ಲೆಗೆ ವರ್ಷ ಒಟ್ಟು 38.42 ಲಕ್ಷ ಪ್ರವಾಸಿಗರು ಭೇಟಿ: ಜಿಲ್ಲೆಯಲ್ಲಿನ ನಂದಿಗಿರಿಧಾಮ, ಮುದ್ದೇನಹಳ್ಳಿ, ನಂದಿ ಬೋಗನಂದೀಶ್ವರ, ರಂಗಸ್ಥಳ, ಅವಲಬೆಟ್ಟ, ಗೌರಬಿದನೂರಿನ ವಿದುರಾಶ್ವತ್ಥ, ಗುಡಿಬಂಡೆ ಅಮಾನಿ ಬೈರಸಾಗರ ಕೆರೆ, ಗುಮ್ಮನಾಯಕನಪಾಳ್ಯ, ಮುರಗಮಲ್ಲ ದರ್ಗಾ, ಕೈವಾರ, ಗಡಿದಂ, ಎಲ್ಲೋಡು, ತಲಕಾಯಲಬೆಟ್ಟ, ಮಿಣಕನಗುರ್ಕಿ ಮಹೇಶ್ವರಿ ಸೇರಿ ಒಟ್ಟು 14 ಪ್ರವಾಸಿ ತಾಣಗಳಿಗೆ ಕಳೆದ 2023 ರಲ್ಲಿ ಒಟ್ಟು 60.31 ಲಕ್ಷ ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಈ ವರ್ಷ 2024 ರಲ್ಲಿ ಜನವರಿಯಿಂದ ಜೂನ್‌ ವರೆಗೂ 38.42 ಲಕ್ಷ ಮಂದಿ ಭೇಟಿ ನೀಡಿದ್ದಾರೆ. ವಷಾìಂತ್ಯಕ್ಕೆ 70 ಲಕ್ಷ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆ ಇದೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Police

Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tirupati ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ತುಪ್ಪ ಗುಣಮಟ್ಟ ಪರಿಶೀಲನೆ ಆರಂಭ

Tirupati ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ತುಪ್ಪ ಗುಣಮಟ್ಟ ಪರಿಶೀಲನೆ ಆರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Anandapura:ಮೆಟ್ರಿಕ್ ಪೂರ್ವ ಬಾಲಕಿಯ ವಿದ್ಯಾರ್ಥಿನಿಲಯಕ್ಕೆ ಶಿವಮೊಗ್ಗ ಸಿ.ಎಸ್ ದಿಢೀರ್ ಭೇಟಿ

Anandapura:ಮೆಟ್ರಿಕ್ ಪೂರ್ವ ಬಾಲಕಿಯ ವಿದ್ಯಾರ್ಥಿನಿಲಯಕ್ಕೆ ಶಿವಮೊಗ್ಗ ಸಿ.ಎಸ್ ದಿಢೀರ್ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.