ಬಿತ್ತನೆ ಮುನ್ನ ಬೀಜೋಪಚಾರ ಮಾಡಿ
Team Udayavani, Jul 7, 2020, 7:29 AM IST
ಚಿಕ್ಕಬಳ್ಳಾಪುರ: ರೈತರು ಖುಷ್ಕಿಯಲ್ಲಿ ಬಿತ್ತನೆಗೂ ಮೊದಲು ಬೀಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ಬೀಜದಿಂದ ಹರಡುವ ಎಲ್ಲಾ ರೀತಿಯ ರೋಗಗಳನ್ನು ತಡೆಗಟ್ಟಬಹುದು. ಜೊತೆಗೆ ಮೊಳಕೆಯ ಪ್ರಾರಂಭಿಕ ಹಂತದಲ್ಲಿ ಮಣ್ಣಿನಿಂದ ಹರಡುವ ರೋಗಗಳಿಂದಲೂ ಸಹ ರಕ್ಷಿಸಬಹುದು ಎಂದು ಕುರುಬೂರು ರೇಷ್ಮೆ ಕೃಷಿ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ದೇವರಾಜ್ ತಿಳಿಸಿದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಚಟುವಟಿಕೆ ಮತ್ತು ಬಿತ್ತನೆ ಕಾರ್ಯ ಬಿರುಸಿನಿಂದ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಬೀಜೋಪಚಾರದ ಮಹತ್ವದ ಬಗ್ಗೆ ಉದಯವಾಣಿಗೆ ಮಾಹಿತಿ ನೀಡಿದ್ದು, ರೈತನಿಗೆ ಗುಣಮಟ್ಟದ ಬಿತ್ತನೆ ಬೀಜವು ಹೆಚ್ಚಿನ ಇಳುವರಿ ಪಡೆಯಲು ತುಂಬಾ ಸಹಕಾರಿಯಾಗುತ್ತದೆ ಎಂದರು.
ಉತ್ತಮ ಗುಣಮಟ್ಟದ ಬಿತ್ತನೆ ಬೀಜವೆಂದರೆ ಭೌತಿಕವಾಗಿ ಶುದ್ಧವಾಗಿದ್ದು, ಶೇ.80 ಕ್ಕಿಂತ ಮೇಲ್ಪಟ್ಟು ಮೊಳಕೆಯೊಡೆಯುವ ಶಕ್ತಿ ಹೊಂದಿರಬೇಕು. ನಿಗದಿತ ಪ್ರಮಾಣದಲ್ಲಿ ತೇವಾಂಶ ಹೊಂದಿದ್ದು, ಬಹುಮುಖ್ಯವಾಗಿ ರೋಗ ಹಾಗೂ ಕೀಟಬಾಧೆಯಿಂದ ಮುಕ್ತವಾಗಿರಬೇಕು. ಬೀಜೋಪಚಾರದಿಂದ ರೋಗ ಮತ್ತು ಕೀಟಗಳಿಂದ ರಕ್ಷಣೆಗೊಂಡ ಬೀಜಗಳು ಆರೋಗ್ಯವಂತ ಸಸಿಗಳನ್ನು ನೀಡುತ್ತವೆ.
ಕಡಿಮೆ ಖರ್ಚಿನಲ್ಲಿ ರೈತನಿಗೆ ಹೆಚ್ಚಿನ ಇಳುವರಿ ಮತ್ತು ಆದಾಯ ದೊರೆಯುತ್ತದೆ ಎಂದರು. ಆದ್ದರಿಂದ ರೈತರು ರಾಗಿ, ನೆಲಗಡಲೆ, ತೊಗರಿ, ಅಲಸಂದಿ ಸೇರಿದಂತೆ ಎಲ್ಲ ರೀತಿಯ ಬಿತ್ತನೆ ಬೀಜಗಳನ್ನು ಬೀಜೋಪಚಾರ ಮಾಡಿ ಬಿತ್ತನೆ ಮಾಡಬೇಕೆಂದು ಸೂಚಿಸಿದ್ದಾರೆ. ಮಾಹಿತಿಗಾಗಿ ಮೊಬೈಲ್ ನಂ 9480386651 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!
Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ
Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್ಗೆ 1.22 ಕೋಟಿ ದಂಡ
Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್!
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.