![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 26, 2020, 7:39 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಅರ್ಭಟ ಮುಂದುವರೆದಿದೆ. ಭಾನುವಾರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಒಟ್ಟು 30ಕ್ಕೆ ಏರಿಕೆಯಾಗಿದೆ.
ಭಾನುವಾರ ಹೊಸದಾಗಿ 81 ಪಾಸಿಟೀವ್ ಪ್ರಕರಣಗಳು ಕಂಡು ಬಂದಿದ್ದು ಈ ಮೂಲಕ ಜಿಲ್ಲೆಯಲ್ಲಿ ಸೋಂಕುಪೀಡಿತರ ಒಟ್ಟು 1,439ಕ್ಕೆ ಏರಿಕೆ ಕಂಡಿದೆ.
81 ಹೊಸ ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರ 23, ಬಾಗೇಪಲ್ಲಿ 12, ಚಿಂತಾಮಣಿ 15, ಗೌರಿಬಿದನೂರು 11, ಗುಡಿಬಂಡೆ 10, ಶಿಡ್ಲಘಟ್ಟದಲ್ಲಿ 10 ಪ್ರಕರಣಗಳು ಕಂಡು ಬಂದಿವೆ. ಇದರ ನಡುವೆ ಚಿಕ್ಕಬಳ್ಳಾಪುರ ಹಾಗೂ ಬಾಗೇಪಲ್ಲಿಯಲ್ಲಿ ಸೋಂಕಿತರು ಇಬ್ಬರು ಚಿಕಿತ್ಸೆ ಫಲಿಸದೇ ಕೋವಿಡ್ಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಸಂಖ್ಯೆ ಹೆಚ್ಚಳ ಆಗುತ್ತಲೇ ಇದ್ದು ವಾರದಿಂದ ಈಚೆಗೆ ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವುದು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ದಿಗ್ಬ್ರಮೆ ಮೂಡಿಸಿದೆ.
ಇದುವರೆಗೂ 1,439 ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರ 480, ಬಾಗೇಪಲ್ಲಿ 196, ಚಿಂತಾಮಣಿ 225, ಗೌರಿಬಿದನೂರು 337, ಗುಡಿಬಂಡೆ 68, ಶಿಡ್ಲಘಟ್ಟದಲ್ಲಿ 133 ಪ್ರಕರಣಗಳು ದಾಖಲಾಗಿವೆ, ಇನ್ನೂ ಸಾವಿನ ಪ್ರಮಾಣದಲ್ಲಿ ಒಟ್ಟು 30 ರಲ್ಲಿ ಚಿಕ್ಕಬಳ್ಳಾಪುರ 13, ಬಾಗೇಪಲ್ಲಿ 3, ಚಿಂತಾಮಣಿ 2, ಗೌರಿಬಿದನೂರು 9, ಗುಡಿಬಂಡೆ 1 ಹಾಗೂ ಶಿಡ್ಲಘಟ್ಟದಲ್ಲಿ 2 ಸಾವಿನ ಪ್ರಕರಣಗಳು ಸಂಭವಿಸಿವೆ.
30 ಮಂದಿ ಡಿಸ್ಚಾರ್ಜ್:
ಜಿಲ್ಲೆಯಲ್ಲಿ ಭಾನುವಾರ ಒಟ್ಟು 30 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು ಇದುವರೆಗೂ ಒಟ್ಟಾರೆ 1,439 ಸೋಂಕಿತರಲ್ಲಿ 651 ಮಂದಿ ಬಿಡುಗಡೆ ಹೊಂದಿ ಇನ್ನೂ 757 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
You seem to have an Ad Blocker on.
To continue reading, please turn it off or whitelist Udayavani.